ಅಭಿವೃದ್ಧಿ ಹೆಸರಲ್ಲಿ ಕೆರೆ ನಾಶ : ಬಿಬಿಎಂಪಿ ವಿರುದ್ಧ ಕಿಶೋರ್‌ ಆಕ್ರೋಶ

Date:

Advertisements

ಸಾವಿರ ವರ್ಷಗಳ ಇತಿಹಾಸವಿರುವ ದೇವರಕೆರೆ

ಐತಿಹಾಸಿಕ ಕೆರೆಗೆ ಹರಿದು ಬರುತ್ತಿದೆ ಕೊಳಚೆ ನೀರು

ರಿಯಲ್‌ ಎಸ್ಟೇಟ್‌ ಹಾವಳಿಗೆ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೆರೆಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂಬ ಕೂಗು ಆಗಾಗ ಕೇಳಿ ಬರುತ್ತಲೇ ಇರುತ್ತದೆ. ಈ ನಡುವೆ ನಗರದಲ್ಲಿರುವ ಸಾವಿರ ವರ್ಷಗಳ ಇತಿಹಾಸವುಳ್ಳ ʼದೇವರಕೆರೆʼಯನ್ನು ಬಿಬಿಎಂಪಿ ನಾಶ ಮಾಡುತ್ತಿದೆ ಎಂದು ಬಹುಭಾಷಾ ನಟ ಕಿಶೋರ್‌ ಕುಮಾರ್‌ ಆರೋಪಿಸಿದ್ದು, ಕೆರೆಯ ರಕ್ಷಣೆಗೆ ಕರೆ ನೀಡಿದ್ದಾರೆ.

Advertisements

ಬೆಂಗಳೂರಿನ ದಕ್ಷಿಣ ಭಾಗದಲ್ಲಿರುವ ದೇವರಕೆರೆಗೆ ಕೊಳಚೆ ನೀರು ಹರಿದು ಬರುತ್ತಿರುವ ವಿಡಿಯೋವನ್ನು ತಮ್ಮ ʼಇನ್‌ಸ್ಟಾಗ್ರಾಂʼ ಖಾತೆಯಲ್ಲಿ ಹಂಚಿಕೊಂಡಿರುವ ಕಿಶೋರ್‌, “ಬೆಂಗಳೂರಿನ ದಕ್ಷಿಣ ಭಾಗದಲ್ಲಿ ಸಾವಿರ ವರ್ಷಗಳ ಇತಿಹಾಸವಿರುವ ದೇವರಕೆರೆ ಇದೆ. ಈ ಕೆರೆ ಹೊಯ್ಸಳರ ಕಾಲದ್ದು ಎಂದು ಪುರಾತತ್ವ ಇಲಾಖೆ ದೃಢಪಡಿಸಿದೆ. ಈ ಹಿಂದೆ ಅರಣ್ಯ ಇಲಾಖೆಯ ಸುಪರ್ಧಿಯಲ್ಲಿದ್ದ ಈ ಕೆರೆ ಸ್ವಾಭಾವಿಕವಾಗಿ ಶುದ್ಧ, ತಾಜಾ ನೀರಿನಿಂದ ಕೂಡಿತ್ತು. ಕಳೆದ 10 ವರ್ಷಗಳ ಹಿಂದೆ ಈ ಕೆರೆಯನ್ನು ಬಿಬಿಎಂಪಿಯ ಸುಪರ್ಧಿಗೆ ನೀಡಲಾಯಿತು. ಆದರೆ, ಬಿಬಿಎಂಪಿ ಅನಗತ್ಯ ಅಭಿವೃದ್ಧಿಯ ಹೆಸರಿನಲ್ಲಿ ಜನರ ತೆರಿಗೆ ಹಣವನ್ನು ಬೇಕಾಬಿಟ್ಟಿ ಖರ್ಚು ಮಾಡಿ ಈ ಐತಿಹಾಸಿಕ ಕೆರೆಯನ್ನು ಕೇವಲ 5 ವರ್ಷಗಳಲ್ಲೇ ನಾಶ ಮಾಡಿತು” ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

“ಕೆಲಸಕ್ಕೆ ಬಾರದ ಅಭಿವೃದ್ಧಿಯ ಹೆಸರಲ್ಲಿಇನ್ನೊಂದು ಕೆರೆಯನ್ನು ಕಳೆದುಕೊಳ್ಳಲು ಸಿದ್ಧರಾಗಿದ್ದೀರಾ? ಅಥವಾ ಪರಿಸ್ಥಿತಿ ಕೈ ಮೀರುವ ಮುನ್ನ ಸಂಬಂಧ ಪಟ್ಟವರನ್ನು ಪ್ರಶ್ನಿಸಿ, ಕ್ರಮಕ್ಕೆ ಆಗ್ರಹಿಸುತ್ತೀರಾ” ಎಂದು ಕೆರೆಯ ಸಂರಕ್ಷಣೆಗೆ ಕರೆ ನೀಡಿದ್ದಾರೆ.

ಕಿಶೋರ್‌ ಅವರು ತಮ್ಮ ʼಇನ್‌ಸ್ಟಾಗ್ರಾಂʼ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಕೊಳಚೆ ನೀರು ಕೆರೆಯನ್ನು ಸೇರುತ್ತಿರುವುದು ಸ್ಪಷ್ಟವಾಗಿದೆ. “ಕೇವಲ 10 ನಿಮಿಷಗಳ ಕಾಲ ಸುರಿದ ಮಳೆಗೆ ಎಷ್ಟು ದೊಡ್ಡ ಪ್ರಮಾಣದಲ್ಲಿ ಕೊಳಚೆ ನೀರು ಕೆರೆಯನ್ನು ತುಂಬಿಕೊಳ್ಳುತ್ತಿದೆ ನೋಡಿ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

Download Eedina App Android / iOS

X