ಬಿಜೆಪಿ ಸೇರುತ್ತಿಲ್ಲ ಎಂದ ಸುದೀಪ್‌

Date:

Advertisements

ಬಿಜೆಪಿಯಲ್ಲಿನ ಆಪ್ತರ ಪರ ಸುದೀಪ್‌ ಪ್ರಚಾರ

ಟಿಕೆಟ್‌ ಲಾಬಿ ಮಾಡಿಲ್ಲ ಎಂದ ಕಿಚ್ಚ

ಸ್ಟಾರ್‌ ನಟ ಸುದೀಪ್‌ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಸಾಕಷ್ಟು ಪರ ವಿರೋಧ ಚರ್ಚೆಗಳನ್ನು ಹುಟ್ಟು ಹಾಕಿದೆ. ಈ ನಡುವೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು ನಾನು ಬಿಜೆಪಿ ಸೇರುತ್ತಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

Advertisements

ಬೆಂಗಳೂರಿನ ಪುಟ್ಟೇನಹಳ್ಳಿಯಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸುದೀಪ್‌, “ನಾನು ಬಿಜೆಪಿಯನ್ನು ಸೇರುತ್ತಿಲ್ಲ. ಹಾಗಂತ ನಾನು ಯಾವುದೇ ಒಂದು ಪಕ್ಷದ ಪರವಾಗಿಯೂ ಇಲ್ಲ. ನನ್ನ ಕಷ್ಟ ಕಾಲದಲ್ಲಿ ಕೆಲ ವ್ಯಕ್ತಿಗಳು ನೆರವು ನೀಡಿದ್ದಾರೆ. ಹೀಗಾಗಿ ಅವರ ಪರವಾಗಿ ನಿಲ್ಲುವ ನಿರ್ಧಾರ ಕೈಗೊಂಡಿದ್ದೇನೆ” ಎಂದಿದ್ದಾರೆ.

“ನಾನೊಬ್ಬ ಕಲಾವಿದ ನನಗೆ ರಾಜಕೀಯದ ಬಗ್ಗೆ ಆಸಕ್ತಿ ಇಲ್ಲ. ಇತ್ತೀಚೆಗಷ್ಟೇ ಮೂರು ಸಿನಿಮಾಗಳನ್ನು ಘೋಷಿಸಿದ್ದೇನೆ. ಆ ಕೆಲಸಗಳಲ್ಲೇ ಬ್ಯುಸಿಯಾಗಿದ್ದೇನೆ. ಸದ್ಯದ ಮಟ್ಟಿಗೆ ಕೆಲವಷ್ಟು ವಿಚಾಗಳನ್ನು ಬಹಿರಂಗ ಪಡಿಸುವ ಹಾಗಿಲ್ಲ. ಈಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಯೋಜಿಸಿರುವ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಲು ತೆರಳುತ್ತಿದ್ದೇನೆ. ಸುದ್ದಿಗೋಷ್ಠಿಯಲ್ಲೇ ನನ್ನ ನಿಲುವನ್ನು ಹೇಳುತ್ತೇನೆ” ಎನ್ನುವ ಮೂಲಕ ರಾಜಕೀಯ ಪ್ರವೇಶದ ಸುದ್ದಿಯನ್ನು ತಳ್ಳಿ ಹಾಕಿದ್ದಾರೆ.

ಈ ಸುದ್ದಿ ಓದಿದ್ದೀರಾ? ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ ; ಪ್ರಕಾಶ್‌ ರಾಜ್‌

ಇದೇ ವೇಳೆ ನಿಮ್ಮ ಆಪ್ತರೊಬ್ಬರು ಚಿಕ್ಕಪೇಟೆ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್‌ ಕೇಳಿದ್ದೀರಂತೆ ಹೌದೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಸುದೀಪ್‌, “ಈ ಸುದ್ದಿ ಖಂಡಿತ ಸುಳ್ಳು. ನಾನು ಸ್ನೇಹಿತರ ಪರವಾಗಿ ಟಿಕೆಟ್‌ ಕೇಳುವ ವ್ಯಕ್ತಿ ಅಲ್ಲ. ಈವರೆಗೆ ನಾನು ಅಂತಹ ಕೆಲಸ ಮಾಡಿಲ್ಲ, ಮುಂದೆ ಮಾಡುವುದೂ ಇಲ್ಲ. ಪಕ್ಷದಿಂದ ಟಿಕೆಟ್‌ ಕೊಡಿಸುವ ಮಟ್ಟಕ್ಕೆ ನಾನಿಲ್ಲ. ಬೇಕಿದ್ದರೆ ಯಾವುದಾದರೂ ಸಿನಿಮಾ ಟಿಕೆಟ್‌ ಕೊಡಿಸಬಲ್ಲೆ ಎಂದು ವ್ಯಂಗ್ಯವಾಡಿದ್ದಾರೆ.

c6d189e709d010a95cabcbe8c5246c21
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

Download Eedina App Android / iOS

X