‘ಆರ್‌ಆರ್‌ಆರ್‌’ ತಮಿಳು ಸಿನಿಮಾ; ಟೀಕೆಗೆ ಗುರಿಯಾದ ಪ್ರಿಯಾಂಕಾ ಚೋಪ್ರಾ

Date:

Advertisements
  • ಪ್ರಿಯಾಂಕಾ ಚೋಪ್ರಾ ಅವರ ಹೇಳಿಕೆಗೆ ನೆಟ್ಟಿಗರ ಆಕ್ರೋಶ
  • ʼಆರ್‌ಆರ್‌ಆರ್‌ʼ ಬಾಲಿವುಡ್‌ ಸಿನಿಮಾ ಎಂದಿದ್ದ ನಿರೂಪಕರು

ಖ್ಯಾತ ನಟಿ ಪ್ರಿಯಾಂಕಾ ಚೋಪ್ರಾ ಇತ್ತೀಚೆಗೆ ಅಮೆರಿಕದ ಮಾಧ್ಯಮವೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ತಾವು ಬಾಲಿವುಡ್‌ ತೊರೆಯಲು ಕಾರಣವಾದ ಅಂಶಗಳನ್ನು ಬಹಿರಂಗಪಡಿಸಿದ್ದರು. ಅಪಮಾನದ ಕಾರಣಕ್ಕೆ ನಟಿ ಬಾಲಿವುಡ್‌ ಮಾತ್ರವಲ್ಲ ಭಾರತವನ್ನೇ ತೊರೆದಿದ್ದನ್ನು ತಿಳಿದು ನೆಟ್ಟಿಗರು ಬೇಸರ ವ್ಯಕ್ತಪಡಿಸಿದ್ದರು. ಇದೇ ಸಂದರ್ಶನದಲ್ಲಿ ʼಆರ್‌ಆರ್‌ಆರ್‌ʼ ಸಿನಿಮಾದ ಬಗ್ಗೆ ಪ್ರಿಯಾಂಕಾ ಚೋಪ್ರಾ ಆಡಿದ ಮಾತುಗಳು ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿವೆ.

ಸಂದರ್ಶನದ ವೇಳೆ ನಿರೂಪಕರು ʼಆರ್‌ಆರ್‌ಆರ್‌ʼ ಬಾಲಿವುಡ್‌ ಸಿನಿಮಾ ಎಂದು ತಪ್ಪಾಗಿ ಸಂಬೋಧಿಸಿದ್ದಾರೆ. ಅವರ ಮಾತನ್ನು ತಿದ್ದಲು ಯತ್ನಿಸಿರುವ ಪ್ರಿಯಾಂಕಾ, ‘ಆರ್‌ಆರ್‌ಆರ್‌’ ಬಾಲಿವುಡ್‌ನ ಚಿತ್ರವಲ್ಲ, ಅದು ತಮಿಳು ಸಿನಿಮಾ” ಎಂದಿದ್ದಾರೆ. ಸದ್ಯ ಈ ಹೇಳಿಕೆಯ ಕಾರಣಕ್ಕೆ ನಟಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್‌ ಮಾಡಲಾಗುತ್ತಿದೆ.

ʼಆರ್‌ಆರ್‌ಆರ್‌ʼ ಸಿನಿಮಾ ಆಸ್ಕರ್‌ ಪ್ರಶಸ್ತಿಗೆ ನೇರ ನಾಮನಿರ್ದೇಶನಗೊಳ್ಳುವ ಮುನ್ನ ರಾಜಮೌಳಿ ಮತ್ತು ಚಿತ್ರತಂಡಕ್ಕೆ ಪ್ರಚಾರ ಕಾರ್ಯದಲ್ಲಿ ನೆರವಾಗಲು ಸ್ವತಃ ಪ್ರಿಯಾಂಕಾ ಅವರೇ ಲಾಸ್‌ ಏಂಜಲೀಸ್‌ನಲ್ಲಿ ವಿಶೇಷ ಪ್ರದರ್ಶನವನ್ನು ಏರ್ಪಡಿಸಿದ್ದರು. ನಿರೂಪಕರು ʼಆರ್‌ಆರ್‌ಆರ್‌ʼ ಬಾಲಿವುಡ್‌ ಚಿತ್ರ ಎಂದಾಗ ತಪ್ಪು ತಿದ್ದುವ ಪ್ರಯತ್ನವನ್ನೂ ಮಾಡಿದರು. ಆದರೆ, ಭಾರತ ಮೂಲದವರಾದ ನಟಿಗೆ ಅದು ತೆಲುಗಿನ ಸಿನಿಮಾ ಎಂಬುದು ತಿಳಿದಿಲ್ಲವೇ ಎಂದು ನೆಟ್ಟಿಗರು ವ್ಯಂಗ್ಯವಾಡುತ್ತಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಸರ್ಕಾರಿ ಬಂಗಲೆ ತೆರವಿಗೆ ಸೂಚನೆ; ರಾಹುಲ್‌ ನಮ್ಮ ಮನೆಗೆ ಬನ್ನಿ ಎಂದ ಪ್ರಕಾಶ್‌ ರಾಜ್‌

ಆಸ್ಕರ್‌ ವೇದಿಕೆಯಲ್ಲೂ ಕೂಡ ನಿರೂಪಕರು ಇದೇ ರೀತಿಯ ಎಡವಟ್ಟು ಮಾಡಿದ್ದರು. ಮೂಲ ತೆಲುಗಿನ ʼಆರ್‌ಆರ್‌ಆರ್‌ʼ ಚಿತ್ರವನ್ನು ಬಾಲಿವುಡ್‌ ಸಿನಿಮಾ ಎಂದು ಸಂಬೋಧಿಸಿದ್ದರು. ಆಗಲೂ ತೆಲುಗಿನ ಸಿನಿ ಪ್ರೇಕ್ಷಕರು ಮತ್ತು ನೆಟ್ಟಿಗರು ಆಸ್ಕರ್‌ ಅಕಾಡೆಮಿ ಮತ್ತು ನಿರೂಪಕರ ವಿರುದ್ಧ ಕಿಡಿ ಕಾರಿದ್ದರು.

c6d189e709d010a95cabcbe8c5246c21
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊರಟಗೆರೆ | ಗೃಹ ಸಚಿವರ ಹೆಸರು ದುರ್ಬಳಕೆ ಮಾಡಿಕೊಂಡು ಕ್ರಿಯಾ ಯೋಜನೆ : ಪಪಂ ಸದಸ್ಯರ ಆಕ್ರೋಶ

ಕೊರಟಗೆರೆ ಪಟ್ಟಣದ ಪಂಚಾಯಿತಿ ಅಧ್ಯಕ್ಷರು,  ಸದಸ್ಯರ ಜೊತೆ ಚರ್ಚಿಸದೆ ಗೃಹ ಸಚಿವರ...

‘ಶೋಲೆ’ @ 50: ಇವತ್ತಿಗೂ ಅದೇ ತಾಜಾತನ, ಅದೇ ಆಕರ್ಷಣೆ, ಅದೇ ಕುತೂಹಲ

'ಶೋಲೆ' ಚಿತ್ರ ಬಿಡುಗಡೆಯಾಗಿ 50 ವರ್ಷಗಳಾದರೂ ಇವತ್ತಿಗೂ ಅದೇ ತಾಜಾತನ, ಅದೇ...

ರೇಣುಕಾಸ್ವಾಮಿ ಕೊಲೆ ಪ್ರಕರಣ | ನಟ ದರ್ಶನ್‌, ಪವಿತ್ರಾ ಗೌಡ ಜಾಮೀನು ಭವಿಷ್ಯ ಇಂದು ತೀರ್ಮಾನ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌, ಪವಿತ್ರಾ ಗೌಡ...

Download Eedina App Android / iOS

X