‘ಆರ್‌ಆರ್‌ಆರ್‌’ ತಮಿಳು ಸಿನಿಮಾ; ಟೀಕೆಗೆ ಗುರಿಯಾದ ಪ್ರಿಯಾಂಕಾ ಚೋಪ್ರಾ

Date:

  • ಪ್ರಿಯಾಂಕಾ ಚೋಪ್ರಾ ಅವರ ಹೇಳಿಕೆಗೆ ನೆಟ್ಟಿಗರ ಆಕ್ರೋಶ
  • ʼಆರ್‌ಆರ್‌ಆರ್‌ʼ ಬಾಲಿವುಡ್‌ ಸಿನಿಮಾ ಎಂದಿದ್ದ ನಿರೂಪಕರು

ಖ್ಯಾತ ನಟಿ ಪ್ರಿಯಾಂಕಾ ಚೋಪ್ರಾ ಇತ್ತೀಚೆಗೆ ಅಮೆರಿಕದ ಮಾಧ್ಯಮವೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ತಾವು ಬಾಲಿವುಡ್‌ ತೊರೆಯಲು ಕಾರಣವಾದ ಅಂಶಗಳನ್ನು ಬಹಿರಂಗಪಡಿಸಿದ್ದರು. ಅಪಮಾನದ ಕಾರಣಕ್ಕೆ ನಟಿ ಬಾಲಿವುಡ್‌ ಮಾತ್ರವಲ್ಲ ಭಾರತವನ್ನೇ ತೊರೆದಿದ್ದನ್ನು ತಿಳಿದು ನೆಟ್ಟಿಗರು ಬೇಸರ ವ್ಯಕ್ತಪಡಿಸಿದ್ದರು. ಇದೇ ಸಂದರ್ಶನದಲ್ಲಿ ʼಆರ್‌ಆರ್‌ಆರ್‌ʼ ಸಿನಿಮಾದ ಬಗ್ಗೆ ಪ್ರಿಯಾಂಕಾ ಚೋಪ್ರಾ ಆಡಿದ ಮಾತುಗಳು ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿವೆ.

- Advertisement -

ಸಂದರ್ಶನದ ವೇಳೆ ನಿರೂಪಕರು ʼಆರ್‌ಆರ್‌ಆರ್‌ʼ ಬಾಲಿವುಡ್‌ ಸಿನಿಮಾ ಎಂದು ತಪ್ಪಾಗಿ ಸಂಬೋಧಿಸಿದ್ದಾರೆ. ಅವರ ಮಾತನ್ನು ತಿದ್ದಲು ಯತ್ನಿಸಿರುವ ಪ್ರಿಯಾಂಕಾ, ‘ಆರ್‌ಆರ್‌ಆರ್‌’ ಬಾಲಿವುಡ್‌ನ ಚಿತ್ರವಲ್ಲ, ಅದು ತಮಿಳು ಸಿನಿಮಾ” ಎಂದಿದ್ದಾರೆ. ಸದ್ಯ ಈ ಹೇಳಿಕೆಯ ಕಾರಣಕ್ಕೆ ನಟಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್‌ ಮಾಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ʼಆರ್‌ಆರ್‌ಆರ್‌ʼ ಸಿನಿಮಾ ಆಸ್ಕರ್‌ ಪ್ರಶಸ್ತಿಗೆ ನೇರ ನಾಮನಿರ್ದೇಶನಗೊಳ್ಳುವ ಮುನ್ನ ರಾಜಮೌಳಿ ಮತ್ತು ಚಿತ್ರತಂಡಕ್ಕೆ ಪ್ರಚಾರ ಕಾರ್ಯದಲ್ಲಿ ನೆರವಾಗಲು ಸ್ವತಃ ಪ್ರಿಯಾಂಕಾ ಅವರೇ ಲಾಸ್‌ ಏಂಜಲೀಸ್‌ನಲ್ಲಿ ವಿಶೇಷ ಪ್ರದರ್ಶನವನ್ನು ಏರ್ಪಡಿಸಿದ್ದರು. ನಿರೂಪಕರು ʼಆರ್‌ಆರ್‌ಆರ್‌ʼ ಬಾಲಿವುಡ್‌ ಚಿತ್ರ ಎಂದಾಗ ತಪ್ಪು ತಿದ್ದುವ ಪ್ರಯತ್ನವನ್ನೂ ಮಾಡಿದರು. ಆದರೆ, ಭಾರತ ಮೂಲದವರಾದ ನಟಿಗೆ ಅದು ತೆಲುಗಿನ ಸಿನಿಮಾ ಎಂಬುದು ತಿಳಿದಿಲ್ಲವೇ ಎಂದು ನೆಟ್ಟಿಗರು ವ್ಯಂಗ್ಯವಾಡುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸರ್ಕಾರಿ ಬಂಗಲೆ ತೆರವಿಗೆ ಸೂಚನೆ; ರಾಹುಲ್‌ ನಮ್ಮ ಮನೆಗೆ ಬನ್ನಿ ಎಂದ ಪ್ರಕಾಶ್‌ ರಾಜ್‌

ಆಸ್ಕರ್‌ ವೇದಿಕೆಯಲ್ಲೂ ಕೂಡ ನಿರೂಪಕರು ಇದೇ ರೀತಿಯ ಎಡವಟ್ಟು ಮಾಡಿದ್ದರು. ಮೂಲ ತೆಲುಗಿನ ʼಆರ್‌ಆರ್‌ಆರ್‌ʼ ಚಿತ್ರವನ್ನು ಬಾಲಿವುಡ್‌ ಸಿನಿಮಾ ಎಂದು ಸಂಬೋಧಿಸಿದ್ದರು. ಆಗಲೂ ತೆಲುಗಿನ ಸಿನಿ ಪ್ರೇಕ್ಷಕರು ಮತ್ತು ನೆಟ್ಟಿಗರು ಆಸ್ಕರ್‌ ಅಕಾಡೆಮಿ ಮತ್ತು ನಿರೂಪಕರ ವಿರುದ್ಧ ಕಿಡಿ ಕಾರಿದ್ದರು.

971ebeff7523e71323fef3c7b5b2eb494a70a04dcd51867b0c522de0b1aa64b7?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕನ್ನಡದ ಹಿರಿಯ ನಟ ಅನಂತ್ ನಾಗ್‌ಗೆ 2024ನೇ ಸಾಲಿನ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಗರಿ

ಭಾರತೀಯ ಚಿತ್ರರಂಗಕ್ಕೆ ನೀಡಿದ ಅನನ್ಯ ಕೊಡುಗೆಯನ್ನು ಪರಿಗಣಿಸಿ, ಕನ್ನಡದ ಹಿರಿಯ ನಟ...

₹9 ಕೋಟಿ ಚೆಕ್ ಬೌನ್ಸ್ ಪ್ರಕರಣ: ನಟ ರಾಜ್‌ಪಾಲ್ ಯಾದವ್‌ಗೆ ‘ಸುಪ್ರೀಂ’ನಿಂದ ತಾತ್ಕಾಲಿಕ ರಿಲೀಫ್

ಮುರಳಿ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್‌ ಕಂಪನಿಗೆ ಸಂಬಂಧಿಸಿದ ₹9 ಕೋಟಿ ಮೊತ್ತದ...

ಸುಶಾಂತ್ ಮಾಜಿ ಮ್ಯಾನೇಜರ್ ಸಾವಿಗೆ ಮಹತ್ವದ ತಿರುವು: 6 ವರ್ಷಗಳ ಬಳಿಕ ಸಿಬಿಐನಿಂದ ಎಫ್‌ಐಆರ್ ದಾಖಲು

ಬಾಲಿವುಡ್‌ನ ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್...

ಸ್ತಬ್ಧ ಚಿತ್ರ ಮಾತಾಡಿದಂತೆ, ಶಬ್ದ ಕಣ್ಣಿಗೆ ಕಾಣಿಸುವಂತೆ- ಸಿನೆಮಾದ ತೆರೆಮರೆಯ ತಾತ್ವಿಕತೆ

ಆಫ್-ಸ್ಕ್ರೀನ್ ಶಬ್ದ ಸಿನೆಮಾದ ಕೇವಲ ತಾಂತ್ರಿಕ ಕುಶಲತೆಯಾಗಿರದೆ, ಅದರ ತಾತ್ವಿಕ ದೃಷ್ಟಿಕೋನವನ್ನೇ...