ನೇಪಾಳದಲ್ಲಿ ಆದಿಪುರುಷ್‌ ಸಿನಿಮಾ ಪ್ರದರ್ಶನ ರದ್ದು

Date:

Advertisements

ಸೀತೆ ನೇಪಾಳದ ಮಗಳು ಎಂದ ಕಟ್ಮಂಡು ಮೇಯರ್

ಚಿತ್ರದಿಂದ ವಿವಾದಾತ್ಮಕ ಸಂಭಾಷಣೆ ಕೈಬಿಡಲು ಆಗ್ರಹ

ತೆಲುಗಿನ ಖ್ಯಾತ ನಟ ಪ್ರಭಾಸ್‌ ಅಭಿನಯದ ʼಆದಿಪುರುಷ್‌ʼ ಸಿನಿಮಾ ಶುಕ್ರವಾರ ಜಗತ್ತಿನಾದ್ಯಂತ ತೆರೆಕಂಡಿದ್ದು, ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆಗಳನ್ನು ಪಡೆದುಕೊಳ್ಳುತ್ತಿದೆ. ಇದೇ ಹೊತ್ತಿನಲ್ಲಿ ವಿವಾದಾತ್ಮಕ ಸಂಭಾಷಣೆಯ ಕಾರಣಕ್ಕೆ ನೇಪಾಳದಲ್ಲಿ ಈ ಚಿತ್ರದ ಪ್ರದರ್ಶನಗಳು ರದ್ದಾಗಿವೆ.

Advertisements

ರಾಮಾಯಣದ ಕಥೆಯನ್ನು ಆಧರಿಸಿ ತೆರೆಗೆ ಬಂದಿರುವ ʼಆದಿಪುರುಷ್‌ʼ ಸಿನಿಮಾದಲ್ಲಿ ʼಸೀತೆ ಭಾತರದ ಮಗಳುʼ ಎಂಬ ಸಂಭಾಷಣೆ ಇದೆ. ಸದ್ಯ ಈ ಸಂಭಾಷಣೆಯೇ ನೇಪಾಳಿಗರ ಆಕ್ರೋಶಕ್ಕೆ ಕಾರಣವಾಗಿದ್ದು, ಕಟ್ಮಂಡು ಸೇರಿದಂತೆ ನೇಪಾಳದೆಲ್ಲೆಡೆ ಚಿತ್ರದ ಪ್ರದರ್ಶನವನ್ನು ರದ್ದುಪಡಿಸಲಾಗಿದೆ.

ನೇಪಾಳದ ರಾಜಧಾನಿ ಕಟ್ಮಂಡುವಿನ ಮೇಯರ್‌ ಬಾಲೆಂದ್ರ ಶಾ ಸಾಮಾಜಿಕ ಜಾಲತಾಣಗಳಲ್ಲಿ ʼಆದಿಪುರುಷ್‌ʼ ಚಿತ್ರತಂಡದ ವಿರುದ್ಧ ಆಕ್ರೋಶ ಹೊರಹಾಕಿದ್ದು, “ಜಾನಕಿ ಭಾರತದವಳಲ್ಲ, ಆಕೆ ನೇಪಾಳದ ಮಗಳು. ʼಆದಿಪುರುಷ್‌ʼ ಸಿನಿಮಾದಿಂದ ವಿವಾದಾತ್ಮಕ ಸಂಭಾಷಣೆಯನ್ನು ತೆಗೆದು ಹಾಕದ ಹೊರತು ಕಟ್ಮಂಡುವಿನಲ್ಲಿ ಯಾವುದೇ ಭಾರತೀಯ ಸಿನಿಮಾಗಳ ಪ್ರದರ್ಶನಕ್ಕೆ ಅವಕಾಶ ನೀಡುವುದಿಲ್ಲ” ಎಂದು ಎಚ್ಚರಿಸಿದ್ದಾರೆ.

ನೇಪಾಳದ ಚಲನಚಿತ್ರ ಸೆನ್ಸಾರ್‌ ಮಂಡಳಿ ಕೂಡ ʼಆದಿಪುರುಷ್‌ʼ ಚಿತ್ರತಂಡಕ್ಕೆ ನೋಟಿಸ್‌ ನೀಡಿದೆ. “ಸಿನಿಮಾದಿಂದ ವಿವಾದಾತ್ಮಕ ಸಂಭಾಷಣೆಯನ್ನು ತೆಗೆದು ಹಾಕುವ ವರೆಗೂ ನೇಪಾಳದಲ್ಲಿ ಚಿತ್ರದ ಪ್ರದರ್ಶನಕ್ಕೆ ಅನುಮತಿ ನೀಡುವುದಿಲ್ಲ” ಎಂದು ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

Download Eedina App Android / iOS

X