ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ‘ಅಮೃತಮತಿ’ ಕನ್ನಡ ಚಿತ್ರವು ಈಗ ಅಮೆಜಾನ್ ಪ್ರೈಮ್ನ ಓಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗಿದೆ. ಈಗ ಆಸಕ್ತರು ಅಮೆಜಾನ್ ಪ್ರೈಮ್ನಲ್ಲಿ ಈ ಚಿತ್ರವನ್ನು ನೋಡಬಹುದಾಗಿದೆ.
‘ಅಮೃತಮತಿ’ ಚಿತ್ರವು ಹದಿಮೂರನೇ ಶತಮಾನದ ಖ್ಯಾತ ಕನ್ನಡ ಕವಿ ಜನ್ನನ ‘ಯಶೋಧರ ಚರಿತೆ’ ಕಾವ್ಯ ಪ್ರಸಂಗವನ್ನು ಆಧರಿಸಿ ರೂಪುಗೊಂಡಿದೆ. ಈ ಚಿತ್ರದಲ್ಲಿ ಮೂಲ ಕಥನವನ್ನು ಮರುಸೃಷ್ಟಿ ಮಾಡಿ ನಿರೂಪಿಸಿರುವುದು ಒಂದು ವಿಶೇಷ. ಕನ್ನಡ ಸಾಹಿತ್ಯದಲ್ಲಿ ಮರುಸೃಷ್ಟಿಯ ಪರಂಪರೆಯಿದ್ದು ಈ ಚಿತ್ರವು ಅದರ ಮುಂದುವರಿಕೆಯಾಗಿದೆ.
ಇದನ್ನು ಓದಿದ್ದೀರಾ?: ಕ್ಷಮಿಸಿ ಕರ್ನಾಟಕ; ಕೊನೆಗೂ ಕನ್ನಡಿಗರ ಬಳಿ ಕ್ಷಮೆಯಾಚಿಸಿದ ಸೋನು ನಿಗಮ್
ಬರಗೂರು ರಾಮಚಂದ್ರಪ್ಪನವರು ನಿರ್ದೇಶನದ ಜೊತೆಗೆ ಚಿತ್ರಕತೆ, ಸಂಭಾಷಣೆ ಮತ್ತು ಗೀತರಚನೆ ಮಾಡಿದ್ದಾರೆ ಪ್ರಸಿದ್ಧ ಕಲಾವಿದೆ ಹರಿಪ್ರಿಯ ಅವರು ಅಮೃತ ಮತಿಯ ಪಾತ್ರದಲ್ಲಿ ಮತ್ತು ಬಹುಭಾಷಾ ಕಲಾವಿದ ಕಿಶೋರ್ ಅವರು ಯಶೋಧರನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಿರಿಯ ನಟ ಸುಂದರರಾಜ್, ಪ್ರಮೀಳಾ ಜೋಷಾಯ್, ತಿಲಕ್, ಅಂಬರೀಶ್ ಸಾರಂಗಿ, ವತ್ಸಲಾ ಮೋಹನ್, ಸುಪ್ರಿಯಾ ರಾವ್ ಮುಂತಾದವರು ತಾರಾಗಣದಲ್ಲಿದ್ದಾರೆ.
ಸುರೇಶ್ ಅರಸು ಅವರು ಸಂಕಲನ, ನಾಗರಾಜ್ ಆದವಾನಿಯವರು ಛಾಯಾಗ್ರಹಣ, ಶಮಿತಾ ಮಲ್ನಾಡ್ ಅವರು ಸಂಗೀತ ನಿರ್ದೇಶನ, ತ್ರಿಭುವನ್ ಅವರು ನೃತ್ಯ ಸಂಯೋಜನೆಯನ್ನು ನಿರ್ವಹಿಸಿದ್ದಾರೆ.