ಘೋಸ್ಟ್‌ ಚಿತ್ರತಂಡ ಸೇರಿಕೊಂಡ ಅನುಪಮ್‌ ಖೇರ್‌

Date:

ಸ್ಯಾಂಡಲ್‌ವುಡ್‌ನ ಸ್ಟಾರ್‌ ನಟ ಶಿವರಾಜ್‌ ಕುಮಾರ್‌ ಅಭಿನಯದ ಘೋಸ್ಟ್‌ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದೆ. ವೇದ ಸಿನಿಮಾದ ಯಶಸ್ಸಿನ ಬಳಿಕ ಘೋಸ್ಟ್‌ ಚಿತ್ರದ ಮೂರನೇ ಹಂತದ ಚಿತ್ರೀಕರಣದಲ್ಲಿ ಶಿವಣ್ಣ ಭಾಗಿಯಾಗಿದ್ದು, ಬಾಲಿವುಡ್‌ನ ಖ್ಯಾತ ನಟ ಅನುಪಮ್‌ ಖೇರ್‌ ಕೂಡ ಚಿತ್ರತಂಡ ಸೇರಿಕೊಂಡಿದ್ದಾರೆ.

ʼಓಲ್ಡ್‌ಮಾಂಕ್‌ʼ ಖ್ಯಾತಿಯ ನಿರ್ದೇಶಕ ಶ್ರೀನಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ʼಆ್ಯಕ್ಷನ್ʼ, ʼಥ್ರಿಲ್ಲರ್‌ʼ ಕಥಾಹಂದರವುಳ್ಳ ಘೋಸ್ಟ್‌ ಚಿತ್ರದ ಅನುಪಮ್‌ ಖೇರ್‌ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅವರು ಚಿತ್ರದಲ್ಲಿ ನಟಿಸುತ್ತಿರುವ ವಿಚಾರವನ್ನು ನಿರ್ದೇಶಕರು ಈ ಹಿಂದೆಯೇ ಬಹಿರಂಗಪಡಿಸಿದ್ದರು. ಮೂರನೇ ಹಂತದ ಶೂಟಿಂಗ್‌ ಶುರುವಾದ ಬೆನ್ನಲ್ಲೇ ಅನುಪಮ್‌ ಖೇರ್‌ ಬೆಂಗಳೂರಿಗೆ ಬಂದಿಳಿದಿದ್ದು, ಹಿರಿಯ ನಟನನ್ನು ಚಿತ್ರತಂಡ ಆತ್ಮೀಯವಾಗಿ ಬರಮಾಡಿಕೊಂಡಿದೆ. ಶ್ರೀನಿ, ಅನುಪಮ್‌ ಖೇರ್‌ ಅವರಿಗೆ ಪಾತ್ರದ ಬಗ್ಗೆ ವಿವರಿಸುತ್ತಿರುವ ಫೋಟೋಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

ಕೇವಲ ಅನುಪಮ್‌ ಖೇರ್‌ ಮಾತ್ರವಲ್ಲ ಮಲಯಾಳಂನ ಖ್ಯಾತ ನಟ ಜಯರಾಂ ಈ ಚಿತ್ರದಲ್ಲಿ ಪೊಲೀಸ್‌ ಅಧಿಕಾರಿಯ ಪಾತ್ರದಲ್ಲಿ ನಟಿಸಿದ್ದಾರೆ. ಈಗಾಗಲೇ ಅವರ ಪಾತ್ರದ ಚಿತ್ರೀಕರಣ ಮುಕ್ತಾಯಗೊಂಡಿದೆ. ಬಹುಭಾಷಾ ನಟ ಪ್ರಶಾಂತ್‌ ನಾರಾಯಣನ್‌ ಕೂಡ ಚಿತ್ರದಲ್ಲಿದ್ದಾರೆ. ಉಳಿದಂತೆ ಅಚ್ಯುತ್‌ ಕುಮಾರ್‌, ದತ್ತಣ್ಣ, ಅವಿನಾಶ್‌ ಮುಂತಾದವರು ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗಮನ ಸೆಳೆಯುತ್ತಿದೆ ʼಹೊಯ್ಸಳʼ ಚಿತ್ರದ ಜನಪದ ಹಾಡು

ʼಸಂದೇಶ್‌ ಪ್ರೊಡಕ್ಷನ್ಸ್‌ʼ ಬ್ಯಾನರ್‌ನಡಿಯಲ್ಲಿ ಸಿದ್ಧಗೊಳ್ಳುತ್ತಿರುವ ʼಘೋಸ್ಟ್‌ʼ ಚಿತ್ರಕ್ಕಾಗಿ ಬೆಂಗಳೂರಿನ ಮಿನರ್ವ ಮಿಲ್‌ ಮತ್ತು ಮೈಸೂರಿನ ಹೊರವಲಯದಲ್ಲಿ ಅಂದಾಜು 6 ಕೋಟಿ ರೂಪಾಯಿ ವೆಚ್ಚದಲ್ಲಿ ಎರಡು ಬೃಹತ್‌ ಸೆಟ್‌ಗಳನ್ನು ನಿರ್ಮಾಣ ಮಾಡಲಾಗಿದೆ. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ ಸಂಗೀತ ಸಂಯೋಜನೆಯ ಹೊಣೆ ಹೊತ್ತುಕೊಂಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತೆಲುಗಿನ ಹಿರಿಯ ನಿರ್ದೇಶಕ ಕೆ. ವಾಸು ಇನ್ನಿಲ್ಲ

ಮೆಗಾಸ್ಟಾರ್‌ ಚಿರಂಜೀವಿ ಚೊಚ್ಚಲ ಚಿತ್ರ ನಿರ್ದೇಶಿಸಿದ್ದ ವಾಸು ಜಗ್ಗೇಶ್‌ ನಟನೆಯ ʼಸರ್ವರ್‌ ಸೋಮಣ್ಣʼ...

ಮಂತ್ರಿಯಾದ ಮಧು ಬಂಗಾರಪ್ಪ : ಶ್ರಮದ ಪ್ರತಿಫಲ ಎಂದ ಶಿವಣ್ಣ

ಮೊದಲ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಧು ಬಂಗಾರಪ್ಪ ಚುನಾವಣೆಯಲ್ಲಿ ಕಾಂಗ್ರೆಸ್‌...

ಯಶ್‌ ಜೊತೆಗೆ ನರ್ತನ್‌ ಸಿನಿಮಾ ಸದ್ಯಕ್ಕಿಲ್ಲ

ಶಿವರಾಜ್‌ ಕುಮಾರ್‌ ನಟನೆಯ ʼಭೈರತಿ ರಣಗಲ್‌ʼ ಸಿನಿಮಾದಲ್ಲಿ ನರ್ತನ್‌ ಬ್ಯುಸಿ ಕೆಜಿಎಫ್‌-2 ಬಿಡುಗಡೆಯಾಗಿ...

ʼದಿ ಡೈರಿ ಆಫ್‌ ವೆಸ್ಟ್‌ ಬೆಂಗಾಲ್‌ʼ ಚಿತ್ರದ ನಿರ್ದೇಶಕನಿಗೆ ಕೋಲ್ಕತ್ತಾ ಪೊಲೀಸರಿಂದ ನೋಟಿಸ್‌

ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಗುರಿಯಾಗಿಸಿ ಸಿನಿಮಾ ಮಾಡಿದ ಸನೋಜ್‌ ಟ್ರೈಲರ್‌ ಬಿಡುಗಡೆಯಾದ...