ಅಭಿಮಾನಿಯ ಕೊನೆ ಆಸೆ ಈಡೇರಿಸಿದ ಹೃದಯವಂತ ಶಾರುಖ್‌ ಖಾನ್‌

Date:

ಕ್ಯಾನ್ಸರ್‌ನಿಂದ ಬಳಲುತ್ತಿರುವ ಶಾರುಖ್‌ ಅಭಿಮಾನಿ

ಅಭಿಮಾನಿಯ ಚಿಕಿತ್ಸೆಗೆ ನೆರವಿನ ಹಸ್ತ ಚಾಚಿದ ನಟ

ಸಾವು ಬದುಕಿನ ನಡುವೆ ಹೋರಾಡುತ್ತಿರುವ ತಮ್ಮ ಅಭಿಮಾನಿಯೊಬ್ಬರ ಕೊನೆಯ ಆಸೆಯನ್ನು ಈಡೇರಿಸುವ ಮೂಲಕ ಬಾಲಿವುಡ್‌ನ ಖ್ಯಾತ ನಟ ಶಾರುಖ್‌ ಖಾನ್‌ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕ್ಯಾನ್ಸರ್‌ನಿಂದ ಬಳಲುತ್ತಿರುವ ಕೊಲ್ಕತ್ತಾ ಮೂಲದ 60 ವರ್ಷದ ಶಿವಾನಿ ಎಂಬುವವರು ತಮ್ಮ ಕುಟುಂಬಸ್ಥರ ಬಳಿ ನೆಚ್ಚಿನ ನಟ ಶಾರುಖ್‌ ಖಾನ್‌ ಅವರನ್ನು ಭೇಟಿಯಾಗುವ ಬಯಕೆಯನ್ನು ಹಂಚಿಕೊಂಡಿದ್ದರು. ಶಿವಾನಿ ಅವರ ಪುತ್ರಿ ಪ್ರಿಯಾ ಈ ವಿಚಾರವನ್ನು ಸಾಮಾಜಿಕ ಜಾಲತಾಣದ ಮೂಲಕ ಶಾರುಖ್‌ ಅಭಿಮಾನಿಗಳ ಗಮನಕ್ಕೆ ತಂದಿದ್ದಾರೆ.

ಅಭಿಮಾನಿಗಳ ಬಳಗದಲ್ಲಿ ಒಬ್ಬರಾದ ಫೈಜಿ ಎಂಬುವವರು ಶಿವಾನಿ ಅವರ ಕೊನೆಯ ಆಸೆಯ ಬಗ್ಗೆ ಶಾರುಖ್‌ ಖಾನ್‌ ಅವರಿಗೆ ತಿಳಿಸಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಶಾರುಖ್‌, ವಿಷಯ ತಿಳಿದ ಕೂಡಲೇ ಬಿಡುವು ಮಾಡಿಕೊಂಡು ತಮ್ಮ ಅಭಿಮಾನಿ ಶಿವಾನಿ ಅವರಿಗೆ ವಿಡಿಯೋ ಕಾಲ್‌ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಶಿವಾನಿ ಮತ್ತು ಅವರ ಪುತ್ರಿ ಪ್ರಿಯಾ ಜೊತೆಗೆ ಅರ್ಧ ಗಂಟೆಗಳ ಕಾಲ ಮಾತನಾಡಿರುವ ಸ್ಟಾರ್‌ ನಟ, ಚಿಕಿತ್ಸೆಗೆ ಅಗತ್ಯ ನೆರವು ಒದಗಿಸುವ ಭರವಸೆ ನೀಡಿದ್ದಾರೆ. ಕೊಲ್ಕತ್ತಾಗೆ ಭೇಟಿ ನೀಡಿದಾಗ ಖಂಡಿತವಾಗಿ ಶಿವಾನಿ ಅವರನ್ನು ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಪ್ರಿಯಾ ಅವರ ಮದುವೆಗೆ ಹಾಜರಾಗುವುದಾಗಿಯೂ ಮಾತು ಕೊಟ್ಟಿದ್ದಾರೆ.

ತಮ್ಮ ನೆಚ್ಚಿನ ನಟನ ಜೊತೆ ಮಾತನಾಡಿದ ಅನುಭವವನ್ನು ಸೆಲ್ಫೀ ವಿಡಿಯೋ ಮೂಲಕ ಹಂಚಿಕೊಂಡಿರುವ ಶಿವಾನಿ, “ಶಾರುಖ್‌ ಖಾನ್‌ ನಮಗೆ ವಿಡಿಯೋ ಕರೆ ಮಾಡುತ್ತಾರೆಂದು ನಿಜಕ್ಕೂ ನಿರೀಕ್ಷಿಸಿರಲಿಲ್ಲ. ಅವರ ಜೊತೆ ಮಾತನಾಡಿ ಬಹಳ ಖುಷಿಯಾಗಿದೆ” ಎಂದಿದ್ದಾರೆ. ಶಿವಾನಿ ಅವರ ಮಗಳು ಕೂಡ ನಟನ ಸರಳತೆಯನ್ನು ಕೊಂಡಾಡಿದ್ದಾರೆ. ಇನ್ನು ಅಭಿಮಾನಿಗಳ ಬಗ್ಗೆ ಶಾರುಖ್‌ ಹೊಂದಿರುವ ಕಾಳಜಿಯನ್ನು ಕಂಡು ನೆಟ್ಟಿಗರು ಕೂಡ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಎಚ್‌ಡಿಕೆ ‘ದಾರಿತಪ್ಪಿದ ಮಗ’: ಪ್ರಕಾಶ್ ರಾಜ್

ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ...

ಖ್ಯಾತ ಕನ್ನಡ ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್​ ಆತ್ಮಹತ್ಯೆ!

ಬೆಂಗಳೂರಿನ ಜೆಟ್​ಲಾಗ್​ ಪಬ್ ಮಾಲೀಕ ಹಾಗೂ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ...

‘RCB ಸೋಲಿಗೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಕಾರಣ’ ಎಂದು ಅವಹೇಳನಕಾರಿ ಟ್ವೀಟ್: ಕಮಿಷನರ್‌ಗೆ ದೂರು

ಕನ್ನಡ ಚಿತ್ರರಂಗದ ನಟ, ದಿವಂಗತ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ...