ಅಭಿಮಾನಿಯ ಕೊನೆ ಆಸೆ ಈಡೇರಿಸಿದ ಹೃದಯವಂತ ಶಾರುಖ್‌ ಖಾನ್‌

Date:

Advertisements

ಕ್ಯಾನ್ಸರ್‌ನಿಂದ ಬಳಲುತ್ತಿರುವ ಶಾರುಖ್‌ ಅಭಿಮಾನಿ

ಅಭಿಮಾನಿಯ ಚಿಕಿತ್ಸೆಗೆ ನೆರವಿನ ಹಸ್ತ ಚಾಚಿದ ನಟ

ಸಾವು ಬದುಕಿನ ನಡುವೆ ಹೋರಾಡುತ್ತಿರುವ ತಮ್ಮ ಅಭಿಮಾನಿಯೊಬ್ಬರ ಕೊನೆಯ ಆಸೆಯನ್ನು ಈಡೇರಿಸುವ ಮೂಲಕ ಬಾಲಿವುಡ್‌ನ ಖ್ಯಾತ ನಟ ಶಾರುಖ್‌ ಖಾನ್‌ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Advertisements

ಕ್ಯಾನ್ಸರ್‌ನಿಂದ ಬಳಲುತ್ತಿರುವ ಕೊಲ್ಕತ್ತಾ ಮೂಲದ 60 ವರ್ಷದ ಶಿವಾನಿ ಎಂಬುವವರು ತಮ್ಮ ಕುಟುಂಬಸ್ಥರ ಬಳಿ ನೆಚ್ಚಿನ ನಟ ಶಾರುಖ್‌ ಖಾನ್‌ ಅವರನ್ನು ಭೇಟಿಯಾಗುವ ಬಯಕೆಯನ್ನು ಹಂಚಿಕೊಂಡಿದ್ದರು. ಶಿವಾನಿ ಅವರ ಪುತ್ರಿ ಪ್ರಿಯಾ ಈ ವಿಚಾರವನ್ನು ಸಾಮಾಜಿಕ ಜಾಲತಾಣದ ಮೂಲಕ ಶಾರುಖ್‌ ಅಭಿಮಾನಿಗಳ ಗಮನಕ್ಕೆ ತಂದಿದ್ದಾರೆ.

ಅಭಿಮಾನಿಗಳ ಬಳಗದಲ್ಲಿ ಒಬ್ಬರಾದ ಫೈಜಿ ಎಂಬುವವರು ಶಿವಾನಿ ಅವರ ಕೊನೆಯ ಆಸೆಯ ಬಗ್ಗೆ ಶಾರುಖ್‌ ಖಾನ್‌ ಅವರಿಗೆ ತಿಳಿಸಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಶಾರುಖ್‌, ವಿಷಯ ತಿಳಿದ ಕೂಡಲೇ ಬಿಡುವು ಮಾಡಿಕೊಂಡು ತಮ್ಮ ಅಭಿಮಾನಿ ಶಿವಾನಿ ಅವರಿಗೆ ವಿಡಿಯೋ ಕಾಲ್‌ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಶಿವಾನಿ ಮತ್ತು ಅವರ ಪುತ್ರಿ ಪ್ರಿಯಾ ಜೊತೆಗೆ ಅರ್ಧ ಗಂಟೆಗಳ ಕಾಲ ಮಾತನಾಡಿರುವ ಸ್ಟಾರ್‌ ನಟ, ಚಿಕಿತ್ಸೆಗೆ ಅಗತ್ಯ ನೆರವು ಒದಗಿಸುವ ಭರವಸೆ ನೀಡಿದ್ದಾರೆ. ಕೊಲ್ಕತ್ತಾಗೆ ಭೇಟಿ ನೀಡಿದಾಗ ಖಂಡಿತವಾಗಿ ಶಿವಾನಿ ಅವರನ್ನು ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಪ್ರಿಯಾ ಅವರ ಮದುವೆಗೆ ಹಾಜರಾಗುವುದಾಗಿಯೂ ಮಾತು ಕೊಟ್ಟಿದ್ದಾರೆ.

ತಮ್ಮ ನೆಚ್ಚಿನ ನಟನ ಜೊತೆ ಮಾತನಾಡಿದ ಅನುಭವವನ್ನು ಸೆಲ್ಫೀ ವಿಡಿಯೋ ಮೂಲಕ ಹಂಚಿಕೊಂಡಿರುವ ಶಿವಾನಿ, “ಶಾರುಖ್‌ ಖಾನ್‌ ನಮಗೆ ವಿಡಿಯೋ ಕರೆ ಮಾಡುತ್ತಾರೆಂದು ನಿಜಕ್ಕೂ ನಿರೀಕ್ಷಿಸಿರಲಿಲ್ಲ. ಅವರ ಜೊತೆ ಮಾತನಾಡಿ ಬಹಳ ಖುಷಿಯಾಗಿದೆ” ಎಂದಿದ್ದಾರೆ. ಶಿವಾನಿ ಅವರ ಮಗಳು ಕೂಡ ನಟನ ಸರಳತೆಯನ್ನು ಕೊಂಡಾಡಿದ್ದಾರೆ. ಇನ್ನು ಅಭಿಮಾನಿಗಳ ಬಗ್ಗೆ ಶಾರುಖ್‌ ಹೊಂದಿರುವ ಕಾಳಜಿಯನ್ನು ಕಂಡು ನೆಟ್ಟಿಗರು ಕೂಡ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X