ಬಾಲಿವುಡ್‌ನ ಹಿರಿಯ ನಟ ಗೂಫಿ ಪೈಂತಲ್‌ ಇನ್ನಿಲ್ಲ

Date:

  • ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದ ಗೂಫಿ ಪೈಂತಲ್‌
  • ಹಿರಿಯ ನಟನ ಅಗಲಿಕೆಗೆ ಕಂಬನಿ ಮಿಡಿದ ತಾರೆಯರು

ಬಾಲಿವುಡ್‌ನ ಹಿರಿಯ ನಟ ಗೂಫಿ ಪೈಂತಲ್‌ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ಹಿರಿಯ ನಟನ ಸಾವಿನ ಬಗ್ಗೆ ಕುಟುಂಬಸ್ಥರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 79 ವರ್ಷದ ಗೂಫಿ ಅವರನ್ನು ಕೆಲ ದಿನಗಳ ಹಿಂದಷ್ಟೇ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದೇ ಹೇಳಲಾಗಿತ್ತು. ಸೋಮವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಅವರ ಸಂಬಂಧಿ ಹಿತೇನ್‌ ಪೈಂತಲ್‌ ರಾಷ್ಟ್ರೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಹಿರಿಯ ನಟನ ಅಗಲಿಕೆ ಬಾಲಿವುಡ್‌ನ ಹಲವು ತಾರೆಯರು ಕಂಬನಿ ಮಿಡಿದಿದ್ದಾರೆ.

70ರ ದಶಕದಲ್ಲಿ ಸಹಾಯಕ ನಿರ್ದೇಶಕನಾಗಿ ವೃತ್ತಿ ಬದುಕು ಪ್ರಾರಂಭಿಸಿದ್ದ ಗೂಫಿ ಪೈಂತಲ್‌, 1975ರಲ್ಲಿ ರಿಷಿ ಕಪೂರ್‌ ಮುಖ್ಯಭೂಮಿಕೆಯಲ್ಲಿ ತೆರೆಕಂಡ ʼರಫೂ ಚಕ್ಕರ್‌ʼ ಚಿತ್ರದಲ್ಲಿ ಪೋಷಕ ಪಾತ್ರದಲ್ಲಿ ನಟಿಸುವ ಮೂಲಕ ಬಾಲಿವುಡ್‌ ಪ್ರವೇಶಿಸಿದರು. ʼದಿಲ್ಲಗಿʼ, ʼದೇಸ್‌ ಪರ್‌ದೇಸ್‌ʼ ʼಸುಹಾಗ್‌ʼ, ʼಮೈದಾನ್‌-ಎ-ಜಂಗ್‌ʼ, ʼದಾವಾʼ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸುವ ಮೂಲಕ ಚಿತ್ರರಂಗದಲ್ಲಿ ಗುರುತಿಸಿಕೊಂಡರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಚಿತ್ರರಂಗಕ್ಕೆ ಗುಡ್‌ಬೈ ಹೇಳಿದ ಜೆಕೆ; ಕಾರಣವೇನು?

1988ರಲ್ಲಿ ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದ ಬಿ.ಆರ್‌ ಚೋಪ್ರಾ ನಿರ್ದೇಶನದ ʼಮಹಾಭಾರತʼ ಧಾರಾವಾಹಿಯಲ್ಲಿ ಶಕುನಿಯ ಪಾತ್ರದಲ್ಲಿ ಕಾಣಿಸಿಕೊಂಡ ಗೂಫಿ, ಕಿರುತೆರೆ ಪ್ರೇಕ್ಷಕರಿಗೆ ʼಶಕುನಿ ಮಾಮʼನಾಗಿಯೇ ಚಿರಪರಿಚಿತರಾದರು. ಅದಾದ ಬಳಿಕ ಅವರು ಹೆಚ್ಚಾಗಿ ಸಿನಿಮಾಗಳಲ್ಲಿ ತೊಡಗಿಸಿಕೊಳ್ಳಲಿಲ್ಲ. ಬದಲಿಗೆ ಕಿರುತೆರೆಯಲ್ಲೇ ಮುಂದುವರೆದರು. ʼಕಾನೂನ್‌’, ʼಸೌದಾʼ, ʼಅಕ್ಬರ್‌ ಬೀರ್ಬಲ್‌ʼ, ʼಸಿಐಡಿʼ ಮುಂತಾದ ಜನಪ್ರಿಯ ಧಾರಾವಾಹಿಗಳಲ್ಲಿ ಮಿಂಚಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಕ್ಷೇಪಾರ್ಹ ದೃಶ್ಯಗಳಿದ್ದರೆ ಬಿಗ್‌ಬಾಸ್‌ ಪ್ರಸಾರ ನಿಲ್ಲಿಸಿ: ಕೇಂದ್ರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ

ಮಲಯಾಳಂ ರಿಯಾಲಿಟಿ ಶೋ ಬಿಗ್‌ಬಾಸ್‌ ಕಾರ್ಯಕ್ರಮದಲ್ಲಿ ಪ್ರಸಾರದ ನಿಯಮಾವಳಿಗಳನ್ನು ಉಲ್ಲಂಘಿಸುವ ಆಕ್ಷೇಪಾರ್ಹ...

ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಎಚ್‌ಡಿಕೆ ‘ದಾರಿತಪ್ಪಿದ ಮಗ’: ಪ್ರಕಾಶ್ ರಾಜ್

ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ...

ಖ್ಯಾತ ಕನ್ನಡ ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್​ ಆತ್ಮಹತ್ಯೆ!

ಬೆಂಗಳೂರಿನ ಜೆಟ್​ಲಾಗ್​ ಪಬ್ ಮಾಲೀಕ ಹಾಗೂ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ...