ಕೊರಳಿಗೆ ಲಕ್ಷ್ಮಿದೇವಿ ಹಾರ ಧರಿಸಿದ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು

Date:

Advertisements
  • ʼಲ್ಯಾಕ್ಮೇ ಫ್ಯಾಶನ್‌ ಶೋʼನಲ್ಲಿ ಬೋಲ್ಡ್‌ ಆಗಿ ಕಾಣಿಸಿಕೊಂಡಿದ್ದ ತಾಪ್ಸಿ ಪನ್ನು
  • ಹಿಂದೂಗಳ ಧಾರ್ಮಿಕ ಭಾವನೆ ಧಕ್ಕೆ ಉಂಟಾಯ್ತು ಎಂದು ದೂರು ದಾಖಲು

ಲಕ್ಷ್ಮಿದೇವಿಯ ಚಿತ್ರವಿರುವ ಚಿನ್ನದ ಹಾರವನ್ನು ಹಾಕಿಕೊಂಡು ಫ್ಯಾಶನ್‌ ಶೋವೊಂದರಲ್ಲಿ ಭಾಗವಹಿಸಿದ್ದಕ್ಕಾಗಿ ಬಹುಭಾಷಾ ನಟಿ ತಾಪ್ಸಿ ಪನ್ನು ಅವರ ವಿರುದ್ಧ ಮಧ್ಯಪ್ರದೇಶದ ಇಂದೋರ್‌ ಕ್ಷೇತ್ರದ ಬಿಜೆಪಿ ಶಾಸಕಿಯ ಪುತ್ರ ದೂರು ದಾಖಲಿಸಿದ್ದಾರೆ.

ನಟಿ ತಾಪ್ಸಿ ಪನ್ನು, ಮಾರ್ಚ್‌ 12ರಂದು ಮುಂಬೈನಲ್ಲಿ ನಡೆದ ʼಲ್ಯಾಕ್ಮೇ ಫ್ಯಾಶನ್‌ ವೀಕ್‌ʼನಲ್ಲಿ ಭಾಗವಹಿಸಿದ್ದರು. ಕೆಂಪು ಉಡುಗೆ ತೊಟ್ಟು, ಕೊರಳಲ್ಲಿ ಲಕ್ಷ್ಮಿ ಚಿತ್ರವಿರುವ ಚಿನ್ನದ ಹಾರವನ್ನು ಹಾಕಿಕೊಂಡು ಫ್ಯಾಶನ್‌ ಶೋನಲ್ಲಿ ಹೆಜ್ಜೆ ಹಾಕಿದ್ದ ತಾಪ್ಸಿ, ಜನರ ಗಮನ ಸೆಳೆದಿದ್ದರು. ಆ ಕ್ಷಣದ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲೂ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದರು.

ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಮಧ್ಯಪ್ರದೇಶದ ಇಂದೋರ್‌ ಶಾಸಕಿ ಮಾಲಿನಿ ಗೌರ್‌ ಅವರ ಪುತ್ರ ಏಕ್‌ಲವ್ಯ, “ಕೊರಳಲ್ಲಿ ʼಲಕ್ಷ್ಮೀದೇವಿʼಯ ಚಿತ್ರವಿರುವ ಹಾರವನ್ನು ಹಾಕಿಕೊಂಡು ಬೋಲ್ಡ್‌ ಅವತಾರದಲ್ಲಿ ಕಾಣಿಸಿಕೊಳ್ಳುವ ಮೂಲಕ ತಾಪ್ಸಿ ಪನ್ನು ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡಿದ್ದಾರೆ. ಸನಾತನ ಧರ್ಮವನ್ನು ಅವಮಾನಿಸುವ ಸಲುವಾಗಿ ಉದ್ದೇಶಪೂರ್ವಕವಾಗಿ ಈ ರೀತಿ ಮಾಡಿದ್ದಾರೆ” ಎಂದು ಆರೋಪಿಸಿ ಛತ್ರಿಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಟಾಲಿವುಡ್‌ನಲ್ಲಿ 20 ವರ್ಷ ಪೂರೈಸಿದ ಅಲ್ಲು ಅರ್ಜುನ್‌

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಛತ್ರಿಪುರ ಪೊಲೀಸ್‌ ಠಾಣೆಯ ಮುಖ್ಯ ಅಧಿಕಾರಿ ಕಪಿಲ್‌ ಶರ್ಮಾ, “ನಟಿ ತಾಪ್ಸಿ ಪನ್ನು ಅವರಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯುಂಟಾಗಿದೆ ಎಂದು ಏಕ್‌ಲವ್ಯಾ ಅವರು ದೂರು ನೀಡಿದ್ದಾರೆ. ದೂರಿನನ್ವಯ ಕ್ರಮ ಜರುಗಿಸಲಿದ್ದೇವೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X