ಐಎಂಡಿಬಿ ಟಾಪ್ 100 ಸೆಲೆಬ್ರಿಟಿಗಳಲ್ಲಿ ದೀಪಿಕಾಗೆ ಮೊದಲ ಸ್ಥಾನ; ಪಟ್ಟಿಯಲ್ಲಿ ಯಶ್‌ಗೂ ಸ್ಥಾನ

Date:

Advertisements

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರಿಗೆ ಐಎಂಡಿಬಿ ಪ್ರಕಟಿಸಿದ ಟಾಪ್​ 100 ಭಾರತೀಯ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ನಂಬರ್​ 1 ಸ್ಥಾನ ಲಭಿಸಿದೆ. ಶಾರುಖ್​ ಖಾನ್​ ಆಮಿರ್​ ಖಾನ್​, ಸಲ್ಮಾನ್​ ಖಾನ್​ ಮುಂತಾದ ಘಟಾನುಘಟಿ ನಟರನ್ನು ದೀಪಿಕಾ ಹಿಂದಿಕ್ಕಿ ತಮ್ಮ ಜನಪ್ರಿಯತೆಯನ್ನು ಉಳಿಸಿಕೊಂಡಿದ್ದಾರೆ.

2014ರ ಏಪ್ರಿಲ್​ನಿಂದ 2024ರ ಏಪ್ರಿಲ್​ ತನಕ ಐಎಂಡಿಬಿ ವೆಬ್​ಸೈಟ್​ನಲ್ಲಿ ಜನರು ಅತಿ ಹೆಚ್ಚು ವೀಕ್ಷಿಸಿದ ಸೆಲೆಬ್ರಿಟಿ ಪ್ರೊಫೈಲ್​ ಆಧಾರದ ಮೇಲೆ ಈ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಸಿನಿಮಾಗಳು, ವೆಬ್​ ಸಿರೀಸ್​ಗಳು, ಕಲಾವಿದರು ಹಾಗೂ ತಂತ್ರಜ್ಞರ ಮಾಹಿತಿಯನ್ನು ಐಎಂಡಿಬಿ ವೆಬ್​ಸೈಟ್​ ಒಳಗೊಂಡಿದೆ. ದೀಪಿಕಾ ಪಡುಕೋಣೆ ಅವರ ಪುಟವನ್ನು ಇಂಟರ್‌ನೆಟ್‌ನಲ್ಲಿ ಅತಿ ಹೆಚ್ಚಿನ ಜನರು ವೀಕ್ಷಿಸಿದ್ದಾರೆ.

ಮೊದಲ ಸ್ಥಾನದಲ್ಲಿ ದೀಪಿಕಾ ಪಡುಕೋಣೆ ಇದ್ದರೆ, 2ನೇ ಸ್ಥಾನ ಶಾರುಖ್​ ಖಾನ್ ಪಾಲಾಗಿದೆ. ಮೂರನೇ ಸ್ಥಾನದಲ್ಲಿ ಐಶ್ವರ್ಯಾ ರೈ ಬಚ್ಚನ್, 4ನೇ ಸ್ಥಾನದಲ್ಲಿ ಆಲಿಯಾ ಭಟ್​ ಇದ್ದಾರೆ. 5ನೇ ಸ್ಥಾನವನ್ನು ಇರ್ಫಾನ್​ ಖಾನ್​ ಪಡೆದುಕೊಂಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಕಾನ್ಸ್ ಚಿತ್ರೋತ್ಸವದಲ್ಲಿ ಮೈಸೂರಿನ ನಿರ್ದೇಶಕನ ಸಾಕ್ಷಚಿತ್ರಕ್ಕೆ ಮೊದಲ ಬಹುಮಾನ

ಆಮಿರ್​ ಖಾನ್​ ಅವರು 6ನೇ ಸ್ಥಾನ, 7ನೇ ಸ್ಥಾನ ಸುಶಾಂತ್​ ಸಿಂಗ್​ ರಜಪೂತ್​ ಅವರಿಗೆ ದೊರಕಿದೆ. 8ನೇ ಸ್ಥಾನದಲ್ಲಿ ಸಲ್ಮಾನ್​ ಖಾನ್​, 9ನೇ ಸ್ಥಾನದಲ್ಲಿ ಹೃತಿಕ್ ರೋಷನ್​ ಹಾಗೂ 10ನೇ ಸ್ಥಾನದಲ್ಲಿ ಅಕ್ಷಯ್​ ಕುಮಾರ್​ ಇದ್ದಾರೆ. ಈ ಪಟ್ಟಿಯಲ್ಲಿ ಸ್ಯಾಂಡಲ್‌ವುಡ್‌ ನಟ ಯಶ್ ಅವರು 89ನೇ ಸ್ಥಾನದಲ್ಲಿದ್ದಾರೆ.

ದೀಪಿಕಾ ಪಡುಕೋಣೆ ಅವರು ಅನೇಕ ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ್ದಾರೆ. ಈಗಲೂ ಅವರಿಗೆ ಹೆಚ್ಚಿನ ಬೇಡಿಕೆ ಇದೆ. ಸದ್ಯಕ್ಕೆ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇರುವ ಅವರು ಸಿನಿಮಾ ಕೆಲಸಗಳಿಂದ ಕೊಂಚ ಬ್ರೇಕ್​ ಪಡೆದುಕೊಂಡಿದ್ದಾರೆ. ‘ಸಿಂಗಂ ಅಗೇನ್​’, ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಅವರು ನಟಿಸಿದ್ದು, ಈ ಸಿನಿಮಾಗಳು ಬಿಡುಗಡೆಯಾಗಬೇಕಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X