ಡಾಲಿ ಮದುವೆ: ದರ್ಶನ್‌ಗೆ ಇಲ್ವಾ ಆಹ್ವಾನ? ಧನಂಜಯ್ ಹೇಳಿದ್ದೇನು?

Date:

Advertisements

ಬಡವರ ಮಗನಾಗಿ ಬೆಳೆದ ನಟ ಡಾಲಿ ಧನಂಜಯ್ ಅದ್ದೂರಿ ಮದುವೆಗೆ ಸಜ್ಜಾಗುತ್ತಿದ್ದಾರೆ. ಕಳೆದ ಎರಡು ತಿಂಗಳುಗಳಿಂದ ರಾಜಕೀಯ ಮತ್ತು ಸಿನಿಮಾ ರಂಗದ ನಾಯಕರು, ಪ್ರಮುಖರನ್ನು ಆಹ್ವಾನಿಸುವುದರಲ್ಲಿ ‘ಬ್ಯುಸಿ’ ಆಗಿದ್ದಾರೆ. ಆದರೆ, ಈವರೆಗೆ ನಟ ದರ್ಶನ್‌ ಅವರಿಗೆ ಧನಂಜಯ್ ಆಹ್ವಾನ ಪತ್ರಿಕೆ ನೀಡಿಲ್ಲ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ದರ್ಶನ್‌ ಅವರನ್ನು ಆಹ್ವಾನಿಸಲು ಧನಂಜಯ್ ಹಿಂದೇಟು ಹಾಕುತ್ತಿದ್ದಾರೆಯೇ ಎಂಬ ಚರ್ಚೆಗಳು ನಡೆಯುತ್ತಿವೆ. ಇದಕ್ಕೆ ಸ್ವತಃ ಧನಂಜಯ್ ಸ್ಪಷ್ಟನೆ ನೀಡಿದ್ದಾರೆ.

ಬುಧವಾರ ಪತ್ರಿಕಾಗೋಷ್ಠಿ ನಡೆಸಿರುವ ಧನಂಜಯ್ ತಮ್ಮನ್ನು ವಿವಾಹವಾಗುತ್ತಿರುವ ಧನ್ಯತಾ ಅವರನ್ನು ಪರಿಚಯಿಸಿಕೊಟ್ಟಿದ್ದಾರೆ. ಈ ವೇಳೆ, ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿರುವ ಧನಂಜಯ್, “ಎಲ್ಲರನ್ನು ಮದುವೆ ಕರೆಯುತ್ತಿದ್ದೇನೆ. ದರ್ಶನ್ ಅವರನ್ನೂ ಭೇಟಿ ಮಾಡಿ, ಕರೆಯಲು ಪ್ರಯತ್ನ ಮಾಡುತ್ತಿದ್ದೇಎ. ಆದರೆ, ಅವರನ್ನು ರೀಚ್ ಮಾಡಲು ಸಾಧ್ಯವಾಗುತ್ತಿಲ್ಲ” ಎಂದು ಹೇಳಿದ್ದಾರೆ.

ಅಂದಹಾಗೆ, ರೇಣುಕಾಸ್ವಾಮಿ ಕೊಲೆಯನ್ನು ಖಂಡಿಸಿದ್ದ ಚಿತ್ರರಂಗ ಪ್ರಮುಖರಲ್ಲಿ ಡಾಲಿ ಧನಂಜಯ್ ಕೂಡ ಒಬ್ಬರು. ದರ್ಶನ್ ಜೈಲು ಸೇರಿದ್ದ ಸಮಯದಲ್ಲಿ ಪ್ರತಿಕ್ರಿಯಿಸಿದ್ದ ಧನಂಜಯ್, “ಕೊಲೆ ಪ್ರಕರಣದ ಬಗ್ಗೆ ಏನು ಮಾತನಾಡುವುದು? ಅಲ್ಲೊಂದು ಜೀವ ಹೋಗಿದೆ. ಒಂದು ತಪ್ಪು ನಡೆದಿದೆ. ರೇಣುಕಾಸ್ವಾಮಿ ತಂದೆ ತಾಯಿ, ಪತ್ನಿಯ ಮುಖ ನೋಡಿದಾಗ ಖಂಡಿತಾ ಬೇಜಾರಾಗುತ್ತದೆ. ಕಾನೂನಿಗಿಂತ ಯಾರೂ ದೊಡ್ಡವರಿಲ್ಲ. ದರ್ಶನ್ ಸಹೋದರನಾಗಿ ಹೇಳುತ್ತಿದ್ದೇನೆ, ಅವರಿಂದ ತಪ್ಪಾಗಿದ್ದರೆ ಶಿಕ್ಷೆಯಾಗಲಿ” ಎಂದಿದ್ದರು.

Advertisements

ಹೀಗಾಗಿ, ಧನಂಜಯ್ ಅವರ ಹಿಂದಿನ ಹೇಳಿಕೆಯನ್ನು ಈಗ ತಳುಕು ಹಾಕಿಕೊಂಡು ಧನಂಜಯ್ ಅವರು ಉದ್ದೇಶಪೂರ್ವಕವಾಗಿಯೇ ತಮ್ಮ ವಿವಾಹಕ್ಕೆ ದರ್ಶನ್‌ ಅವರನ್ನು ಆಹ್ವಾನಿಸಿಲ್ಲ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ ಆದರೆ, ದರ್ಶನ್ ಅವರನ್ನು ಆಹ್ವಾನಿಸುವ ಪ್ರಯತ್ನ ಮಾಡಿದ್ದೇನೆ ಎಂದು ಧನಂಜಯ್ ಹೇಳಿದ್ದಾರೆ.

ಫೆಬ್ರವರಿ 16ರಂದು ಡಾಲಿ ಧನಂಜಯ್ ಮತ್ತು ಧನ್ಯತಾ ಅವರ ವಿವಾಹ ಮೈಸೂರಿನಲ್ಲಿ ನಡೆಯಲಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X