ಚಿತ್ರಮಂದಿರದೊಳಗೆ ಪಟಾಕಿ ಸಿಡಿಸಿದ ಅಭಿಮಾನಿಗಳು: ಭಯಭೀತರಾಗಿ ಎದ್ದುಬಿದ್ದು ಓಡಿದ ಪ್ರೇಕ್ಷಕರು

Date:

ಮಹಾರಾಷ್ಟ್ರ ರಾಜ್ಯದ ಮಾಲೆಗಾಂವ್ ಪ್ರದೇಶದಲ್ಲಿನ ಮೋಹನ್‌ ಚಿತ್ರಮಂದಿರದಲ್ಲಿ ಟೈಗರ್ 3 ಸಿನಿಮಾ ಪ್ರದರ್ಶನ ನಡೆಯುವಾಗ ಏಕಾಏಕಿ ಕೆಲ ಅಭಿಮಾನಿಗಳು ಪಟಾಕಿ ಹಚ್ಚಿದ್ದು ಥಿಯೇಟರ್ ಒಳಗೆ ಬೆಂಕಿ ಕಿಡಿ ಎಲ್ಲೆಂದರಲ್ಲಿ ಹರಡಿದೆ.

ಪಟಾಕಿಯ ಸಿಡಿತದಿಂದ ಜನರು ಹೆದರಿದ್ದು, ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ಚಿತ್ರಮಂದಿರ ತುಂಬಿದ್ದಾಗಲೇ ಕೆಲವು ಕಿಡಿಗೇಡಿಗಳು ಈ ರೀತಿಯಾಗಿ ಪಟಾಕಿ ಹಚ್ಚಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೆಗಾಂವ್ ಪೊಲೀಸರು ಇಬ್ಬರನ್ನು ಬಂಧಿಸಿ ಎಫ್‌ಐಆರ್‌ ದಾಖಲಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ದಯವಿಟ್ಟು ಬಿಟ್ಟುಬಿಡಿ, ನನಗೆ ನಾಲ್ಕು ಹೆಣ್ಣುಮಕ್ಕಳಿದ್ದಾರೆ ಎಂದು ಅಂಗಲಾಚಿದರೂ ಅತ್ಯಾಚಾರವೆಸಗಿದ ರಾಕ್ಷಸರು

ಕೇವಲ ಮಾಲೆಗಾಂವ್‌ನಲ್ಲಿ ಮಾತ್ರವಲ್ಲದೆ, ದೇಶದಾದ್ಯಂತ ಅನೇಕ ಚಿತ್ರಮಂದಿರಗಳಲ್ಲಿ ಸಲ್ಮಾನ್ ಖಾನ್ ಅಭಿಮಾನಿಗಳು ಚಿತ್ರಮಂದಿರದ ಒಳಗಡೆ ಪಟಾಕಿ ರಾಕೆಟ್ ಸಿಡಿಸಿ ಸಂಭ್ರಮಿಸಿ ಇತರ ಪ್ರೇಕ್ಷಕರ ಸಿಟ್ಟಿಗೆ ಕಾರಣರಾಗಿದ್ದಾರೆ.

ಇಂತಹ ಘಟನೆಗಳ ಬಗ್ಗೆ ಸಲ್ಮಾನ್ ಕೂಡ ಅಸಹನೆ ವ್ಯಕ್ತಪಡಿಸಿದ್ದಾರೆ. ಇಂತಹ ಕೆಲಸಗಳನ್ನು ಮಾಡಬೇಡಿ ಎಂದು ಮನವಿ ನೀಡಿದ್ದಾರೆ.

ಸಲ್ಮಾನ್ ಖಾನ್ – ಕತ್ರಿನಾ ಕೈಫ್ ಹಾಗೂ ಇಮ್ರಾನ್ ಹಶ್ಮಿ ಮುಖ್ಯಭೂಮಿಕೆಯ ‘ಟೈಗರ್ 3’ ಚಿತ್ರ ನವೆಂಬರ್ 12 ರಂದು ಬಹು ಭಾಷೆಗಳಲ್ಲಿ ತೆರೆ ಕಂಡಿದೆ. ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ 44 ಕೋಟಿ ರೂ. ಗಳಿಸಿದೆ.

 

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಕ್ಷೇಪಾರ್ಹ ದೃಶ್ಯಗಳಿದ್ದರೆ ಬಿಗ್‌ಬಾಸ್‌ ಪ್ರಸಾರ ನಿಲ್ಲಿಸಿ: ಕೇಂದ್ರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ

ಮಲಯಾಳಂ ರಿಯಾಲಿಟಿ ಶೋ ಬಿಗ್‌ಬಾಸ್‌ ಕಾರ್ಯಕ್ರಮದಲ್ಲಿ ಪ್ರಸಾರದ ನಿಯಮಾವಳಿಗಳನ್ನು ಉಲ್ಲಂಘಿಸುವ ಆಕ್ಷೇಪಾರ್ಹ...

ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಎಚ್‌ಡಿಕೆ ‘ದಾರಿತಪ್ಪಿದ ಮಗ’: ಪ್ರಕಾಶ್ ರಾಜ್

ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ...

ಖ್ಯಾತ ಕನ್ನಡ ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್​ ಆತ್ಮಹತ್ಯೆ!

ಬೆಂಗಳೂರಿನ ಜೆಟ್​ಲಾಗ್​ ಪಬ್ ಮಾಲೀಕ ಹಾಗೂ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ...