ಶಕ್ತಿ ಯೋಜನೆಯ ಪರಿಣಾಮ : ಅಪ್ಪು ಸಮಾಧಿಗೆ ಹರಿದು ಬರುತ್ತಿದೆ ಮಹಿಳಾ ಅಭಿಮಾನಿಗಳ ದಂಡು

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಚುನಾವಣೆ ಸಂದರ್ಭದಲ್ಲಿ ನೀಡಿದ್ದ 5 ಗ್ಯಾರಂಟಿಗಳ ಪೈಕಿ ಮಹಿಳೆಯರು ಉಚಿತವಾಗಿ ಬಸ್‌ಗಳಲ್ಲಿ ಸಂಚರಿಸುವ ಶಕ್ತಿ ಯೋಜನೆಯನ್ನು ಈಗಾಗಲೇ ಜಾರಿಗೆ ತಂದಿದೆ. ಈ ಯೋಜನೆ ದುಡಿಯುವ ಮಹಿಳೆಯರಿಗೆ ವರವಾಗಿ ಪರಿಣಮಿಸಿದ್ದು, ನೆಚ್ಚಿನ ಸ್ಥಳಗಳಿಗೆ ಪ್ರಯಾಣ ಬೆಳೆಸುವ ಬಯಕೆ ಹೊಂದಿದ್ದವರಿಗೂ ನೆರವಾಗಿದೆ. ಶಕ್ತಿ ಯೋಜನೆ ಜಾರಿಯಾದ ಮೇಲೆ ದಿವಂಗತ ನಟ ಪುನೀತ್‌ ರಾಜ್‌ಕುಮಾರ್‌ ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡುವ ಮಹಿಳೆಯರ ಸಂಖ್ಯೆ ಕೂಡ ಹೆಚ್ಚಿದೆ.

- Advertisement -

ಜೂನ್‌ 11ರಂದು ಶಕ್ತಿ ಯೋಜನೆಗೆ ಸಿದ್ದರಾಮಯ್ಯನವರು ಚಾಲನೆ ನೀಡಿದ ಬಳಿಕ ರಾಜ್ಯಾದ್ಯಂತ ಮಹಿಳೆಯರು ಬಸ್‌ ಪ್ರಯಾಣವನ್ನು ಆರಂಭಿಸಿದ್ದರು. ದಿನನಿತ್ಯ ದುಡಿಮೆಗಾಗಿ ಬಸ್‌ ಸಂಚಾರವನ್ನು ನೆಚ್ಚಿಕೊಂಡಿದ್ದ ಮಹಿಳೆಯರು ಸರ್ಕಾರ ಶಕ್ತಿ ಯೋಜನೆಯನ್ನು ಘೋಷಿಸಿದ್ದಕ್ಕೆ ಖುಷಿಯಾಗಿದ್ದರು. ಸಂಬಳದ ಹಣದಲ್ಲಿ ತಕ್ಕ ಮಟ್ಟಿಗೆ ಉಳಿತಾಯ ಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಹಳ್ಳಿಯ ಹೆಣ್ಣುಮಕ್ಕಳು ಕೂಡ ಶಕ್ತಿ ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದು ತಮ್ಮ ತೀರ್ಥಕ್ಷೇತ್ರಗಳು ಸೇರಿದಂತೆ ತಮ್ಮ ನೆಚ್ಚಿನ ಸ್ಥಳಗಳಿಗೆ ಪ್ರಯಾಣ ಬೆಳೆಸುತ್ತಿದ್ದಾರೆ. ಜೊತೆಗೆ ಪುನೀತ್‌ ರಾಜ್‌ಕುಮಾರ್‌ ಅವರ ಸಮಾಧಿ ಸ್ಥಳಕ್ಕೂ ಭೇಟಿ ನೀಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಪುನೀತ್‌ ಸಮಾಧಿಯ ದರ್ಶನಕ್ಕೆ ಬಂದ ಹಲವು ಮಹಿಳೆಯರು ಶಕ್ತಿ ಯೋಜನೆಯ ಬಗ್ಗೆ ಮಾತನಾಡಿದ್ದು, “ಕಳೆದ ಒಂದು ವರ್ಷದಿಂದ ಅಪ್ಪು ಸಮಾಧಿಯನ್ನು ನೋಡಬೇಕು ಎಂದುಕೊಂಡಿದ್ದೆವು. ಪ್ರಯಾಣದ ವೆಚ್ಚ ಭರಿಸಲು ನಮ್ಮಿಂದ ಸಾಧ್ಯವಾಗುವುದಿಲ್ಲ ಎಂಬ ಕಾರಣಕ್ಕೆ ಸುಮ್ಮನಿದ್ದೆವು. ಸರ್ಕಾರದವರು ಉಚಿತ ಬಸ್‌ ಪ್ರಯಾಣಕ್ಕೆ ಅನುಕೂಲ ಮಾಡಿಕೊಟ್ಟಿರುವುದರಿಂದ ಅಪ್ಪು ಅವರ ಸಮಾಧಿ ವೀಕ್ಷಿಸಿಲು ಸಾಧ್ಯವಾಯಿತು” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಆದಿಪುರುಷ್‌ ಅವಾಂತರ | ತಿರುಗು ಬಾಣವಾದ ಪ್ರಚಾರ ತಂತ್ರ

ಹೊಸಪೇಟೆ, ಇಳಕಲ್‌ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಹಲವು ಮಹಿಳೆಯರು ತಾವು ಉಚಿತ ಬಸ್‌ ಪ್ರಯಾಣದ ಅನುಕೂಲ ಪಡೆದೇ ಅಪ್ಪು ಸಮಾಧಿ ಸ್ಥಳಕ್ಕೆ ಭೇಟಿ ನೀಡಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್‌ಗೆ ತಾತ್ಕಾಲಿಕ ರಿಲೀಫ್, ‘ಮಾಫಿ ಸಾಕ್ಷಿ’ ಆದೇಶ ವಜಾ

ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ...

ದಸರಾ ಸಿನಿಮೋತ್ಸವ: ಸಂಸ್ಕೃತಿಯ ವಿಕೇಂದ್ರೀಕರಣ ಮತ್ತು ದೃಶ್ಯ ಪ್ರಜ್ಞೆಯ ಉಳಿವು

ಸಿನಿಮೋತ್ಸವಗಳನ್ನು ಲಾಭ-ನಷ್ಟದ ವ್ಯಾಪಾರಿ ಕನ್ನಡಕದಿಂದ ನೋಡುವುದು ಸರಿಯಲ್ಲ. ದಸರೆಯ ಸಾಂಸ್ಕೃತಿಕ ಘನತೆಯ...

ದೆಹಲಿಯಿಂದ ಗುಜರಾತ್‌ಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಆಯೋಜನೆಯ ಹಿಂದಿನ ಮರ್ಮವೇನು?

ಹಲವು ದಶಕಗಳಿಂದ ಅತ್ಯಂತ ಶಿಸ್ತುಬದ್ಧವಾಗಿ ನಡೆದುಕೊಂಡು ಬಂದಿದ್ದ ಸಂಪ್ರದಾಯ ಹಾಗೂ ನಿಯಮಗಳನ್ನು...