ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

Date:

Advertisements

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ ಎಂದು ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರ ಇತ್ತೀಚೆಗೆ ಪರಿಶಿಷ್ಟ ಜಾತಿ ಒಳಮೀಸಲಾತಿ ವಿವಾದಕ್ಕೆ ಪರಿಹಾರ ಘೋಷಿಸಿದೆ. ಪರಿಶಿಷ್ಟ ಜಾತಿ ಸಮುದಾಯವನ್ನು ಎಡಗೈ, ಬಲ ಮತ್ತು ಇತರೆ ಎಂಬ ಮೂರು ಗುಂಪುಗಳಾಗಿ ಮರುವರ್ಗೀಕರಣ ಮಾಡಲಾಗಿದ್ದು, ಕ್ರಮವಾಗಿ 6%, 6% ಮತ್ತು 5% ಒಳಮೀಸಲಾತಿ ನೀಡಲು ವಿಶೇಷ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಆದರೆ ತೀರಾ ಹಿಂದುಳಿದಿರುವ ಅಲೆಮಾರಿ ಸಮುದಾಯಕ್ಕೆ ಪ್ರತ್ಯೇಕವಾಗಿ ಶೇಕಡ 1ರಷ್ಟು ಒಳಮೀಸಲಾತಿ ನೀಡಬೇಕು ಎಂದು ಆಗ್ರಹ ಕೇಳಿಬಂದಿದೆ.

ಇದನ್ನು ಓದಿದ್ದೀರಾ? ಒಳಮೀಸಲಾತಿ | ಕೊನೆಗೂ ಕೂಡಿಬಂತು ಭಾಗ್ಯ, ಅಲೆಮಾರಿಗಳಿಗೆ ಕಂಟಕ!

Advertisements

ಅಲೆಮಾರಿ ಸಮುದಾಯದ ಬೆಂಬಲ ವ್ಯಕ್ತಪಡಿಸಿರುವ ನಿರ್ದೆಶಕಿ ಸುಮನ್, “ನಮ್ಮ ದೇಶದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕುಗಳು, ಮಾನವೀಯ ಜೀವನ, ಶಿಕ್ಷಣ, ಉದ್ಯೋಗ, ಆರೋಗ್ಯ ಹಾಗೂ ಸಾಮಾಜಿಕ ಭದ್ರತೆಯನ್ನು ಒದಗಿಸುವ ಭರವಸೆ ನೀಡುತ್ತದೆ. ಆದರೆ ಅಲೆಮಾರಿ ಹಾಗೂ ಅರ್ಧ ಅಲೆಮಾರಿ ಸಮುದಾಯಗಳು ಇನ್ನೂ ಸಮಾಜದ ಅಂಚಿನಲ್ಲಿ ನಿಂತು ಮೂಲಭೂತ ಹಕ್ಕುಗಳನ್ನು ಅನುಭವಿಸಲು ಹೋರಾಡುತ್ತಿರುವುದು ಕಳವಳಕಾರಿ ಸತ್ಯ” ಎಂದು ಹೇಳಿದ್ದಾರೆ.

ಹಾಗೆಯೇ, “ಪರಂಪರೆಯಿಂದಲೇ ಅಲೆಮಾರಿ ಜೀವನ ನಡೆಸಿ ಬಂದಿರುವ ಈ ಸಮುದಾಯಗಳು ಇತಿಹಾಸದಲ್ಲಿ ಅನೇಕ ಅನ್ಯಾಯಗಳಿಗೆ ಬಲಿಯಾಗಿವೆ. ಇಂದಿಗೂ ಇವರಲ್ಲಿ ಬಹುತೇಕರು ಗುರುತಿನ ದಾಖಲೆಗಳಿಲ್ಲದೆ, ಭೂಮಿ ಹಕ್ಕಿಲ್ಲದೆ, ಶಿಕ್ಷಣ ಹಾಗೂ ಆರೋಗ್ಯದ ಸೌಲಭ್ಯವಿಲ್ಲದೆ ಬದುಕುತ್ತಿದ್ದಾರೆ. ಮಕ್ಕಳು ಬಾಲ್ಯದಿಂದಲೇ ಬದುಕಿಗಾಗಿ ಕೆಲಸಕ್ಕೆ ತಳ್ಳಲ್ಪಡುತ್ತಿದ್ದಾರೆ. ಮಹಿಳೆಯರು ಸುರಕ್ಷಿತ ಬದುಕಿಗಾಗಿ ಹೋರಾಡುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

“ಈ ಅನ್ಯಾಯಗಳಿಗೆ ತೆರೆ ಬೀಳಬೇಕಾದರೆ ಸಮ ಸಮಾಜವೂ ಸಹ ಸಹಜ ಬಾಂಧವ್ಯದಿಂದ ಇವರಿಗೆ ಇಂದು ಬೆಂಬಲ ನೀಡಬೇಕಾಗಿದೆ. ಅಲೆಮಾರಿ ಸಮುದಾಯಗಳ ಕಷ್ಟಗಳನ್ನು ಅರ್ಥಮಾಡಿಕೊಂಡು ನ್ಯಾಯ ಒದಗಿಸುವುದು ನಿಜವಾದ ಸಂವಿಧಾನಿಕ ಪ್ರಜಾಸತ್ತಾತ್ಮಕ ಮನೋಭಾವನೆಯ ಪ್ರತಿಫಲ. ನಾಡಿನ ಮುಖ್ಯಮಂತ್ರಿಗಳು ನ್ಯಾಯ ಒದಗಿಸಲಿ” ಎಂದು ಆಗ್ರಹಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

Download Eedina App Android / iOS

X