ಪಠ್ಯ ಪರಿಷ್ಕರಣೆ ಮಾಡುವುದು ತಪ್ಪೇ? ಗೀತಾ ಶಿವರಾಜ್‌ಕುಮಾರ್‌

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪಠ್ಯ ಪರಿಷ್ಕರಣೆ ಮುಂದಾಗಿದೆ. ಸರ್ಕಾರದ ಈ ನಡೆಯನ್ನು ಕಾಂಗ್ರೆಸ್‌ ನಾಯಕಿ ಗೀತಾ ಶಿವರಾಜ್‌ಕುಮಾರ್‌ ಸಮರ್ಥಿಸಿಕೊಂಡಿದ್ದು, ಮಕ್ಕಳ ಅನುಕೂಲಕ್ಕಾಗಿ ಪಠ್ಯ ಪರಿಷ್ಕರಣೆ ಮಾಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.

ಶನಿವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, “ಮಕ್ಕಳಿಗೆ ಒಳ್ಳೆಯದಾಗಲಿ ಅಂತ ಪಠ್ಯ ಪರಿಷ್ಕರಣೆ ಮಾಡಿದಾಗ ಅದು ಅವರಿಗೆ ನೆರವಾಗುತ್ತದೆಯೇ ಹೊರತು ಗೊಂದಲಕ್ಕೀಡು ಮಾಡುವುದಿಲ್ಲ. ಮಕ್ಕಳಿಗೆ ಯಾವುದನ್ನು ಹೇಳಿಕೊಡಬೇಕು ಯಾವುದನ್ನು ಹೇಳಿಕೊಡಬಾರದು ಎಂಬುದು ಮೊದಲು ನಮ್ಮೆಲ್ಲರಿಗೆ ಗೊತ್ತಿರಬೇಕು” ಎಂದಿದ್ದಾರೆ.

ಇತ್ತೀಚೆಗೆ ನಡೆದ ಸಂಪುಟ ಸಭೆಯಲ್ಲಿ ಪಠ್ಯ ಪರಿಷ್ಕರಣೆಯ ಬಗ್ಗೆ ತೀರ್ಮಾನ ಮಾಡಲಾಗಿತ್ತು. ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪ, “ಆರರಿಂದ 10ನೇ ತರಗತಿ ವರೆಗಿನ ಕನ್ನಡ ಮತ್ತು ಸಮಾಜ ಪಠ್ಯ ಪುಸ್ತಕಗಳಲ್ಲಿ ಬದಲಾವಣೆ ಮಾಡಲಾಗುತ್ತಿದೆ. ಹೆಡಗೇವಾರ್‌, ವಿ.ಡಿ ಸಾವರ್ಕರ್‌, ಚಕ್ರವರ್ತಿ ಸೂಲಿಬೆಲೆ ಅವರ ಪಠ್ಯಗಳನ್ನು ಕೈಬಿಡಲಾಗುವುದು ಅವುಗಳ ಬದಲಿಗೆ ಸಾವಿತ್ರಿ ಫುಲೆ, ಅಂಬೇಡ್ಕರ್‌ ಮತ್ತು ನೆಹರು ಅವರ ಪಠ್ಯಗಳನ್ನು ಸೇರಿಸಲಾಗುವುದು” ಎಂದು ತಿಳಿಸಿದ್ದರು.

ಈ ಸುದ್ದಿ ಓದಿದ್ದೀರಾ? ‘ಯುರೋಪಿಯನ್ ಎಸ್ಸೇ ಪ್ರೈಜ್’ ಪ್ರಶಸ್ತಿಗೆ ಭಾಜನರಾದ ಅರುಂಧತಿ ರಾಯ್

ರಾಜ್ಯ ಕಾಂಗ್ರೆಸ್‌ ಸರ್ಕಾರ ಪಠ್ಯ ಪರಿಷ್ಕರಣೆಗೆ ಮುಂದಾಗುತ್ತಲೇ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿಯ ಹಲವು ನಾಯಕರು ಸಿದ್ದರಾಮಯ್ಯ ಮತ್ತು ಶಿಕ್ಷಣ ಸಚಿವರ ಈ ನಡೆ ಸೇಡಿನ ರಾಜಕೀಯದ್ದು ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲಯಾಳಂ ನಟ ದುಲ್ಕರ್ ಸಲ್ಮಾನ್‌ಗೆ ಕಸ್ಟಮ್ಸ್‌ನಿಂದ ಸಮನ್ಸ್: ಐಷಾರಾಮಿ ಕಾರುಗಳು ವಶಕ್ಕೆ

ಮಲಯಾಳಂನ ಖ್ಯಾತ ನಟ ದುಲ್ಕರ್ ಸಲ್ಮಾನ್ ಅವರ ಕೊಚ್ಚಿಯ ಎಲಂಕುಲಂ ನಿವಾಸದ...

ಪ್ರತಿಷ್ಠಿತ ‘ಫಾಲ್ಕೆ’ಯ ಮೆರಗು ಹೆಚ್ಚಿಸಿದ ಮೋಹನ್ ಲಾಲ್

ವೈವಿಧ್ಯಮಯ ಅಭಿನಯ, ಸಹಜ ಸರಳತೆ ಹಾಗೂ ಸೌಹಾರ್ದ ನಡವಳಿಕೆಯಿಂದ ಸಿನಿಪ್ರಿಯರ ಮನಗೆದ್ದ...

ಬಿಂಬ-ಬಿಂಬನ: ಗಿರೀಶ್ ಕಾಸರವಳ್ಳಿ ಅವರ ಚಿತ್ರಗಳ ಆತ್ಮಕತೆ

ಗಿರೀಶ್ ಕಾಸರವಳ್ಳಿಯವರು ತಮ್ಮ ಕೃತಿಯುದ್ದಕ್ಕೂ ಚರ್ಚಿಸಿರುವುದು ಬಿಂಬ ಮತ್ತು ಬಿಂಬನ ಹಾಗೂ...

ಮಲಯಾಳಂ ನಟ ಮೋಹನ್‌ಲಾಲ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

ಮಲಯಾಳಂ ಸಿನಿಮಾದ ಹಿರಿಯ ನಟ ಮೋಹನ್‌ಲಾಲ್ ಅವರಿಗೆ 2023ರ ಸಾಲಿನ ದಾದಾಸಾಹೇಬ್...

Download Eedina App Android / iOS

X