ʼಪುಷ್ಪ-2ʼ ನಿರ್ದೇಶಕ, ನಿರ್ಮಾಪಕರ ಮನೆ ಮೇಲೆ ಐಟಿ ದಾಳಿ

Date:

Advertisements

ʼಪುಷ್ಪ-2ʼ ಚಿತ್ರಕ್ಕೆ ಬಂಡವಾಳ ಹೂಡಿರುವ ʼಮೈತ್ರಿ ಮೂವೀ ಮೇಕರ್ಸ್‌ʼ

ʼಮೈತ್ರಿ ಮೂವೀ ಮೇಕರ್ಸ್‌ʼ ಕಚೇರಿ ಮೇಲೆ ಎರಡನೇ ಬಾರಿಗೆ ಐಟಿ ದಾಳಿ

ತೆಲುಗಿನ ಸ್ಟಾರ್‌ ನಟ ಅಲ್ಲು ಅರ್ಜುನ್‌ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ʼಪುಷ್ಪ-2ʼ ಚಿತ್ರದ ನಿರ್ದೇಶಕ ಸುಕುಮಾರ್‌ ಮತ್ತು ಚಿತ್ರಕ್ಕೆ ಬಂಡವಾಳ ಹೂಡಿರುವ ನಿರ್ಮಾಪಕರ ಮನೆ ಹಾಗೂ ಕಚೇರಿಗಳ ಮೇಲೆ ʼಐಟಿʼ (ಆದಾಯ ತೆರಿಗೆ ಇಲಾಖೆ) ಅಧಿಕಾರಿಗಳು ಎರಡನೇ ಬಾರಿಗೆ ದಾಳಿ ನಡೆಸಿದ್ದಾರೆ.

Advertisements

ಬುಧವಾರ ಬೆಳಗಿನ ಜಾವದ ಹೊತ್ತಿಗೆ ʼಐಟಿʼ ಅಧಿಕಾರಿಗಳ ಒಂದು ತಂಡ ಸುಕುಮಾರ್‌ ಅವರ ಮನೆ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿದೆ. ಇದೇ ಸಮಯಕ್ಕೆ ʼಪುಷ್ಟ-2ʼ ಸೇರಿದಂತೆ ಟಾಲಿವುಡ್‌ನ ಹಲವು ಸೂಪರ್‌ ಹಿಟ್‌ ಚಿತ್ರಗಳಿಗೆ ಬಂಡವಾಳ ಹೂಡಿರುವ ʼಮೈತ್ರಿ ಮೂವೀ ಮೇಕರ್ಸ್‌ʼ ಸಂಸ್ಥೆಯ ಮಾಲೀಕರಾದ ನವೀನ್‌ ಯರ್ನೇನಿ ಮತ್ತು ಯಲಮಂಚಿಲಿ ರವಿಶಂಕರ್‌ ಅವರ ಕಚೇರಿ ಹಾಗೂ ಮನೆಗಳ ಮೇಲೂ ಅಧಿಕಾರಿಗಳ ಗುಂಪು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸುತ್ತಿದೆ.

ನಿರ್ದೇಶಕ ಸುಕುಮಾರ್‌ ಇತ್ತೀಚೆಗೆ ʼಸುಕುಮಾರ್‌ ರೈಟಿಂಗ್ಸ್‌ʼ ಎಂಬ ತಮ್ಮ ಸ್ವಂತ ಚಿತ್ರ ನಿರ್ಮಾಣ ಸಂಸ್ಥೆಯನ್ನು ಹುಟ್ಟು ಹಾಕಿದ್ದು, ʼವಿರುಪಾಕ್ಷʼ ಎಂಬ ಚಿತ್ರವನ್ನು ನಿರ್ಮಿಸಿದ್ದಾರೆ. ಸಾಯಿಧರ್ಮ ತೇಜ್‌ ಮುಖ್ಯಭೂಮಿಕೆ ನಿಭಾಯಿಸಿರುವ ಈ ಚಿತ್ರ ಇದೇ ಏಪ್ರಿಲ್‌ 21ಕ್ಕೆ ತೆರೆ ಕಾಣಲಿದೆ. ಇದರ ಜೊತೆಗೆ ಸುಕುಮಾರ್‌ ʼಪುಷ್ಪ-2ʼ ಚಿತ್ರದ ಸಹ ನಿರ್ಮಾಪಕರಾಗಿಯೂ ಗುರುತಿಸಿಕೊಂಡಿದ್ದಾರೆ. ಬಹುಕೋಟಿ ವ್ಯವಹಾರ ನಡೆಸುತ್ತಿರುವ ಸುಕುಮಾರ್‌ ಜಿಎಸ್‌ಟಿ ನಿಯಮಗಳನ್ನು ಉಲ್ಲಂಘಿಸಿ, ತೆರಿಗೆ ವಂಚನೆ ಮಾಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಇದೇ ಕಾರಣಕ್ಕೆ ʼಐಟಿʼ ಅಧಿಕರಿಗಳು ದಿಢೀರ್‌ ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ನಟ ಚೇತನ್‌ ವೀಸಾ ರದ್ದು: ಸರ್ಕಾರದ ಅತಿರೇಕ ಎಂದ ಕಿಶೋರ್‌

ಇನ್ನು ನವೀನ್‌ ಯರ್ನೇನಿ ಮತ್ತು ಯಲಮಂಚಿಲಿ ರವಿಶಂಕರ್‌ ಒಡೆತನದ ʼಮೈತ್ರಿ ಮೂವೀ ಮೇಕರ್ಸ್‌ʼ ಮೇಲೂ ತೆರಿಗೆ ವಂಚನೆಯ ಆರೋಪಗಳಿವೆ. ಇವರಿಬ್ಬರೂ ಬಂಡವಾಳ ಹೂಡಿದ್ದ ʼವಾಲ್ಟರ್‌ ವೀರಯ್ಯʼ ಮತ್ತು ʼವೀರ ಸಿಂಹ ರೆಡ್ಡಿʼ ಚಿತ್ರಗಳು ಗಲ್ಲಾ ಪೆಟ್ಟಿಗೆಯಲ್ಲಿ ಭಾರೀ ಯಶಸ್ಸು ಗಳಿಸಿದ್ದವು. ಈ ಸಿನಿಮಾಗಳ ವ್ಯವಹಾರದಲ್ಲಿ ತೆರಿಗೆ ವಂಚನೆ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ನಿರ್ಮಾಪಕರುಗಳು ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲೂ ʼಮೈತ್ರಿ ಮೂವೀ ಮೇಕರ್ಸ್‌ʼ ಸಂಸ್ಥೆಯ ಮುಖ್ಯಸ್ಥರ ಮನೆ ಹಾಗೂ ಕಚೇರಿಗಳ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X