ನಿರೀಕ್ಷೆ ಹೆಚ್ಚಿಸಿದ ʼರಾಘವೇಂದ್ರ ಸ್ಟೋರ್ಸ್‌ʼ ಟ್ರೈಲರ್‌

Date:

Advertisements

ಏಪ್ರಿಲ್‌ 28ಕ್ಕೆ ರಾಘವೇಂದ್ರ ಸ್ಟೋರ್ಸ್‌ ತೆರೆಗೆ

ಸಿದ್ಧಮಂತ್ರಕ್ಕೆ ಜೋತುಬಿದ್ದ ಹಿರಿಯ ನಟ ಜಗ್ಗೇಶ್‌

ಹಿರಿಯ ನಟ ಜಗ್ಗೇಶ್‌ ಅಭಿನಯದ ಬಹುನಿರೀಕ್ಷಿತ ʼರಾಘವೇಂದ್ರ ಸ್ಟೋರ್ಸ್‌ʼ ಚಿತ್ರದ ಟ್ರೈಲರ್‌ ಸೋಮವಾರ ಬಿಡುಗಡೆಯಾಗಿದೆ. ಬ್ರಹ್ಮಚಾರಿಯ ಬದುಕಿನ ಸುತ್ತ ಹಾಸ್ಯಮಯವಾಗಿ ಮೂಡಿಬಂದಿರುವ ಚಿತ್ರದ ಟ್ರೈಲರ್‌ ಯುಟ್ಯೂಬ್‌ನಲ್ಲಿ ಸಖತ್‌ ಸದ್ದು ಮಾಡುತ್ತಿದೆ.

Advertisements

ಚಿತ್ರದಲ್ಲಿ ಜಗ್ಗೇಶ್‌ ಬಾಣಸಿಗನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹೋಟೆಲ್‌ನಲ್ಲಿ ಅಡುಗೆ ಮಾಡುವವನು ಎಂಬ ಕಾರಣಕ್ಕೆ ಹೆಣ್ಣು ಸಿಗದೆ ಬ್ರಹ್ಮಚಾರಿಯಾಗಿ ಉಳಿದ ವ್ಯಕ್ತಿಯ ಬದುಕಿನ ಸುತ್ತ ಹಾಸ್ಯಮಯವಾಗಿ ಚಿತ್ರದ ಕಥೆಯನ್ನು ಹೆಣೆಯಲಾಗಿದೆ. ಶ್ವೇತಾ ಶ್ರೀವಾತ್ಸವ್‌ ಚಿತ್ರದಲ್ಲಿ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಹಿರಿಯ ನಟ ದತ್ತಣ್ಣ, ಅಚ್ಯುತ್‌ ಕುಮಾರ್‌ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ʼನೀರ್‌ದೋಸೆʼ, ʼತೋತಾಪುರಿʼ ಸೇರಿದಂತೆ ಇತ್ತೀಚಿನ ಚಿತ್ರಗಳಲ್ಲಿ ತಾವು ನಿಭಾಯಿಸಿರುವ ರೀತಿಯ ಪಾತ್ರಗಳಿಗೆ ಜಗ್ಗೇಶ್‌ ಮತ್ತೆ ಮತ್ತೆ ಜೋತು ಬೀಳುತ್ತಿರುವುದು ಬೇಸರದ ಸಂಗತಿ.

ʼರಾಜಕುಮಾರʼ, ʼಯುವರತ್ನʼ ಮುಂತಾದ ಸೂಪರ್‌ ಹಿಟ್‌ ಚಿತ್ರಗಳಿಗೆ ಆ್ಯಕ್ಷನ್ ಕಟ್‌ ಹೇಳಿದ್ದ ಖ್ಯಾತ ನಿರ್ದೇಶಕ ಸಂತೋಷ್‌ ಆನಂದ್‌ರಾಮ್‌ ಈ ಹಾಸ್ಯ ಪ್ರಧಾನ ಚಿತ್ರವನ್ನು ನಿರ್ದೇಶಿಸಿದ್ದಾರೆ. ಕನ್ನಡದ ಜನಪ್ರಿಯ ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್‌ ಈ ಚಿತ್ರಕ್ಕೆ ಬಂಡವಾಳ ಹೂಡಿದೆ. ಅಜನೀಶ್‌ ಲೋಕನಾಥ್‌ ಹಿನ್ನೆಲೆ ಸಂಗೀತ ನೀಡಿದ್ದಾರೆ.

ಟೈಟಲ್‌ ಮತ್ತು ಪಾತ್ರವರ್ಗದ ಕಾರಣಕ್ಕೆ ನಿರೀಕ್ಷೆ ಹೆಚ್ಚಿಸಿದ್ದ ಈ ಚಿತ್ರ 2022 ಆಗಸ್ಟ್‌ 5 ರಂದು ತೆರೆಗೆ ಬರಬೇಕಿತ್ತು. ಆದರೆ, ಚಿತ್ರತಂಡ ಕಾರಣಾಂತರಗಳಿಂದ ಬಿಡುಗಡೆ ದಿನಾಂಕವನ್ನು ಮುಂದೂಡಿತ್ತು. ಲಿರಿಕಲ್‌ ಹಾಡು ಮತ್ತು ಟ್ರೈಲರ್‌ ಮೂಲಕ ಸದ್ಯ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರ ಏಪ್ರಿಲ್‌ 28ಕ್ಕೆ ತೆರೆಗೆ ಬರಲಿದೆ.

c6d189e709d010a95cabcbe8c5246c21
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X