ನಿರೀಕ್ಷೆ ಹೆಚ್ಚಿಸಿದ ʼಅಜ್ಞಾತವಾಸಿʼ ಟೀಸರ್

Date:

ʼಅಜ್ಞಾತವಾಸಿʼ ಟೀಸರ್‌ ಮೆಚ್ಚಿಕೊಂಡ ಸಿನಿಮಾ ಮಂದಿ

ಎರಡು ಲಕ್ಷ ವೀಕ್ಷಣೆ ಪಡೆದ ಕುತೂಹಲಕಾರಿ ಟೀಸರ್‌

ʼಗುಲ್ಟೂʼ ಖ್ಯಾತಿಯ ನಿರ್ದೇಶಕ ಜನಾರ್ಧನ್‌ ಚಿಕ್ಕಣ್ಣ ನಿರ್ದೇಶನದ ʼಅಜ್ಞಾತವಾಸಿʼ ಚಿತ್ರದ ಬಹುನಿರೀಕ್ಷಿತ ಟೀಸರ್‌ ಬಿಡುಗಡೆಯಾಗಿದ್ದು, ಸಿನಿ ರಸಿಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ʼಅಜ್ಞಾತವಾಸಿʼ ಚಿತ್ರ, ಹಳ್ಳಿಯೊಂದರಲ್ಲಿ ಸರಣಿಯಾಗಿ ನಡೆಯುವ ಅನುಮಾನಾಸ್ಪದ ಸಾವುಗಳ ಸುತ್ತ ಮೂಡಿಬಂದಿದೆ ಎಂಬುದನ್ನು ಟೀಸರ್‌ನಲ್ಲಿ ಸೂಚ್ಯವಾಗಿ ತೋರಿಸಲಾಗಿದೆ. ಸಿದ್ದು ಮೂಲಿಮನಿ ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ರಂಗಾಯಣ ರಘು, ಪಾವನಾ ಗೌಡ, ಶರತ್‌ ಲೋಹಿತಾಶ್ವ, ರವಿಶಂಕರ್‌ ಗೌಡ ಮುಂತಾದವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಭಿನ್ನ ಶೀರ್ಷಿಕೆ ಮತ್ತು ಕುತೂಹಲಕಾರಿ ಟೀಸರ್‌ ಮೂಲಕ ಗಮನ ಸೆಳೆಯುತ್ತಿರುವ ʼಅಜ್ಞಾತವಾಸಿʼ ಚಿತ್ರಕ್ಕೆ ಬಾಲಿವುಡ್‌ ನಟ ರಿತೇಶ್‌ ದೇಶ್‌ಮುಖ್‌, ಜೆನಿಲಿಯಾ, ಕಿಚ್ಚ ಸುದೀಪ್‌, ಗೋಲ್ಡನ್‌ ಸ್ಟಾರ್‌ ಗಣೇಶ್‌ ಸೇರಿದಂತೆ ಹಲವು ಸ್ಟಾರ್‌ ನಟರು ಟ್ವೀಟ್‌ ಮೂಲಕ ಶುಭಕೋರಿದ್ದಾರೆ.

ಖ್ಯಾತ ಸಂಗೀತ ನಿರ್ದೇಶಕ ಚರಣ್‌ ರಾಜ್‌ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದು, ಹೇಮಂತ್‌ ರಾವ್‌, ಪ್ರಚುರ ಮತ್ತು ಜಯಲಕ್ಷ್ಮಿ ಎಂಬುವವರು ಬಂಡವಾಳ ಹೂಡಿದ್ದಾರೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆರೋಗ್ಯದಲ್ಲಿ ದಿಢೀರ್ ಏರುಪೇರು: ಬಿಗ್‌ಬಿ ಅಮಿತಾಭ್ ಬಚ್ಚನ್ ಆಸ್ಪತ್ರೆಗೆ ದಾಖಲು

ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಅವರ ಆರೋಗ್ಯದಲ್ಲಿ ದಿಢೀರ್ ಆಗಿ...

ಅಶ್ಲೀಲ ವಿಡಿಯೋ ಪ್ರಸಾರ : 18 ಒಟಿಟಿ, 19 ವೆಬ್‌ಸೈಟ್‌ಗಳನ್ನು ನಿಷೇಧಿಸಿದ ಕೇಂದ್ರ

ಹಲವು ಎಚ್ಚರಿಕೆಗಳ ನಡುವೆಯೂ ಅಶ್ಲೀಲ ವಿಡಿಯೋಗಳನ್ನು ಪ್ರಸಾರ ಮಾಡುತ್ತಿದ್ದ 18 ಒಟಿಟಿ...

ತುಮಕೂರು | ತುಕಾಲಿ ಸಂತೋಷ್‌ ಕಾರು ಅಪಘಾತ; ಆಟೋ ಚಾಲಕ ಸಾವು

ಬಿಗ್‌ಬಾಸ್‌ ಸೀಸನ್ 10ರ ಸ್ಪರ್ಧಿ, ಹಾಸ್ಯ ನಟ ತುಕಾಲಿ ಸಂತೋಷ್ ಅವರ...

ದೇಶ ವಿಭಜಿಸಲು, ಸೌಹಾರ್ದತೆ ಕದಡಲು ಸಿಎಎ ಜಾರಿ: ನಟ ಕಮಲ್ ಹಾಸನ್

ಸಾರ್ವತ್ರಿಕ ಚುನಾವಣೆಗೆ ಮುನ್ನ ಜನರನ್ನು ವಿಭಜಿಸಲು ಮತ್ತು ಸಾಮರಸ್ಯವನ್ನು ನಾಶಮಾಡಲು ಕೇಂದ್ರ...