ಕಾರ್ತಿ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯ್ತು ʼಜಪಾನ್‌ʼ ಟೀಸರ್‌

Date:

Advertisements

46ನೇ ವಸಂತಕ್ಕೆ ಕಾಲಿಟ್ಟ ಕಾರ್ತಿ

ತೆರೆಗೆ ಸಜ್ಜಾದ 25ನೇ ಸಿನಿಮಾ

ತಮಿಳಿನ ಖ್ಯಾತ ನಟ ಕಾರ್ತಿ ಗುರುವಾರ 46ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟುಹಬ್ಬದ ಸಂಭ್ರಮದಲ್ಲಿರುವ ನಟನಿಗೆ ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬುರತ್ತಿದೆ. ಇದೇ ವೇಳೆ ಕಾರ್ತಿ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ಬಹುನಿರೀಕ್ಷಿತ ʼಜಪಾನ್‌ʼ ಚಿತ್ರದ ಟೀಸರ್‌ ಕೂಡ ಬಿಡುಗಡೆಯಾಗಿದೆ.

Advertisements

ಹುಟ್ಟು ಹಬ್ಬಕ್ಕೆ ಉಡುಗೊರೆಯ ರೂಪದಲ್ಲಿ ಬಿಡುಗಡೆಯಾಗಿರುವ ʼಜಪಾನ್‌ʼ ಚಿತ್ರದ ಟೀಸರ್‌ನಲ್ಲಿ ಕಾರ್ತಿ ಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಒಮ್ಮೆ ಖಳನಾಗಿ, ಇನ್ನೊಮ್ಮೆ ಹಾಸ್ಯಗಾರನಾಗಿ ಮತ್ತೊಮ್ಮೆ ನಾಯಕನಾಗಿ ಕಾಣಿಸಿಕೊಳ್ಳುವ ಕಾರ್ತಿ ತಮ್ಮ ಪಾತ್ರ ಮತ್ತು ಚಿತ್ರದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದ್ದಾರೆ. ಈ ಚಿತ್ರದ ಶೀರ್ಷಿಕೆ ಮಾತ್ರವಲ್ಲ ನಾಯಕನ ಹೆಸರು ಕೂಡ ʼಜಪಾನ್‌ʼ ಎಂಬುದು ಗಮನಾರ್ಹ.

ಸಸ್ಪೆನ್ಸ್‌, ಕ್ರೈಂ, ಆ್ಯಕ್ಷನ್ ಕಥಾಹಂದರವುಳ್ಳ ʼಜಪಾನ್‌ʼ ಚಿತ್ರವನ್ನು ತಮಿಳಿನ ಖ್ಯಾತ ನಿರ್ದೇಶಕ ರಾಜು ಮುರುಗನ್ ನಿರ್ದೇಶಿಸಿದ್ದಾರೆ. ನಟಿ ಅನು ಇಮ್ಯಾನುಯೆಲ್ ಕಾರ್ತಿಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದು, ತೆಲುಗಿನ ಜನಪ್ರಿಯ ನಟ ಸುನಿಲ್ ಈ ಚಿತ್ರದ ಮೂಲಕ ತಮಿಳುಚಿತ್ರರಂಗ ಪ್ರವೇಶಿಸುತ್ತಿರುವುದು ವಿಶೇಷ.

ಈ ಸುದ್ದಿ ಓದಿದ್ದೀರಾ? ಕೇರಳದ ಅಸಲಿ ಕಥೆಯೇ ಬೇರೆ : ಪಿಣರಾಯಿ ವಿಜಯನ್‌

ಭಿನ್ನ ಶೀರ್ಷಿಕೆ, ಮೇಕಿಂಗ್‌ ಮತ್ತು ಟೀಸರ್‌ ಮೂಲಕ ಸದ್ದು ಮಾಡುತ್ತಿರುವ ʼಜಪಾನ್‌ʼ ಸಿನಿಮಾ ದೀಪಾವಳಿ ಹಬ್ಬಕ್ಕೆ ತೆರೆಗೆ ಬರಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ತಮಿಳು, ಕನ್ನಡ, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ಸಿದ್ಧಗೊಳ್ಳುತ್ತಿರುವ ಈ ಚಿತ್ರವನ್ನು ʼಡ್ರೀಮ್ ವಾರಿಯರ್ ಪಿಕ್ಚರ್ಸ್ʼ ಬ್ಯಾನರ್‌ನಡಿ ಎಸ್‌.ಆರ್‌ ಪ್ರಕಾಶ್ ಬಾಬು ಮತ್ತು ಪ್ರಭು ಜಂಟಿಯಾಗಿ ನಿರ್ಮಿಸಿದ್ದಾರೆ. ಈ ಚಿತ್ರಕ್ಕೆ ತಮಿಳಿನ ಖ್ಯಾತ ಸಂಗೀತ ನಿರ್ದೇಶಕ ಜಿ.ವಿ ಪ್ರಕಾಶ್‌ ಅವರ ಹಿನ್ನೆಲೆ ಸಂಗೀತವಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X