ಪ್ರಭಾಸ್‌ ಜೊತೆ ತೆರೆ ಹಂಚಿಕೊಳ್ಳಲು ಸಜ್ಜಾದ ಕಮಲ್‌ ಹಾಸನ್‌

Date:

Advertisements
  • ಮೂರು ದಶಕಗಳ ಬಳಿಕ ಬಚ್ಚನ್‌ ಜೊತೆಯಾದ ಕಮಲ್‌ ಹಾಸನ್‌
  • ಕಮಲ್‌ ಹಾಸನ್‌ಗೆ ಆತ್ಮೀಯವಾಗಿ ಸ್ವಾಗತ ಕೋರಿದ ಅಮಿತಾಭ್

ತಮಿಳಿನ ಹಿರಿಯ ನಟ ಕಮಲ್‌ ಹಾಸನ್‌ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ʼವಿಕ್ರಮ್‌ʼ ಸಿನಿಮಾದ ಯಶಸ್ಸಿನ ಬಳಿಕ ʼಇಂಡಿಯನ್‌ 2ʼ ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿರುವ ಅವರು ಇದೀಗ ಪ್ರಭಾಸ್‌ ಮುಖ್ಯಭೂಮಿಕೆಯ ಇನ್ನೂ ಹೆಸರಿಡದ ʼಪ್ರಾಜೆಕ್ಟ್‌ ಕೆʼ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವುದಾಗಿ ಘೋಷಿಸಿದ್ದಾರೆ.

ಈ ಮಲ್ಟಿಸ್ಟಾರರ್‌ ಸಿನಿಮಾದಲ್ಲಿ ಕಮಲ್‌ ಹಾಸನ್‌ ಖಳನ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ವಿಶೇಷ ಪಾತ್ರದಲ್ಲಿ ನಟಿಸುವ ಸಲುವಾಗಿ ಅಂದಾಜು 100 ಕೋಟಿ ರೂಪಾಯಿ ಸಂಭಾವನೆಗೆ ಬೇಡಿಕೆ ಇಟ್ಟಿದ್ದಾರೆ ಎಂಬ ಚರ್ಚೆ ಕೂಡ ಶುರುವಾಗಿದೆ.

ಪ್ರಭಾಸ್‌ ಮುಖ್ಯಭೂಮಿಕೆಯಲ್ಲಿ ಮೂಡಿಬರುತ್ತಿರುವ ʼಪ್ರಾಜೆಕ್ಟ್‌ ಕೆʼ ಚಿತ್ರದಲ್ಲಿ ಬಾಲಿವುಡ್‌ನ ಹಿರಿಯ ನಟ ಅಮಿತಾಭ್ ಬಚ್ಚನ್‌ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಖ್ಯಾತ ನಟಿಯರಾದ ದೀಪಿಕಾ ಪಡುಕೊಣೆ ಮತ್ತು ದಿಶಾ ಪಠಾಣಿ ಕೂಡ ಚಿತ್ರತಂಡದ ಭಾಗವಾಗಿದ್ದಾರೆ.

Advertisements

1984ರಲ್ಲಿ ತೆರೆಕಂಡಿದ್ದ ʼಖಬರ್ದಾರ್‌ʼ ಮತ್ತು ʼಗಿರಫ್ತಾರ್‌ʼ ಚಿತ್ರಗಳಲ್ಲಿ ಅಮಿತಾಭ್ ಬಚ್ಚನ್‌ ಮತ್ತು ಕಮಲ್‌ ಹಾಸನ್‌ ಜೊತೆಯಾಗಿ ನಟಿಸಿದ್ದರು. ಮೂರು ದಶಕಗಳ ಬಳಿಕ ಈ ಲೆಜೆಂಡ್‌ಗಳು ಮತ್ತೆ ಒಂದಾಗುತ್ತಿದ್ದು, ಅಮಿತಾಭ್ ಬಚ್ಚನ್‌ ಅವರು ಟ್ವೀಟ್‌ ಮಾಡುವ ಮೂಲಕ ಕಮಲ್‌ ಹಾಸನ್‌ ಅವರನ್ನು ʼಪ್ರಾಜೆಕ್ಟ್‌ ಕೆʼ ಸ್ವಾಗತಿಸಿದ್ದಾರೆ.

ʼಮಹಾನಟಿʼ ಖ್ಯಾತಿಯ ನಿರ್ದೇಶಕ ನಾಗ್‌ ಅಶ್ವಿನ್‌ ಈ ಬಹುನಿರೀಕ್ಷಿತ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ತಾರಾಗಣದ ಮೂಲಕವೇ ಕುತೂಹಲ ಹೆಚ್ಚಿಸಿರುವ ಈ ಚಿತ್ರಕ್ಕೆ ಹಿರಿಯ ನಿರ್ಮಾಪಕ ಅಶ್ವಿನಿ ದತ್‌ ಬಂಡವಾಳ ಹೂಡಿದ್ದಾರೆ. ಸಂತೋಷ್‌ ನಾರಾಯಣನ್‌ ಅವರ ಹಿನ್ನೆಲೆ ಸಂಗೀತ ಈ ಚಿತ್ರಕ್ಕಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

Download Eedina App Android / iOS

X