ಸಿದ್ದರಾಮಯ್ಯ ಪದಗ್ರಹಣ ಸಮಾರಂಭಕ್ಕೆ ಸಾಕ್ಷಿಯಾದ ಸಿನಿ ತಾರೆಯರು

Date:

  • ನೂತನ ಸಿಎಂ ಸಿದ್ದರಾಮಯ್ಯನವರನ್ನು ಅಭಿನಂದಿಸಿದ ಕಮಲ್‌ ಹಾಸನ್‌
  • ಕಾಂಗ್ರೆಸ್‌ ಸರ್ಕಾರ ಜನರ ನಿರೀಕ್ಷೆ ತಕ್ಕಂತೆ ಕೆಲಸ ಮಾಡಲಿದೆ ಎಂದ ಶಿವಣ್ಣ

ಶನಿವಾರ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪದಗ್ರಹಣ ಕಾರ್ಯಕ್ರಮಕ್ಕೆ ತಮಿಳಿನ ಹಿರಿಯ ನಟ, ರಾಜಕಾರಣಿ ಕಮಲ್‌ ಹಾಸನ್‌, ಕನ್ನಡದ ಖ್ಯಾತ ನಟ ಶಿವರಾಜ್‌ ಕುಮಾರ್‌ ಸೇರಿದಂತೆ ಹಲವು ತಾರೆಯರು ಸಾಕ್ಷಿಯಾಗಿದ್ದಾರೆ.

ಈ ಹಿಂದೆ ದೆಹಲಿಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಜೊತೆಗೆ ಭಾರತ್‌ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದ ಕಮಲ್‌ ಹಾಸನ್‌, ಸಿದ್ದರಾಮಯ್ಯನವರ ಪದಗ್ರಹಣ ಕಾರ್ಯಕ್ರಮದಲ್ಲೂ ಭಾಗಿಯಾಗಿ ನೂತನ ಸಂಪುಟದ ಸದಸ್ಯರನ್ನು ಅಭಿನಂದಿಸಿದ್ದಾರೆ.

ಕಾಂಗ್ರೆಸ್‌ ನಾಯಕರ ಪರ ಚುನಾವಣಾ ಪ್ರಚಾರ ಮಾಡಿದ್ದ ಸ್ಯಾಂಡಲ್‌ವುಡ್‌ನ ಖ್ಯಾತ ಶಿವರಾಜ್‌ ಕುಮಾರ್‌ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಂಠೀರವ ಸ್ಟೇಡಿಯಂ ಪ್ರವೇಶಿಸುತ್ತಲೇ ಮಾಧ್ಯಮದವರೊಂದಿಗೆ ಮಾತನಾಡಿದ ಶಿವಣ್ಣ, “ಜನರು ಬದಲಾವಣೆಯನ್ನು ಬಯಸಿ ಕಾಂಗ್ರೆಸ್‌ ಪಕ್ಷಕ್ಕೆ ಸ್ಪಷ್ಟ ಬಹುಮತವನ್ನು ನೀಡಿದ್ದಾರೆ. ಜನರ ನಿರೀಕ್ಷೆಗೆ ತಕ್ಕಂತೆ ಸರ್ಕಾರ ನಡೆಯಬೇಕು ಎಂಬುದು ನನ್ನ ಆಸೆ. ಆ ರೀತಿಯಲ್ಲಿ ಸಿದ್ದರಾಮಯ್ಯನವರ ಸರ್ಕಾರ ಸೇವೆ ಸಲ್ಲಿಸಲಿದೆ ಎಂದು” ಭರವಸೆ ವ್ಯಕ್ತಪಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನಟಿ, ಮಾಜಿ ಸಂಸದೆ ರಮ್ಯಾ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ವೇದಿಕೆ ಏರುವ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, “ಕಾಂಗ್ರೆಸ್‌ ಜನರ ನಿರೀಕ್ಷೆಗಳನ್ನು ಹುಸಿಗೊಳಿಸುವುದಿಲ್ಲ ಎಂದು ನನಗೆ ಗೊತ್ತಿದೆ. ಕಳೆದ ಬಾರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಉತ್ತಮ ಆಡಳಿತ ನೀಡಿದ್ದರು. 5 ಗ್ಯಾರಂಟಿಗಳನ್ನು ಕೂಡ ಕಾಂಗ್ರೆಸ್‌ ಸರ್ಕಾರ ಪೂರ್ಣಗೊಳಿಸಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈದಿನ ವಿಶೇಷ | ಬೊಮ್ಮಾಯಿ ಮಾಮನ ದುರಹಂಕಾರ: ನೋವು ತೋಡಿಕೊಂಡ ಪವನ್ ಕುಮಾರ

ಹಿರಿಯ ನಟಿ, ಮಾಜಿ ಸಚಿವೆ ಉಮಾಶ್ರೀ, ನಟ ದುನಿಯಾ ವಿಜಯ್‌, ಯುವನಟಿ ನಿಶ್ವಿಕಾ ನಾಯ್ಡು, ಝೈದ್‌ ಖಾನ್‌, ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್‌ ಬಾಬು ಸೇರಿದಂತೆ ಸ್ಯಾಂಡಲ್‌ವುಡ್‌ನ ಹಲವು ತಾರೆಯರು ಸಿದ್ದರಾಮಯ್ಯ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆರೋಗ್ಯದಲ್ಲಿ ದಿಢೀರ್ ಏರುಪೇರು: ಬಿಗ್‌ಬಿ ಅಮಿತಾಭ್ ಬಚ್ಚನ್ ಆಸ್ಪತ್ರೆಗೆ ದಾಖಲು

ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಅವರ ಆರೋಗ್ಯದಲ್ಲಿ ದಿಢೀರ್ ಆಗಿ...

ಅಶ್ಲೀಲ ವಿಡಿಯೋ ಪ್ರಸಾರ : 18 ಒಟಿಟಿ, 19 ವೆಬ್‌ಸೈಟ್‌ಗಳನ್ನು ನಿಷೇಧಿಸಿದ ಕೇಂದ್ರ

ಹಲವು ಎಚ್ಚರಿಕೆಗಳ ನಡುವೆಯೂ ಅಶ್ಲೀಲ ವಿಡಿಯೋಗಳನ್ನು ಪ್ರಸಾರ ಮಾಡುತ್ತಿದ್ದ 18 ಒಟಿಟಿ...

ತುಮಕೂರು | ತುಕಾಲಿ ಸಂತೋಷ್‌ ಕಾರು ಅಪಘಾತ; ಆಟೋ ಚಾಲಕ ಸಾವು

ಬಿಗ್‌ಬಾಸ್‌ ಸೀಸನ್ 10ರ ಸ್ಪರ್ಧಿ, ಹಾಸ್ಯ ನಟ ತುಕಾಲಿ ಸಂತೋಷ್ ಅವರ...

ದೇಶ ವಿಭಜಿಸಲು, ಸೌಹಾರ್ದತೆ ಕದಡಲು ಸಿಎಎ ಜಾರಿ: ನಟ ಕಮಲ್ ಹಾಸನ್

ಸಾರ್ವತ್ರಿಕ ಚುನಾವಣೆಗೆ ಮುನ್ನ ಜನರನ್ನು ವಿಭಜಿಸಲು ಮತ್ತು ಸಾಮರಸ್ಯವನ್ನು ನಾಶಮಾಡಲು ಕೇಂದ್ರ...