ಕನ್ನಡ ಚಿತ್ರರಂಗದ ಹಿರಿಯ ನಟ ‘ಸರಿಗಮ ವಿಜಿ’ ನಿಧನ

Date:

Advertisements

ಕನ್ನಡ ಚಿತ್ರರಂಗದ ಹಿರಿಯ ನಟ, ‘ಸರಿಗಮ ವಿಜಿ’ ಎಂದೇ ಖ್ಯಾತರಾದ ನಟ ವಿಜಯಕುಮಾರ್ ಬುಧವಾರ ನಿಧನರಾಗಿದ್ದಾರೆ. 76 ವರ್ಷದ ನಟ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ.

ವಿಜಿ ಅವರಿಗೆ ಶ್ವಾಸಕೋಶದ ಸಮಸ್ಯೆ ಉಂಟಾಗಿತ್ತು. ಯಶವಂತಪುರಲ್ಲಿರುವ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಮೃತರ ಅಂತ್ಯಕ್ರಿಯೆಯು ಜನವರಿ 16ರ ಬೆಳಿಗ್ಗೆ ಚಾಮರಾಜಪೇಟೆಯ ಟಿ ಆರ್ ಮಿಲ್ ಬಳಿ ಇರುವ ಚಿತಾಗಾರದಲ್ಲಿ ನಡೆಯಲಿದೆ.

ಇದನ್ನು ಓದಿದ್ದೀರಾ? ಖ್ಯಾತ ಪರಮಾಣು ವಿಜ್ಞಾನಿ ಡಾ ಆರ್ ಚಿದಂಬರಂ ನಿಧನ

Advertisements

ಬೆಂಗಳೂರಿನ ವಿಮಾನಪುರದಲ್ಲಿ (ಎಚ್‌ಎಎಲ್ ಪ್ರದೇಶ) ವಿಜಿ ಜನಿಸಿದ್ದು ಆರಂಭದಲ್ಲಿ ನಾಟಕದಲ್ಲಿ ನಟಿಸುತ್ತಿದ್ದರು. ಬಳಿಕ ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸಿದರು. ವಿಜಿ ಬರೆದ ‘ಸಂಸಾರದಲ್ಲಿ ಸರಿಗಮ’ ನಾಟಕ ಜನಮನ್ನಣೆಗೆ ಪಾತ್ರವಾಯಿತು. ಇದೇ ಕಾರಣಕ್ಕೆ ವಿಜಯಕುಮಾರ್ ಅವರಿಗೆ ‘ಸರಿಗಮ ವಿಜಿ’ ಎಂಬ ಹೆಸರು ಬಂದಿದೆ. ಧಾರವಾಹಿಗಳಲ್ಲೂ ವಿಜಿ ನಟಿಸಿದ್ದಾರೆ

ಪೋಷಕ ಪಾತ್ರ, ಹಾಸ್ಯನಟ, ಖಳನಟ ಹೀಗೆ ಹಲವು ಪಾತ್ರಗಳನ್ನು ವಿಜಿ ನಿರ್ವಹಿಸಿದ್ದಾರೆ. ದೇವರಾಜ್, ದರ್ಶನ್, ವಿಷ್ಣುವರ್ಧನ್, ಪುನೀತ್ ರಾಜ್‌ಕುಮಾರ್, ಅನಂತನಾಗ್, ಅಂಬರೀಶ್ ಸೇರಿದಂತೆ ಹಲವು ನಟರುಗಳ ಜೊತೆ ತೆರೆಯಲ್ಲಿ ಕಾಣಿಸಿಕೊಂಡಿದ್ದಾರೆ.

400ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಅವರು 100ಕ್ಕೂ ಅಧಿಕ ಸಿನಿಮಾಗಳಲ್ಲಿ ಸಹ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ. ಶ್ರೀಕೃಷ್ಣದೇವರಾಯ ಪುರಸ್ಕಾರ, ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

Download Eedina App Android / iOS

X