‘ಲೈಂಗಿಕ ದೌರ್ಜನ್ಯ ತಡೆ ಸಮಿತಿ’ ರಚಿಸಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ

Date:

Advertisements

ಕನ್ನಡ ಚಿತ್ರರಂಗದಲ್ಲಿಯೂ ‘ಲೈಂಗಿಕ ದೌರ್ಜನ್ಯ ತಡೆ ಸಮಿತಿ’ಯನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ರಚಿಸಿದೆ. ಸುಮಾರು ಹನ್ನೊಂದು ಜನರ ಸಮಿತಿಯನ್ನು ರಚಿಸಲಾಗಿದೆ.

ನಟಿಯರ ಮೇಲೆ ಆಗುತ್ತಿರುವ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ಹೇಮಾ ಸಮಿತಿ ವರದಿಯು ಇಡೀ ದೇಶವೇ ಮಲಯಾಳಂ ಚಿತ್ರರಂಗದತ್ತ ಮುಖ ಮಾಡುವಂತೆ ಮಾಡಿತ್ತು.

ಅದಾದ ಬಳಿಕ ಕನ್ನಡ ಚಿತ್ರರಂಗದಲ್ಲಿನ ಮಹಿಳಾ ಕಲಾವಿದೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳ ಅಧ್ಯಯನಕ್ಕಾಗಿ ಸಮಿತಿ ರಚನೆಗೆ ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ (ಫೈರ್) ಆಗ್ರಹಿಸಿತ್ತು. ಫೈರ್ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿಯನ್ನೂ ಸಲ್ಲಿಸಿತ್ತು.

Advertisements

ಇದನ್ನು ಓದಿದ್ದೀರಾ? ಕೇರಳದ ಹೇಮಾ ಸಮಿತಿ ಮೂಲಕ ದಾಖಲಾಗಿದ್ದ ಪ್ರಕರಣ ಬೆಂಗಳೂರಿಗೆ ವರ್ಗಾವಣೆ

ಇದೀಗ ಕರ್ನಾಟಕ ಫಿಲಂ ಚೇಂಬರ್ ಲೈಂಗಿಕ ದೌರ್ಜನ್ಯ ತಡೆ ಸಮಿತಿಯನ್ನು (ಆಂತರಿಕ ದೂರು ಸಮಿತಿ) ಕೆಲಸದ ಸ್ಥಳದಲ್ಲಿ ಮಹಿಳೆಯರ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ಕಾಯಿದೆ (POSH Act) ಮಾರ್ಗದರ್ಶನದಂತೆ ರಚಿಸಿದ್ದು ಚಲನಚಿತ್ರ ನಿರ್ದೇಶಕಿ, ನಿರ್ಮಾಪಕಿ ಕವಿತಾ ಲಂಕೇಶ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿದೆ.

ಚಲನಚಿತ್ರ

ಸಮಿತಿಯನ್ನು ಆಯಾ ಅವಧಿಯ ಚುನಾಯಿತ ಕೆಎಫ್ ಸಿಸಿ ಅಧ್ಯಕ್ಷರು (ಖಾಯಂ ಸದಸ್ಯರು), ಚಲನಚಿತ್ರ ಕಲಾವಿದೆ, ನಿರ್ಮಾಪಕಿ ಪ್ರಮಿಳಾ ಜೋಷಾಯ್, ಮಹಿಳಾ ಹಕ್ಕು ಹೋರಾಟಗಾರ್ತಿ ವಿಮಲಾ ಕೆ ಎಸ್, ವಕೀಲರು ಮತ್ತು ಹೋರಾಟಗಾರ್ತಿ ರಾಜಲಕ್ಷ್ಮೀ ಅಂಕಲಗಿ, ಲಿಂಗತ್ವ ಅಲ್ಪಸಂಖ್ಯಾತರ ಪರ ಹೋರಾಟಗಾರರು ಮಲ್ಲು ಕುಂಬಾರ್, ಕಲಾವಿದೆ ಶೃತಿ ಹರಿಹರನ್, ನಿರ್ಮಾಪಕರು ಮತ್ತು ಸಿನಿಮಾ ವಿತರಕರು ಎನ್ ಎಂ ಸುರೇಶ್, ಪತ್ರಕರ್ತರು ಮುರಳೀಧರ ಖಜಾನೆ, ಸ್ತ್ರೀವಾದಿ ಮತ್ತು ರಂಗಕರ್ಮಿ ಶಶಿಕಾಂತ್ ಯೆದನಹಳ್ಳಿ ಹಾಗು ಚಲನಚಿತ್ರ ನಿರ್ಮಾಪಕರು ಸಾ ರಾ ಗೋವಿಂದು ಸಮಿತಿ ಸದಸ್ಯರಾಗಿದ್ದಾರೆ.

ಈ ಬಗ್ಗೆ ಈ ದಿನ.ಕಾಮ್‌ಗೆ ಪ್ರತಿಕ್ರಿಯಿಸಿದ ಸಮಿತಿಯ ಅಧ್ಯಕ್ಷೆ ಕವಿತಾ ಲಂಕೇಶ್, “ಸಮಿತಿ ರಚಿಸುವಂತೆ ಫೈರ್ ಸಂಸ್ಥೆಯು ಹಲವು ಬಾರಿ ಒತ್ತಾಯವನ್ನು ಮಾಡಿದೆ. ಅಂತಿಮವಾಗಿ ಫಿಲಂ ಚೇಂಬರ್ ಸಮಿತಿ ರಚಿಸಿದೆ. ಈ ಬಗ್ಗೆ ನನಗೆ ಸಂತೋಷವಿದೆ. ಕನ್ನಡ ಚಿತ್ರರಂಗದಲ್ಲಿ ಮಹಿಳೆಯರು ತಮ್ಮಗಾದ ದೌರ್ಜನ್ಯವನ್ನು ಹೇಳಿಕೊಳ್ಳಲು ಇಂತಹ ಸಮಿತಿ ಅಗತ್ಯವಾಗಿತ್ತು” ಎಂದು ತಿಳಿಸಿದ್ದಾರೆ.

“ಈ ಸಮಿತಿಯು ಎಲ್ಲಾ ರಂಗದ ಸದಸ್ಯರನ್ನು ಒಳಗೊಂಡಿದೆ. ಇದರಿಂದಾಗಿ ನಿಷ್ಪಕ್ಷಪಾತ ನಿರ್ಧಾರವನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ. ಈ ಸಮಿತಿ ರಚಿಸಲು ಒತ್ತಡ ಹೇರಿದ ಫೈರ್‌ಗೂ, ಸಮಿತಿ ರಚಿಸಿದ ಚೇಂಬರ್‌ಗೂ ಕೃತಜ್ಞತೆಗಳು. ಸಹಾಯವಾಣಿ, ಜಾಗೃತಿ ಮೂಡಿಸುವ ಕಾರ್ಯಕ್ರಮ ಮಾಡುವ ಮೊದಲಾದ ಆಲೋಚನೆಗಳಿವೆ. ಮುಂದಿನ ದಿನಗಳಲ್ಲಿ ಸಮಿತಿಯು ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಿದೆ” ಎಂದು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X