ಜಪಾನ್‌ನಲ್ಲಿ ತೆರೆಗೆ ಸಜ್ಜಾದ ʼಕೆಜಿಎಫ್‌ʼ ಸರಣಿ

Date:

Advertisements

ಗಳಿಕೆಯಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ಕೆಜಿಎಫ್‌-2

ಜಾಪನೀಸ್‌ ಭಾಷೆಯಲ್ಲೇ ಮಾಹಿತಿ ಹಂಚಿಕೊಂಡ ಯಶ್‌

ರಾಕಿಂಗ್‌ ಸ್ಟಾರ್‌ ಯಶ್‌ ಮತ್ತು ಪ್ರಶಾಂತ್‌ ನೀಲ್‌ ಕಾಂಬಿನೇಶನ್‌ನಲ್ಲಿ ಮೂಡಿಬಂದಿದ್ದ ʼಕೆಜಿಎಫ್‌-1ʼ ಮತ್ತು ʼಕೆಜಿಎಫ್‌-2ʼ ಸಿನಿಮಾ ಸರಣಿಗಳು ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿದ್ದವು. ಯಶ್‌ಗೆ ಗ್ಲೋಬಲ್‌ ಸ್ಟಾರ್‌ ಪಟ್ಟವನ್ನು ತಂದುಕೊಟ್ಟಿದ್ದ ಈ ಸರಣಿ ಸಿನಿಮಾಗಳು ಇದೀಗ ಜಪಾನ್‌ನಲ್ಲಿ ಬಿಡುಗಡೆಗೆ ಸಜ್ಜಾಗಿವೆ.

Advertisements

ʼಕೆಜಿಎಫ್‌ ಸರಣಿಯ ಎರಡೂ ಸಿನಿಮಾಗಳು ಜುಲೈ 14ರಿಂದ ಜಪಾನ್‌ನಲ್ಲಿ ತೆರೆಕಾಣಲಿವೆ. ಈ ಬಗ್ಗೆ ಸ್ವತಃ ಯಶ್‌ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ. ಸೆಲ್ಫೀ ವಿಡಿಯೋದಲ್ಲಿ ಜಪಾನ್‌ ಭಾಷೆಯಲ್ಲೇ ಮಾತನಾಡಿರುವ ಯಶ್‌ ತಮ್ಮ ಜಾಪನೀಸ್‌ ಅಭಿಮಾನಿಗಳಿಗೆ ಸಿನಿಮಾ ವೀಕ್ಷಿಸುವಂತೆ ಕರೆ ನೀಡಿದ್ದಾರೆ. ಸ್ಥಳೀಯ ಭಾಷೆಯಲ್ಲೇ ಚಿತ್ರ ವೀಕ್ಷಣೆಗೆ ಲಭ್ಯವಾಗಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಕೆಜಿಎಫ್‌ ಸರಣಿ ಜಪಾನ್‌ ದೇಶಾದ್ಯಂತ ಬಿಡುಗಡೆಗೆ ಸಜ್ಜಾಗಿರುವುದರಿಂದ ಗಳಿಕೆಯ ವಿಚಾರದಲ್ಲಿ ಹೊಸ ದಾಖಲೆ ಬರೆಯಲಿದೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿವೆ. ಈ ಪಟ್ಟಿಯಲ್ಲಿ 1924.7 ಕೋಟಿಗಳಷ್ಟು ಸಾರ್ವಕಾಲಿಕ ಗಳಿಕೆ ಮಾಡಿರುವ ಆಮಿರ್‌ ಖಾನ್‌ ನಟನೆಯ ʼದಂಗಲ್‌ʼ ಸಿನಿಮಾ ಮೊದಲ ಸ್ಥಾನದಲ್ಲಿದ್ದರೆ, 1742.3 ಕೋಟಿ ಕಲೆ ಹಾಕಿದ್ದ ʼಬಾಹುಬಲಿ-2ʼ ಎರಡನೇ ಸ್ಥಾನದಲ್ಲಿದೆ. ಮೂರನೇ ಸ್ಥಾನದಲ್ಲಿರುವ ʼಆರ್‌ಆರ್‌ಆರ್‌ʼ ಸಿನಿಮಾ ₹1,243.3 ಕೋಟಿಗಳನ್ನು ಗಳಿಸಿದೆ. ʼಕೆಜಿಎಫ್‌-2ʼ ಸಿನಿಮಾ ನಾಲ್ಕನೇ ಸ್ಥಾನದಲ್ಲಿದ್ದು, ₹1,177.9 ಕೋಟಿ ಕಲೆ ಹಾಕಿದೆ. ಇದೀಗ ಜಪಾನ್‌ನಲ್ಲಿ ಬಿಡುಗಡೆಯಾಗುತ್ತಿರುವ ಈ ಸಿನಿಮಾ ನಿರೀಕ್ಷಿತ ಯಶಸ್ಸು ಗಳಿಸಿದರೆ ʼಆರ್‌ಆರ್‌ಆರ್‌ʼ ಸಿನಿಮಾದ ಗಳಿಕೆಯದ ದಾಖಲೆಯನ್ನು ಸರಿಗಟ್ಟಿ ಮೂರನೇ ಸ್ಥಾನಕ್ಕೇರಲಿದೆ ಎನ್ನಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ಚಿತ್ರೀಕರಣ ಸಮಯದಲ್ಲಿ ಶಾರುಖ್‌ ಖಾನ್‌ ಮೂಗಿಗೆ ಗಾಯ

ಕೆಜಿಎಫ್‌-2 ಯಶಸ್ಸಿನ ಬಳಿಕ ಜವಾಬ್ದಾರಿ ಹೆಚ್ಚಾಗಿದೆ ಎನ್ನುವ ಯಶ್‌ ಈವರೆಗೆ ತಮ್ಮ ಮುಂದಿನ ಚಿತ್ರವನ್ನು ಘೋಷಣೆ ಮಾಡಿಲ್ಲ. ಇತ್ತೀಚೆಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅವರು, “ಚಿತ್ರಕಥೆ ಸಿದ್ಧವಾಗಿದೆ, ಸಮಯ ವ್ಯರ್ಥ ಮಾಡದೆ ಕೆಲಸ ಮಾಡುತ್ತಿದ್ದೇನೆ, ಸದ್ಯದಲ್ಲೇ ಎಲ್ಲವನ್ನೂ ಬಹಿರಂಗ ಪಡಿಸುತ್ತೇನೆ ಎಂದಿದ್ದರು. ಯಶ್‌ ಅವರ ಮುಂದಿನ ಚಿತ್ರದ ಘೋಷಣೆ ಯಾವಾಗ ಎಂದು ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ಕೆಜಿಎಫ್‌ ಸರಣಿ ಸಾಗರದಾಚೆಗೆ ಮರು ಬಿಡುಗಡೆಯಾಗುತ್ತಿರುವುದು ಖುಷಿ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X