ಸುದೀಪ್‌ 46ನೇ ಚಿತ್ರಕ್ಕೆ ʼಕಬಾಲಿʼ ನಿರ್ಮಾಪಕರ ಬಂಡವಾಳ

Date:

ʼಪ್ರೋಮೋ ಶೂಟ್‌ʼ ತಯಾರಿಯ ದೃಶ್ಯಗಳನ್ನು ಹಂಚಿಕೊಂಡ ನಿರ್ಮಾಪಕರು

ನಿರ್ದೇಶಕರು, ಪಾತ್ರವರ್ಗದ ಬಗ್ಗೆ ಮಾಹಿತಿ ಬಹಿರಂಗ ಪಡಿಸದ ಚಿತ್ರತಂಡ

ʼವಿಕ್ರಾಂತ್‌ ರೋಣʼ ಚಿತ್ರದ ಯಶಸ್ಸಿನ ಬಳಿಕ ಒಂದು ವರ್ಷದ ಕಾಲ ನಟನೆಯಿಂದ ಅಂತರ ಕಾಯ್ದುಕೊಂಡಿದ್ದ ಸ್ಯಾಂಡಲ್‌ವುಡ್‌ನ ಸ್ಟಾರ್‌ ನಟ ಕಿಚ್ಚ ಸುದೀಪ್‌ ಯಾವುದೇ ಹೊಸ ಚಿತ್ರಗಳನ್ನು ಘೋಷಿಸಿರಲಿಲ್ಲ. ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳುವುದಕ್ಕೂ ಮುನ್ನ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದ ಕಿಚ್ಚ ಒಟ್ಟೊಟ್ಟಿಗೆ ಮೂರು ಚಿತ್ರಗಳನ್ನು ಒಪ್ಪಿಕೊಂಡಿರುವುದಾಗಿ ತಿಳಿಸಿದ್ದರು. ಆ ಪೈಕಿ ಇದೀಗ 46ನೇ ಚಿತ್ರದ ಪ್ರೋಮೋ ಶೂಟ್‌ ಪೂರ್ಣಗೊಂಡಿದ್ದು, ಚಿತ್ರತಂಡ ವಿಡಿಯೋ ತುಣುಕನ್ನು ಹಂಚಿಕೊಂಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ಯಾನ್‌ ಇಂಡಿಯಾ ಮಾದರಿಯ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಸುದೀಪ್‌, ತಮಿಳಿನ ಖ್ಯಾತ ನಿರ್ದೇಶಕ ವೆಂಕಟ್‌ ಪ್ರಭು ಜೊತೆ ಕೈಜೋಡಿಸಲಿದ್ದಾರೆ ಎಂಬ ಮಾತುಗಳು ಕೂಡ ಕೇಳಿ ಬಂದಿದ್ದವು. ಸದ್ಯ ಬಿಡುಗಡೆಯಾಗಿರುವ ವಿಡಿಯೋದಲ್ಲಿ ನಿರ್ದೇಶಕರು ಮತ್ತು ಚಿತ್ರತಂಡದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಸುದೀಪ್‌ ಪ್ರೋಮೋ ಶೂಟ್‌ಗಾಗಿ ತಯಾರಿ ನಡೆಸಿದ ದೃಶ್ಯಗಳಿದ್ದು, ಚಿತ್ರತಂಡದ ಕುರಿತ ಹೆಚ್ಚಿನ ವಿವರಗಳನ್ನು ಟೀಸರ್‌ನಲ್ಲಿ ಹಂಚಿಕೊಳ್ಳುವುದಾಗಿ ತಿಳಿಸಲಾಗಿದೆ.

ರಜನಿಕಾಂತ್‌ ನಟನೆಯ ʼಕಬಾಲಿʼ, ಧನುಷ್‌ ಅಭಿನಯದ ʼಅಸುರನ್‌ʼ ಚಿತ್ರಗಳಿಗೆ ಬಂಡವಾಳ ಹೂಡಿದ್ದ ತಮಿಳಿನ ಖ್ಯಾತ ನಿರ್ಮಾಪಕ ʼಕಲೈಪುಲಿʼ ಖ್ಯಾತಿಯ ಎಸ್‌. ಧನು ಈ ವಿಡಿಯೋವನ್ನು ಹಂಚಿಕೊಂಡು ತಮ್ಮ ʼವಿ ಕ್ರಿಯೇಷನ್ಸ್‌ʼ ಬ್ಯಾನರ್‌ನಡಿ ಸುದೀಪ್‌ ಅವರ 46ನೇ ಚಿತ್ರಕ್ಕೆ ಬಂಡವಾಳ ಹೂಡುತ್ತಿರುವುದಾಗಿ ಖಚಿತ ಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅಭಿಮಾನಿಯ ಕೊನೆ ಆಸೆ ಈಡೇರಿಸಿದ ಹೃದಯವಂತ ಶಾರುಖ್‌ ಖಾನ್‌

ತಮಿಳಿನ ನಿರ್ಮಾಪಕ ಎಸ್‌. ಧನು ಸುದೀಪ್‌ ಅವರ ಚಿತ್ರವನ್ನು ನಿರ್ಮಾಣ ಮಾಡುತ್ತಿರುವುದು ಖಚಿತವಾಗುತ್ತಲೇ, ನಿರೀಕ್ಷೆಯಂತೆ ವೆಂಕಟ್‌ ಪ್ರಭು ಅವರೇ ಕಿಚ್ಚನ 46ನೇ ಚಿತ್ರಕ್ಕೆ ಆ್ಯಕ್ಷನ್ ಕಟ್‌ ಹೇಳಲಿದ್ದಾರೆ ಎಂಬ ಚರ್ಚೆ ಕೂಡ ಅಭಿಮಾನಿ ಬಳಗದಲ್ಲಿ ಶುರುವಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಎಚ್‌ಡಿಕೆ ‘ದಾರಿತಪ್ಪಿದ ಮಗ’: ಪ್ರಕಾಶ್ ರಾಜ್

ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ...

ಖ್ಯಾತ ಕನ್ನಡ ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್​ ಆತ್ಮಹತ್ಯೆ!

ಬೆಂಗಳೂರಿನ ಜೆಟ್​ಲಾಗ್​ ಪಬ್ ಮಾಲೀಕ ಹಾಗೂ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ...

‘RCB ಸೋಲಿಗೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಕಾರಣ’ ಎಂದು ಅವಹೇಳನಕಾರಿ ಟ್ವೀಟ್: ಕಮಿಷನರ್‌ಗೆ ದೂರು

ಕನ್ನಡ ಚಿತ್ರರಂಗದ ನಟ, ದಿವಂಗತ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ...