ಲೋಕಸಭೆಯಲ್ಲಿ ಬೆಂಬಲ ಬೇಕಿದ್ದರೆ ಬಂಗಾಳದಲ್ಲಿ ಸಿಪಿಐ ಸಹವಾಹ ಬಿಡಬೇಕು : ಕೈ ನಾಯಕರಿಗೆ ದೀದಿ ಸ್ಪಷ್ಟ ಸಂದೇಶ

Date:

Advertisements

ಬಿಜೆಪಿ ಸೋಲಿಸಲು ಒಗ್ಗೂಡಿದ ವಿಪಕ್ಷಗಳು

ಜೂನ್‌ 23ರಂದು ನಡೆಯಲಿದೆ ಮಹತ್ವದ ಸಭೆ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್‌ನ ಬೆಂಬಲ ಬೇಕೆಂದರೆ ಕೈ ನಾಯಕರು ಪಶ್ಚಿಮ ಬಂಗಾಳದಲ್ಲಿ ಸಿಪಿಐ(ಎಂ) ಪಕ್ಷದವರ ಸಹವಾಸದಿಂದ ದೂರ ಇರಬೇಕು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಷರತ್ತು ಹಾಕಿದ್ದಾರೆ.

Advertisements

2024ರ ಲೋಕಸಭಾ ಚುನಾವಣೆಗೆ ಎಲ್ಲ ರಾಜಕೀಯ ಪಕ್ಷಗಳು ಈಗಿನಿಂದಲೇ ತಯಾರಿ ನಡೆಸುತ್ತಿವೆ. ಬಿಜೆಪಿಯನ್ನು ಸೋಲಿಸಲು ರಣತಂತ್ರ ಹೆಣೆದಿರುವ ವಿಪಕ್ಷಗಳು ಇದೇ ಜೂನ್‌ 23ರಂದು ಬಿಹಾರದ ಪಾಟ್ನಾದಲ್ಲಿ ಬೃಹತ್‌ ಸಭೆಯನ್ನು ನಡೆಸುತ್ತಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ, ರಾಹುಲ್‌ ಗಾಂಧಿ, ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌, ಮಮತಾ ಬ್ಯಾನರ್ಜಿ ಸೇರಿದಂತೆ ದೇಶದ ಪ್ರಮುಖ ಪ್ರಾದೇಶಿಕ ಪಕ್ಷಗಳ ಮುಖಂಡರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಮಹತ್ವದ ಸಭೆಗೆ ಕೆಲವೇ ದಿನಗಳು ಬಾಕಿ ಇರುವಾಗ ಸಂಧಾನದ ವಿಚಾರ ಮಾತನಾಡಿರುವ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳದಲ್ಲಿ ಸಿಪಿಐ(ಎಂ) ಜೊತೆ ಕೈ ಜೋಡಿಸದಂತೆ ಕಾಂಗ್ರೆಸ್‌ ನಾಯಕರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಶನಿವಾರ ಪಶ್ಚಿಮ ಬಂಗಾಳದ ಕಕ್‌ದ್ವೀಪ್‌ನಲ್ಲಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿರುವ ಮಮತಾ ಬ್ಯಾನರ್ಜಿ, “ಕಾಂಗ್ರೆಸ್‌ ಆಡಳಿತ ನಡೆಸಿರುವ ಎಲ್ಲ ರಾಜ್ಯಗಳಲ್ಲಿ ಸಿಪಿಐ(ಎಂ) ಬಹುದೊಡ್ಡ ಮಿತ್ರ ಪಕ್ಷದಂತೆಯೇ ವರ್ತಿಸಿದೆ. ಕೇವಲ ಕಾಂಗ್ರೆಸ್‌ಗೆ ಮಾತ್ರವಲ್ಲದೆ ಬಿಜೆಪಿಗೂ ಕೂಡ ಸಿಪಿಐ(ಎಂ) ಮಿತ್ರಪಕ್ಷವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನವರಿಗೆ ನಮ್ಮ (ಟಿಎಂಸಿ) ಬೆಂಬಲದ ಅಗತ್ಯವಿದ್ದರೆ ಖಂಡಿತ ನಿಮ್ಮನ್ನು (ಕಾಂಗ್ರೆಸ್‌) ಬೆಂಬಲಿಸುತ್ತೇವೆ. ಆದರೆ, ಒಂದು ವೇಳೆ ಪಶ್ಚಿಮ ಬಂಗಾಳದಲ್ಲಿ ನೀವು (ಕಾಂಗ್ರೆಸ್‌), ಸಿಪಿಎಂ(ಐ) ಜೊತೆ ಒಳ ಒಪ್ಪಂದ ಮಾಡಿಕೊಂಡು ನಮ್ಮಿಂದ ಮಾತ್ರ ನೆರವನ್ನು ನಿರೀಕ್ಷಿಸಬೇಡಿ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಒಂದು ಕರೆಗೆ ಉಕ್ರೇನ್‌ ಯುದ್ಧ ನಿಲ್ಲಿಸಿದೆವೆಂದ ಜನ ಮಣಿಪುರ ಹೊತ್ತಿ ಉರಿಯಲು ಬಿಟ್ಟಿದ್ದೇಕೆ: ನಟ ಕಿಶೋರ್‌ ಪ್ರಶ್ನೆ

ಮಮತಾ ಬ್ಯಾನರ್ಜಿ, ಸಿಪಿಐ(ಎಂ) ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವುದು ಇದು ಮೊದಲೇನಲ್ಲ. ಈ ಹಿಂದೆ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ವಿಪಕ್ಷಗಳ ವಿರುದ್ಧ ಗಂಭೀರ ಆರೋಪ ಮಾಡಿದ್ದ ದೀದಿ, “ಟಿಎಂಸಿ ಪಕ್ಷವನ್ನು ಅಧಿಕಾರದಿಂದ ದೂರವಿಡುವ ಸಲುವಾಗಿ ಕಾಂಗ್ರೆಸ್‌, ಸಿಪಿಐ(ಎಂ) ಮತ್ತು ಬಿಜೆಪಿ ಮೂರು ಪಕ್ಷಗಳು ಒಳ ಒಪ್ಪಂದ ಮಾಡಿಕೊಂಡಿವೆ” ಎಂದಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X