ಲೋಕಸಭೆಯಲ್ಲಿ ಬೆಂಬಲ ಬೇಕಿದ್ದರೆ ಬಂಗಾಳದಲ್ಲಿ ಸಿಪಿಐ ಸಹವಾಹ ಬಿಡಬೇಕು : ಕೈ ನಾಯಕರಿಗೆ ದೀದಿ ಸ್ಪಷ್ಟ ಸಂದೇಶ

Date:

ಬಿಜೆಪಿ ಸೋಲಿಸಲು ಒಗ್ಗೂಡಿದ ವಿಪಕ್ಷಗಳು

- Advertisement -

ಜೂನ್‌ 23ರಂದು ನಡೆಯಲಿದೆ ಮಹತ್ವದ ಸಭೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್‌ನ ಬೆಂಬಲ ಬೇಕೆಂದರೆ ಕೈ ನಾಯಕರು ಪಶ್ಚಿಮ ಬಂಗಾಳದಲ್ಲಿ ಸಿಪಿಐ(ಎಂ) ಪಕ್ಷದವರ ಸಹವಾಸದಿಂದ ದೂರ ಇರಬೇಕು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಷರತ್ತು ಹಾಕಿದ್ದಾರೆ.

2024ರ ಲೋಕಸಭಾ ಚುನಾವಣೆಗೆ ಎಲ್ಲ ರಾಜಕೀಯ ಪಕ್ಷಗಳು ಈಗಿನಿಂದಲೇ ತಯಾರಿ ನಡೆಸುತ್ತಿವೆ. ಬಿಜೆಪಿಯನ್ನು ಸೋಲಿಸಲು ರಣತಂತ್ರ ಹೆಣೆದಿರುವ ವಿಪಕ್ಷಗಳು ಇದೇ ಜೂನ್‌ 23ರಂದು ಬಿಹಾರದ ಪಾಟ್ನಾದಲ್ಲಿ ಬೃಹತ್‌ ಸಭೆಯನ್ನು ನಡೆಸುತ್ತಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ, ರಾಹುಲ್‌ ಗಾಂಧಿ, ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌, ಮಮತಾ ಬ್ಯಾನರ್ಜಿ ಸೇರಿದಂತೆ ದೇಶದ ಪ್ರಮುಖ ಪ್ರಾದೇಶಿಕ ಪಕ್ಷಗಳ ಮುಖಂಡರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಮಹತ್ವದ ಸಭೆಗೆ ಕೆಲವೇ ದಿನಗಳು ಬಾಕಿ ಇರುವಾಗ ಸಂಧಾನದ ವಿಚಾರ ಮಾತನಾಡಿರುವ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳದಲ್ಲಿ ಸಿಪಿಐ(ಎಂ) ಜೊತೆ ಕೈ ಜೋಡಿಸದಂತೆ ಕಾಂಗ್ರೆಸ್‌ ನಾಯಕರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಶನಿವಾರ ಪಶ್ಚಿಮ ಬಂಗಾಳದ ಕಕ್‌ದ್ವೀಪ್‌ನಲ್ಲಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿರುವ ಮಮತಾ ಬ್ಯಾನರ್ಜಿ, “ಕಾಂಗ್ರೆಸ್‌ ಆಡಳಿತ ನಡೆಸಿರುವ ಎಲ್ಲ ರಾಜ್ಯಗಳಲ್ಲಿ ಸಿಪಿಐ(ಎಂ) ಬಹುದೊಡ್ಡ ಮಿತ್ರ ಪಕ್ಷದಂತೆಯೇ ವರ್ತಿಸಿದೆ. ಕೇವಲ ಕಾಂಗ್ರೆಸ್‌ಗೆ ಮಾತ್ರವಲ್ಲದೆ ಬಿಜೆಪಿಗೂ ಕೂಡ ಸಿಪಿಐ(ಎಂ) ಮಿತ್ರಪಕ್ಷವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನವರಿಗೆ ನಮ್ಮ (ಟಿಎಂಸಿ) ಬೆಂಬಲದ ಅಗತ್ಯವಿದ್ದರೆ ಖಂಡಿತ ನಿಮ್ಮನ್ನು (ಕಾಂಗ್ರೆಸ್‌) ಬೆಂಬಲಿಸುತ್ತೇವೆ. ಆದರೆ, ಒಂದು ವೇಳೆ ಪಶ್ಚಿಮ ಬಂಗಾಳದಲ್ಲಿ ನೀವು (ಕಾಂಗ್ರೆಸ್‌), ಸಿಪಿಎಂ(ಐ) ಜೊತೆ ಒಳ ಒಪ್ಪಂದ ಮಾಡಿಕೊಂಡು ನಮ್ಮಿಂದ ಮಾತ್ರ ನೆರವನ್ನು ನಿರೀಕ್ಷಿಸಬೇಡಿ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಒಂದು ಕರೆಗೆ ಉಕ್ರೇನ್‌ ಯುದ್ಧ ನಿಲ್ಲಿಸಿದೆವೆಂದ ಜನ ಮಣಿಪುರ ಹೊತ್ತಿ ಉರಿಯಲು ಬಿಟ್ಟಿದ್ದೇಕೆ: ನಟ ಕಿಶೋರ್‌ ಪ್ರಶ್ನೆ

ಮಮತಾ ಬ್ಯಾನರ್ಜಿ, ಸಿಪಿಐ(ಎಂ) ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವುದು ಇದು ಮೊದಲೇನಲ್ಲ. ಈ ಹಿಂದೆ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ವಿಪಕ್ಷಗಳ ವಿರುದ್ಧ ಗಂಭೀರ ಆರೋಪ ಮಾಡಿದ್ದ ದೀದಿ, “ಟಿಎಂಸಿ ಪಕ್ಷವನ್ನು ಅಧಿಕಾರದಿಂದ ದೂರವಿಡುವ ಸಲುವಾಗಿ ಕಾಂಗ್ರೆಸ್‌, ಸಿಪಿಐ(ಎಂ) ಮತ್ತು ಬಿಜೆಪಿ ಮೂರು ಪಕ್ಷಗಳು ಒಳ ಒಪ್ಪಂದ ಮಾಡಿಕೊಂಡಿವೆ” ಎಂದಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಸಿನಿಮೋತ್ಸವ: ಸಂಸ್ಕೃತಿಯ ವಿಕೇಂದ್ರೀಕರಣ ಮತ್ತು ದೃಶ್ಯ ಪ್ರಜ್ಞೆಯ ಉಳಿವು

ಸಿನಿಮೋತ್ಸವಗಳನ್ನು ಲಾಭ-ನಷ್ಟದ ವ್ಯಾಪಾರಿ ಕನ್ನಡಕದಿಂದ ನೋಡುವುದು ಸರಿಯಲ್ಲ. ದಸರೆಯ ಸಾಂಸ್ಕೃತಿಕ ಘನತೆಯ...

ದೆಹಲಿಯಿಂದ ಗುಜರಾತ್‌ಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಆಯೋಜನೆಯ ಹಿಂದಿನ ಮರ್ಮವೇನು?

ಹಲವು ದಶಕಗಳಿಂದ ಅತ್ಯಂತ ಶಿಸ್ತುಬದ್ಧವಾಗಿ ನಡೆದುಕೊಂಡು ಬಂದಿದ್ದ ಸಂಪ್ರದಾಯ ಹಾಗೂ ನಿಯಮಗಳನ್ನು...

ಮೈಸೂರು ಯುವ ದಸರಾ: ಉದ್ಘಾಟಕರಾಗಿ ನಟ ಪ್ರಭುದೇವ್‌ಗೆ ಅಧಿಕೃತ ಆಹ್ವಾನ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ರ ಸಿದ್ಧತೆಗಳು ಬಿರುಸುಗೊಂಡಿದ್ದು, ದಸರೆಯ ಪ್ರಮುಖ ಆಕರ್ಷಣೆಗಳಲ್ಲಿ...