ಸಿನಿ ರಸಿಕರ ಗಮನ ಸೆಳೆಯುತ್ತಿದೆ ʼಮಳ್ಳಿ ಪೆಳ್ಳಿʼ ಟೀಸರ್‌

Date:

Advertisements

ಮೇ ತಿಂಗಳಲ್ಲಿ ತೆರೆ ಕಾಣಲಿದೆ ನರೇಶ್‌, ಪವಿತ್ರಾ ಲೋಕೇಶ್‌ ನಟನೆಯ ಚಿತ್ರ

ಟೀಕಾಕಾರಿಗೆ ತಿರುಗೇಟು ನೀಡಲು ಸಿನಿಮಾ ನಿರ್ಮಿಸಿದ ಸ್ಟಾರ್‌ ದಂಪತಿ

ತೆಲುಗಿನ ಖ್ಯಾತ ನಟ ನರೇಶ್‌ ಮತ್ತು ಕನ್ನಡದ ನಟಿ ಪವಿತ್ರಾ ಲೋಕೇಶ್‌ ಕಳೆದ ಕೆಲ ತಿಂಗಳುಗಳ ಹಿಂದಷ್ಟೇ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ. ಈ ಸ್ಟಾರ್‌ ಜೋಡಿಯ ಸಂಬಂಧ ಭಾರೀ ಚರ್ಚೆಗೆ ಕಾರಣವಾಗಿತ್ತು. ನರೇಶ್‌ ಅವರ ಮೂರನೇ ಪತ್ನಿ ರಮ್ಯಾ ರಘುಪತಿ ಅವರೇ ಮಾಧ್ಯಮಗಳ ಎದುರು ನರೇಶ್‌ ತಮಗೆ ಮೋಸ ಮಾಡಿರುವುದಾಗಿ ಆರೋಪಿಸಿದ್ದರು. ವಿವಾದದ ನಡುವೆಯೇ ಹಸೆಮಣೆ ಏರಿದ್ದ ಈ ಜೋಡಿ ತಮ್ಮ ಪ್ರೀತಿ ಮತ್ತು ಮದುವೆಯ ಕಥೆಯನ್ನು ತೆರೆಗೆ ಅಳವಡಿಸಿದ್ದು, ಚಿತ್ರಕ್ಕೆ ʼಮಳ್ಳಿ ಪೆಳ್ಳಿʼ ಎಂದು ಹೆಸರಿಡಲಾಗಿದೆ. ಸದ್ಯ ಈ ಚಿತ್ರದ ಟೀಸರ್‌ ಬಿಡುಗಡೆಯಾಗಿದ್ದು, ಸಿನಿ ರಸಿಕರ ಗಮನ ಸೆಳೆಯುತ್ತಿದೆ.

Advertisements

ನರೇಶ್‌ ನಾಲ್ಕನೇ ಮದುವೆಯಾಗಿದ್ದಕ್ಕೆ ಭಾರೀ ಟೀಕೆಗೆ ಗುರಿಯಾಗಿದ್ದರು. ಪವಿತ್ರಾ ಲೋಕೇಶ್‌ ಅವರ ನಡೆಯ ಬಗ್ಗೆಯೂ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ, ಈ ಜೋಡಿ ನಮ್ಮ ಖಾಸಗಿ ಬದುಕಿಗೆ ಗೌರವ ನೀಡಿ ಎಂದಷ್ಟೇ ಮನವಿ ಮಾಡಿ ಸುಮ್ಮನಾಗಿತ್ತು. ಇದೇ ಅಂಶಗಳ ಸುತ್ತ ʼಮಳ್ಳಿ ಪೆಳ್ಳಿʼ ಸಿನಿಮಾ ಮೂಡಿಬಂದಿದೆ. ಒಂದು ನಿಮಿಷದ ಟೀಸರ್‌ನಲ್ಲಿ ಪವಿತ್ರಾ ಮತ್ತು ನರೇಶ್‌ ಅವರ ಪ್ರೀತಿ, ವಿವಾದ ಹಾಗೂ ಮದುವೆಯ ಬಗ್ಗೆ ತೋರಿಸಲಾಗಿದೆ.

ಈ ಸ್ಟಾರ್‌ ದಂಪತಿ ಟೀಕಾಕಾರರಿಗೆ ಉತ್ತರವಾಗಿ ತಾವೇ ಮುಖ್ಯಭೂಮಿಕೆಯಲ್ಲಿ ನಟಿಸಿ, ನಿರ್ಮಿಸಿರುವ ಈ ಚಿತ್ರಕ್ಕೆ ತೆಲುಗಿನ ನಿರ್ದೇಶಕ ಎಂ.ಎಸ್‌ ರಾಜು ಆ್ಯಕ್ಷನ್ ಕಟ್‌ ಹೇಳಿದ್ದಾರೆ. ಶರತ್ ಬಾಬು, ಜಯಸುಧಾ. ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ ಮುಂತಾದವರು ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಅರುಲ್‌ ದೇವ್‌ ಅವರ ಹಿನ್ನೆಲೆ ಸಂಗೀತ ಈ ಚಿತ್ರಕ್ಕಿದೆ.

ತೆಲುಗು ಮತ್ತು ಕನ್ನಡದಲ್ಲಿ ಏಕಕಾಲಕ್ಕೆ ನಿರ್ಮಾಣವಾಗಿರುವ ಈ ಚಿತ್ರ ಮೇ ತಿಂಗಳಿನಲ್ಲಿ ತೆರೆಗೆ ಬರಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಈ ಚಿತ್ರಕ್ಕೆ ಕನ್ನಡದಲ್ಲಿ ʼಮತ್ತೆ ಮದುವೆʼ ಎಂದು ಹೆಸರಿಡಲಾಗಿದೆ.

c6d189e709d010a95cabcbe8c5246c21
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

Download Eedina App Android / iOS

X