ತೆರೆಕಂಡ 7 ದಿನಕ್ಕೆ ₹100 ಕೋಟಿ ಗಳಿಸಿದ ʼದಸರಾʼ

Date:

Advertisements

ಚೊಚ್ಚಲ ಚಿತ್ರದಲ್ಲೇ ದಾಖಲೆ ಸೃಷ್ಟಿಸಿದ ನಿರ್ದೇಶಕ ಶ್ರೀಕಾಂತ್‌ ಒಡೆಲಾ

ನಿರ್ದೇಶಕರಿಗೆ ದುಬಾರಿ ಕಾರು ಉಡುಗೊರೆ ನೀಡಿದ ನಿರ್ಮಾಪಕ ಸುಧಾಕರ್‌

ತೆಲುಗಿನ ಖ್ಯಾತ ನಟ ನಾನಿ ಅಭಿನಯದ ದಸರಾ ಸಿನಿಮಾ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದ್ದು, ಗಲ್ಲಾ ಪೆಟ್ಟಿಗೆಯಲ್ಲಿ ಸಖತ್‌ ಸದ್ದು ಮಾಡುತ್ತಿದೆ. ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಈ ಸಿನಿಮಾ ತೆರೆಕಂಡ ಒಂದು ವಾರಕ್ಕೆ ಬರೋಬ್ಬರಿ ₹100 ಕೋಟಿ ಗಳಿಸಿದೆ.

Advertisements

ಸಿನಿಮಾ 100 ಕೋಟಿ ಕ್ಲಬ್‌ ಸೇರುತ್ತಲೇ ತಮ್ಮ ಟ್ವಿಟರ್‌ ಖಾತೆಯಲ್ಲಿ ವಿಶೇಷ ಪೋಸ್ಟರ್‌ ಹಂಚಿಕೊಂಡು ಸಂತಸ ವ್ಯಕ್ತಪಡಿಸಿರುವ ನಾನಿ, “ನಮ್ಮ ಶ್ರಮಕ್ಕೆ ತಕ್ಕನಾದ ಉಡುಗೊರೆಯನ್ನು ನೀವು ನೀಡಿದ್ದೀರಿ. ದಸರಾ ಭರ್ಜರಿ ಯಶಸ್ಸು ಕಂಡಿದೆ” ಎಂದು ಬರೆದುಕೊಂಡಿದ್ದಾರೆ.

ದಸರಾ ಯಶಸ್ಸನ್ನು ಸಂಭ್ರಮಿಸಿರುವ ನಿರ್ಮಾಪಕ ಸುಧಾಕರ್‌ ಚೆರುಕುರಿ, ಚಿತ್ರದ ನಿರ್ದೇಶಕ ಶ್ರೀಕಾಂತ್‌ ಒಡೆಲಾ ಅವರಿಗೆ ದುಬಾರಿ ಬೆಲೆಯ ʼಬಿಎಂಡಬ್ಲ್ಯೂʼ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಜೊತೆಗೆ ಚಿತ್ರದ ತಾಂತ್ರಿಕ ವರ್ಗ ಮತ್ತು ಕಲಾವಿದರಿಗೆ ತಲಾ 10 ಗ್ರಾಂ ಚಿನ್ನದ ನಾಣ್ಯಗಳನ್ನು ನೀಡಿದ್ದಾರೆ.

ಯುವ ನಿರ್ದೇಶಕ ಶ್ರೀಕಾಂತ್‌ ಒಡೆಲಾ ತಮ್ಮ ಚೊಚ್ಚಲ ಚಿತ್ರದಲ್ಲೇ ಭಾರೀ ಯಶಸ್ಸು ಗಳಿಸುವ ಮೂಲಕ ರಾಜಮೌಳಿ, ಪ್ರಭಾಸ್‌, ಮಹೇಶ್‌ ಬಾಬು ಹೀಗೆ ತೆಲುಗಿನ ಖ್ಯಾತನಾಮರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ನಾನಿ ಸಿನಿ ಬದುಕಿನಲ್ಲೂ ʼದಸರಾʼ ಸಿನಿಮಾ ಮಹತ್ವದ ತಿರುವು ನೀಡಿದೆ.

ಈ ಸುದ್ದಿ ಓದಿದ್ದೀರಾ? ʼಸಲಾರ್‌ʼ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರತಂಡ

ಮಾಸ್‌, ಆ್ಯಕ್ಷನ್ ಕಥಾಹಂದರವುಳ್ಳ ಈ ಚಿತ್ರದಲ್ಲಿ ಖ್ಯಾತ ನಟಿ ಕೀರ್ತಿ ಸುರೇಶ್‌ ನಾಯಕಿಯ ಪಾತ್ರದಲ್ಲಿ ಮಿಂಚಿದ್ದಾರೆ. ʼದಿಯಾʼ ಖ್ಯಾತಿಯ ನಟ, ಕನ್ನಡಿಗ ದೀಕ್ಷಿತ್‌ ಶೆಟ್ಟಿ, ಸಾಯಿ ಕುಮಾರ್‌, ಸಮುದ್ರ ಖಣಿ ಮುಂತಾದವರು ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಸಂತೋಷ್‌ ನಾರಾಯಣನ್‌ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X