ತೆರೆಕಂಡ 7 ದಿನಕ್ಕೆ ₹100 ಕೋಟಿ ಗಳಿಸಿದ ʼದಸರಾʼ

Date:

ಚೊಚ್ಚಲ ಚಿತ್ರದಲ್ಲೇ ದಾಖಲೆ ಸೃಷ್ಟಿಸಿದ ನಿರ್ದೇಶಕ ಶ್ರೀಕಾಂತ್‌ ಒಡೆಲಾ

- Advertisement -

ನಿರ್ದೇಶಕರಿಗೆ ದುಬಾರಿ ಕಾರು ಉಡುಗೊರೆ ನೀಡಿದ ನಿರ್ಮಾಪಕ ಸುಧಾಕರ್‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ದೇಶದ ಬೃಹತ್ ಉದ್ಯಮ ಸಂಸ್ಥೆ ಟಾಟಾ ಸನ್ಸ್ ಬೋರ್ಡ್...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ತೆಲುಗಿನ ಖ್ಯಾತ ನಟ ನಾನಿ ಅಭಿನಯದ ದಸರಾ ಸಿನಿಮಾ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದ್ದು, ಗಲ್ಲಾ ಪೆಟ್ಟಿಗೆಯಲ್ಲಿ ಸಖತ್‌ ಸದ್ದು ಮಾಡುತ್ತಿದೆ. ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಈ ಸಿನಿಮಾ ತೆರೆಕಂಡ ಒಂದು ವಾರಕ್ಕೆ ಬರೋಬ್ಬರಿ ₹100 ಕೋಟಿ ಗಳಿಸಿದೆ.

ಸಿನಿಮಾ 100 ಕೋಟಿ ಕ್ಲಬ್‌ ಸೇರುತ್ತಲೇ ತಮ್ಮ ಟ್ವಿಟರ್‌ ಖಾತೆಯಲ್ಲಿ ವಿಶೇಷ ಪೋಸ್ಟರ್‌ ಹಂಚಿಕೊಂಡು ಸಂತಸ ವ್ಯಕ್ತಪಡಿಸಿರುವ ನಾನಿ, “ನಮ್ಮ ಶ್ರಮಕ್ಕೆ ತಕ್ಕನಾದ ಉಡುಗೊರೆಯನ್ನು ನೀವು ನೀಡಿದ್ದೀರಿ. ದಸರಾ ಭರ್ಜರಿ ಯಶಸ್ಸು ಕಂಡಿದೆ” ಎಂದು ಬರೆದುಕೊಂಡಿದ್ದಾರೆ.

ದಸರಾ ಯಶಸ್ಸನ್ನು ಸಂಭ್ರಮಿಸಿರುವ ನಿರ್ಮಾಪಕ ಸುಧಾಕರ್‌ ಚೆರುಕುರಿ, ಚಿತ್ರದ ನಿರ್ದೇಶಕ ಶ್ರೀಕಾಂತ್‌ ಒಡೆಲಾ ಅವರಿಗೆ ದುಬಾರಿ ಬೆಲೆಯ ʼಬಿಎಂಡಬ್ಲ್ಯೂʼ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಜೊತೆಗೆ ಚಿತ್ರದ ತಾಂತ್ರಿಕ ವರ್ಗ ಮತ್ತು ಕಲಾವಿದರಿಗೆ ತಲಾ 10 ಗ್ರಾಂ ಚಿನ್ನದ ನಾಣ್ಯಗಳನ್ನು ನೀಡಿದ್ದಾರೆ.

ಯುವ ನಿರ್ದೇಶಕ ಶ್ರೀಕಾಂತ್‌ ಒಡೆಲಾ ತಮ್ಮ ಚೊಚ್ಚಲ ಚಿತ್ರದಲ್ಲೇ ಭಾರೀ ಯಶಸ್ಸು ಗಳಿಸುವ ಮೂಲಕ ರಾಜಮೌಳಿ, ಪ್ರಭಾಸ್‌, ಮಹೇಶ್‌ ಬಾಬು ಹೀಗೆ ತೆಲುಗಿನ ಖ್ಯಾತನಾಮರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ನಾನಿ ಸಿನಿ ಬದುಕಿನಲ್ಲೂ ʼದಸರಾʼ ಸಿನಿಮಾ ಮಹತ್ವದ ತಿರುವು ನೀಡಿದೆ.

ಈ ಸುದ್ದಿ ಓದಿದ್ದೀರಾ? ʼಸಲಾರ್‌ʼ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರತಂಡ

ಮಾಸ್‌, ಆ್ಯಕ್ಷನ್ ಕಥಾಹಂದರವುಳ್ಳ ಈ ಚಿತ್ರದಲ್ಲಿ ಖ್ಯಾತ ನಟಿ ಕೀರ್ತಿ ಸುರೇಶ್‌ ನಾಯಕಿಯ ಪಾತ್ರದಲ್ಲಿ ಮಿಂಚಿದ್ದಾರೆ. ʼದಿಯಾʼ ಖ್ಯಾತಿಯ ನಟ, ಕನ್ನಡಿಗ ದೀಕ್ಷಿತ್‌ ಶೆಟ್ಟಿ, ಸಾಯಿ ಕುಮಾರ್‌, ಸಮುದ್ರ ಖಣಿ ಮುಂತಾದವರು ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಸಂತೋಷ್‌ ನಾರಾಯಣನ್‌ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಟೋಕರೆಕ್ಟ್ ಎಡವಟ್ಟು: ‘ಆತ್ಮಹತ್ಯೆ’ ಪೋಸ್ಟ್ ಹಾಕಿ ಮುಂಬೈ ಪೊಲೀಸರ ಬೆವರಿಳಿಸಿದ ಮರಾಠಿ ನಟ!

ಮರಾಠಿ ಚಿತ್ರರಂಗದ ಜನಪ್ರಿಯ ನಟ ವಿಕಾಸ್ ಸಮುದ್ರೆ ಅವರು ಸಾಮಾಜಿಕ ಜಾಲತಾಣದಲ್ಲಿ...

ನಟ ಶಿವರಾಜ್‌ಕುಮಾರ್ ಜನ ಪರವಾಗಿ ನಿಲ್ಲಬೇಕು; ನಟ ಪ್ರಕಾಶ್‌ ರಾಜ್ ಕರೆ

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗ ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವು...

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್‌ಗೆ ತಾತ್ಕಾಲಿಕ ರಿಲೀಫ್, ‘ಮಾಫಿ ಸಾಕ್ಷಿ’ ಆದೇಶ ವಜಾ

ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ...

ದಸರಾ ಸಿನಿಮೋತ್ಸವ: ಸಂಸ್ಕೃತಿಯ ವಿಕೇಂದ್ರೀಕರಣ ಮತ್ತು ದೃಶ್ಯ ಪ್ರಜ್ಞೆಯ ಉಳಿವು

ಸಿನಿಮೋತ್ಸವಗಳನ್ನು ಲಾಭ-ನಷ್ಟದ ವ್ಯಾಪಾರಿ ಕನ್ನಡಕದಿಂದ ನೋಡುವುದು ಸರಿಯಲ್ಲ. ದಸರೆಯ ಸಾಂಸ್ಕೃತಿಕ ಘನತೆಯ...