ಆತ್ಮಹತ್ಯೆಗೆ ಶರಣಾದ ಬಾಲಿವುಡ್‌ನ ಖ್ಯಾತ ಕಲಾ ನಿರ್ದೇಶಕ ನಿತಿನ್‌ ದೇಸಾಯಿ

Date:

Advertisements

ಬಾಲಿವುಡ್‌ನ ಖ್ಯಾತ ಕಲಾ ನಿರ್ದೇಶಕ ನಿತಿನ್‌ ದೇಸಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬುಧವಾರ ಬೆಳಗ್ಗೆ ಮುಂಬೈ ಸಮೀಪದ ಕಾರ್ಜತ್‌ನಲ್ಲಿರುವ ತಮ್ಮದೇ ಒಡೆತನದ ಎನ್‌ಡಿ ಸ್ಟುಡಿಯೋದಲ್ಲಿ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಹಣಕಾಸಿನ ವ್ಯವಹಾರದಲ್ಲಿ ಸಮಸ್ಯೆ ಉಂಟಾದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಆಗಸ್ಟ್‌ 9ರಂದು ನಿತಿನ್‌ 58ನೇ ವಸಂತಕ್ಕೆ ಕಾಲಿಡಲಿದ್ದರು. ಹುಟ್ಟುಹಬ್ಬಕ್ಕೆ ಕೆಲವೇ ದಿನಗಳಿರುವಾಗ ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನೆಯ ಮಾಹಿತಿ ಪಡೆದ ಖಾಲಾಪುರ್‌ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಿತಿನ್‌ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

ಸ್ಥಳೀಯ ಶಾಸಕ ಮಹೇಶ್‌ ಬಾಲ್ಡಿ ನಿತಿನ್‌ ಅವರ ಅಗಲಿಕೆಗೆ ಸಂತಾಪ ಸೂಚಿಸಿದ್ದು, “ನಿತಿನ್‌ ಆತ್ಮಹತ್ಯೆಗೆ ಶರಣಾಗಲು ಹಣಕಾಸಿನ ಸಮಸ್ಯೆಯೇ ಕಾರಣ. ಅವರ ಎನ್‌ಡಿ ಸ್ಟುಡಿಯೋ ಕಳೆದ ಕೆಲ ದಿನಗಳಿಂದ ನಷ್ಟದಲ್ಲಿ ನಡೆಯುತ್ತಿತ್ತು. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ” ಎಂದಿದ್ದಾರೆ. ರಿತೇಶ್‌ ದೇಶಮುಖ್‌ ಸೇರಿದಂತೆ ಬಾಲಿವುಡ್‌ನ ಹಲವು ಗಣ್ಯರು ಹಿರಿಯ ಕಲಾವಿದನ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ.

Advertisements

ʼಹಮ್‌ ದಿಲ್‌ ದೇ ಚುಕೆ ಸನಮ್‌ʼ, ʼದೇವದಾಸ್‌ʼ, ʼಜೋಧಾ ಅಕ್ಬರ್‌ʼ, ʼಲಗಾನ್‌ʼ ಮುಂತಾದ ಜನಪ್ರಿಯ ಚಿತ್ರಗಳಲ್ಲಿ ಕಲಾ ನಿರ್ದೇಶಕರಾಗಿ ಕೆಲಸ ಮಾಡಿದ್ದ ನಿತಿನ್‌ ಅದ್ದೂರಿ ಸೆಟ್‌ಗಳನ್ನು ನಿರ್ಮಿಸುವ ಮೂಲಕ ಬಾಲಿವುಡ್‌ನಲ್ಲಿ ಸ್ಟಾರ್‌ ಕಲಾವಿದನಾಗಿ ಗುರುತಿಸಿಕೊಂಡಿದ್ದರು. ಅತ್ಯುತ್ತಮ ಕಲಾ ನಿರ್ದೇಶನಕ್ಕಾಗಿ ನಾಲ್ಕು ಬಾರಿ ರಾಷ್ಟ್ರ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದರು. ಕೇವಲ ಕಲಾ ನಿರ್ದೇಶಕನಾಗಿ ಮಾತ್ರವಲ್ಲದೇ ಚಿತ್ರ ನಿರ್ದೇಶಕ ಮತ್ತು ನಿರ್ಮಾಪಕನಾಗಿಯೂ ಹೆಸರು ಮಾಡಿದ್ದರು.

ಸಿನಿಮಾ ಶೂಟಿಂಗ್‌ಗೆ ಸೆಟ್‌ಗಳನ್ನು ನಿರ್ಮಿಸುವ ಸಲುವಾಗಿ 2005ರಲ್ಲಿ ಕಾರ್ಜತ್‌ನಲ್ಲಿ 52 ಎಕ್ಕರೆ ಪ್ರದೇಶದಲ್ಲಿ ಎನ್‌ಡಿ ಸ್ಟುಡಿಯೋವನ್ನು ಪ್ರಾರಂಭಿಸಿದ್ದರು. ʼಜೋಧಾ ಅಕ್ಬರ್‌ʼ, ʼಲಗಾನ್‌ʼ ಮುಂತಾದ ಚಿತ್ರಗಳನ್ನು ಇದೇ ಸ್ಟುಡಿಯೋದಲ್ಲಿ ಚಿತ್ರಿಸಲಾಗಿದೆ. ಹಿಂದಿ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ʼಬಿಗ್‌ ಬಾಸ್‌ʼನ ಚಿತ್ರೀಕರಣ ಕೂಡ ಇದೇ ಸ್ಟುಡಿಯೋದಲ್ಲಿ ನಡೆಯುತ್ತದೆ.

bec00d331e7bcef3df5237e7aa47b1c5?s=150&d=mp&r=g
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

Download Eedina App Android / iOS

X