‘ಬಿಗ್‌ ಬಾಸ್’ ಮನೆಗೆ ಬೀಗ ಜಡಿದ ಅಧಿಕಾರಿಗಳು!

Date:

Advertisements

ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದ ನಿಯಮಗಳನ್ನು ಪಾಲಿಸದ ಆರೋಪದ ಮೇಲೆ ಕನ್ನಡದ ‘ಬಿಗ್ ಬಾಸ್’ ಸೀಸನ್ 12ರ ಮನೆಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಈ ಬಾರಿಯ ಬಿಗ್‌ ಬಾಸ್ ಅರ್ಧಕ್ಕೆ ಮೊಟಕುಗೊಳ್ಳುವ ಸಾಧ್ಯತೆಗಳಿವೆ.

ಬಿಗ್‌ ಬಾಸ್‌ ಆಯೋಜಕರು ಸರಿಯಾದ ರೀತಿಯಲ್ಲಿ ತಾಜ್ಯ ನೀರು ಸಂಸ್ಕರಣಾ ಘಟಕ ನಿರ್ಮಿಸಿಲ್ಲ ಎಂಬ ಕಾರಣಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ನೋಟಿಸ್‌ ನೀಡಿದ್ದರು. ಆದರೂ, ಆಯೋಜಕರು ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ, ಬಿಗ್‌ ಬಾಸ್‌ ಮನೆಗೆ ಬೀಗ ಜಡಿಯಲಾಗಿದೆ.

ಬಿಡದಿ ಸಮೀಪ ಇರುವ ಜಾಲಿವುಡ್ ಸ್ಟುಡಿಯೋದಲ್ಲಿ ಬಿಗ್‌ ಬಾಸ್‌ ಮನೆ ನಿರ್ಮಿಸಲಾಗಿದೆ. ಈ ಸ್ಟುಡಿಯೋದಲ್ಲಿ ಉಂಟಾಗುತ್ತಿರುವ ತಾಜ್ಯವನ್ನು ಸೂಕ್ತ ರೀತಿಯಲ್ಲಿ ಸಂಸ್ಕರಣೆ ಮತ್ತು ವಿಲೇವಾರಿ ಮಾಡಿಲ್ಲ. ಜಾಲಿವುಡ್ ಸ್ಟುಡಿಯೋದಿಂದ ದೊಡ್ಡ ಪ್ರಮಾಣದ ತಾಜ್ಯ ನೀರು ಹೊರಬರುತ್ತಿದೆ ಎಂದು ಆರೋಪಿಸಲಾಗಿತ್ತು. ಆ ಕಾರಣಕ್ಕಾಗಿ ಜಾಲಿವುಡ್‌ ಸ್ಟುಡಿಯೋಗೂ ಕೂಡ ನೋಟಿಸ್‌ ನೀಡಲಾಗಿತ್ತು. ಆದರೆ, ಸ್ಟುಡಿಯೋದ ಮಾಲೀಕರು ನೋಟಿಸ್‌ನಲ್ಲಿ ಉಲ್ಲೇಖಿಸಲಾದ ಅಂಶಗಳನ್ನು ಪಾಲಿಸಿರಲಿಲ್ಲ. ಈ ನಡುವೆ, ಅದೇ ಸ್ಟುಡಿಯೋದಲ್ಲಿ ಬಿಗ್‌ ಬಾಸ್‌ ಶೋ ಕೂಡ ಆರಂಭವಾಗಿತ್ತು.

Advertisements

ಇದೀಗ, ತ್ಯಾಜ್ಯವನ್ನು ವೈಜ್ಞಾನಿಕರವಾಗಿ ಸಂಸ್ಕರಿಸದ ಕಾರಣ, ಪರಿಸರ ಮಾಲಿನ್ಯ ಉಂಟಾಗುತ್ತಿದೆ. ಪೇಪರ್ ತಟ್ಟೆ, ಲೋಟ, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಅವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗಿದೆ. ಮಾತ್ರವಲ್ಲದೆ, ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅಗತ್ಯ ಅನುಮತಿಯನ್ನೂ ಪಡೆದಿಲ್ಲ ಎಂಬ ಆರೋಪದ ಮೇಲೆ ಬಿಗ್‌ ಬಾಸ್‌ ಮನೆಯನ್ನು ಮುಚ್ಚಲು ಸೂಚಿಸಲಾಗಿತ್ತು. ಇದೀಗ, ಜಾಲಿವುಡ್ ಸ್ಟುಡಿಯೋಗೆ ಧಾವಿಸಿದ ಅಧಿಕಾರಿಗಳು ಮನೆಗೆ ಬೀಗ ಜಡಿದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಗ್‌ ಬಾಸ್ | ಮನೆಯನ್ನು ತಕ್ಷಣವೇ ಬಂದ್​ ಮಾಡಲು ನೋಟಿಸ್!

ಕನ್ನಡದ ‘ಬಿಗ್ ಬಾಸ್' ಸೀಸನ್ 12 ರಿಯಾಲಿಟಿ ಶೋಗೆ ಕರ್ನಾಟಕ...

ಒಳಮೀಸಲಾತಿ ಜಾರಿಗೆ ವಿಳಂಬ; ರಾಜಿನಾಮೆಗೆ ಆಗ್ರಹಿಸಿ ಸಚಿವ ಮಹದೇವಪ್ಪ ಮನೆಗೆ ಮುತ್ತಿಗೆ

ಪರಿಶಿಷ್ಟ ಜಾತಿಯೊಳಗೆ (ಎಸ್‌ಸಿ) ಒಳಮೀಸಲಾತಿ ಜಾರಿ ಮಾಡುವುದಕ್ಕೆ ವಿಳಂಬ ಮಾಡಲಾಗುತ್ತಿದೆ ಎಂದು...

ಒಳಮೀಸಲಾತಿ ಜಾರಿಗೆ ಅಡ್ಡಿಪಡಿಸುತ್ತಿರುವ ಸಚಿವ ಮಹದೇವಪ್ಪ ಮನೆಗೆ ಅ.10 ರಂದು ಮುತ್ತಿಗೆ

ಪರಿಶಿಷ್ಠ ಜಾತಿಗಳ ಒಳಮೀಸಲಾತಿ ಜಾರಿಗೆ ವಿರೋಧಿಸುತ್ತಿರುವ ಸಮಾಜ ಕಲ್ಯಾಣ ಸಚಿವರು ತಕ್ಷಣ...

ಅ. 18ರವರೆಗೆ ಶಾಲಾ ಕಾಲೇಜುಗಳಿಗೆ ದಸರಾ ರಜೆ ವಿಸ್ತರಣೆ; ಸಮೀಕ್ಷೆ ಕಾರ್ಯಕ್ಕೆ ಶಿಕ್ಷಕರ ಹೆಚ್ಚುವರಿ ಬಳಕೆ

ರಾಜ್ಯದಲ್ಲಿ ಅಕ್ಟೋಬರ್ 18ರವರೆಗೆ ಶಾಲೆಗಳ ದಸರಾ ರಜೆ ವಿಸ್ತರಿಸಲಾಗಿದೆ. ಸಿಎಂ ಸಿದ್ದರಾಮಯ್ಯ...

Download Eedina App Android / iOS

X