ಆಸ್ಕರ್ 2026: ಅತ್ಯುತ್ತಮ ಅಂತಾರಾಷ್ಟ್ರೀಯ ಸಿನಿಮಾ ವಿಭಾಗಕ್ಕೆ ಮರಾಠಿಯ ‘ಗೋಂಧಳ್’ ಆಯ್ಕೆ

Date:

2026ರಲ್ಲಿ ನಡೆಯಲಿರುವ 99ನೇ ಸಾಲಿನ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿಯ (ಆಸ್ಕರ್) ‘ಅತ್ಯುತ್ತಮ ಅಂತಾರಾಷ್ಟ್ರೀಯ ಸಿನಿಮಾ’ ವಿಭಾಗದ ಸ್ಪರ್ಧೆಗೆ ಭಾರತದ ಅಧಿಕೃತ ಪ್ರವೇಶವಾಗಿ ಮರಾಠಿ ಚಲನಚಿತ್ರ ʼಗೋಂಧಳ್ʼ ಆಯ್ಕೆಯಾಗಿದೆ. ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ (FFI) ರಚಿಸಿದ್ದ ತಜ್ಞರ ಆಯ್ಕೆ ಸಮಿತಿಯು ಈ ನಿರ್ಧಾರವನ್ನು ಪ್ರಕಟಿಸಿದೆ.

- Advertisement -

ದೇಶಾದ್ಯಂತ ವಿವಿಧ ಭಾಷೆಗಳಿಂದ ಸಲ್ಲಿಕೆಯಾಗಿದ್ದ ಹತ್ತಾರು ಪ್ರಸಿದ್ಧ ಸಿನಿಮಾಗಳನ್ನು ವೀಕ್ಷಿಸಿದ ಬಳಿಕ, ತೀರ್ಪುಗಾರರ ಮಂಡಳಿಯು ಸರ್ವಾನುಮತದಿಂದ ‘ಗೋಂಧಳ್’ ಚಿತ್ರವನ್ನು ಆಸ್ಕರ್ ರೇಸ್‌ಗೆ ಅಂತಿಮಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಎರಡನೇ ಬರಪಟ್ಟಿಗೂ ಬಾರದ ರಾಮದುರ್ಗ, ಸವದತ್ತಿ: ಸಂಕಷ್ಟದಲ್ಲಿ ರೈತರು,...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಇದನ್ನೂ ಓದಿ: ಭಾರತದ ಪ್ರಸಕ್ತ ಬಿಕ್ಕಟ್ಟುಗಳಿಗೆ ಕನ್ನಡಿ ಹಿಡಿಯಲಿರುವ ನ್ಯೂಯಾರ್ಕ್‌ ಅಂತಾರಾಷ್ಟ್ರೀಯ ಚಿತ್ರೋತ್ಸವ

ಮಹಾರಾಷ್ಟ್ರದ ಗ್ರಾಮೀಣ ಭಾಗದ ವಿಶಿಷ್ಟ ಜಾನಪದ ಸಂಸ್ಕೃತಿ, ಆಚರಣೆಗಳು ಹಾಗೂ ಸಾಮಾಜಿಕ ಸಂಘರ್ಷಗಳ ಸುತ್ತ ಹೆಣೆದಿರುವ ಈ ಸಿನಿಮಾದ ಬಲವಾದ ಕಥಾವಸ್ತು ಮತ್ತು ತಾಂತ್ರಿಕ ಶ್ರೀಮಂತಿಕೆ ಜಾಗತಿಕ ಮಟ್ಟದ ಪ್ರೇಕ್ಷಕರನ್ನು ತಲುಪುವ ಸಾಮರ್ಥ್ಯ ಹೊಂದಿದೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.

ವಿಮರ್ಶಕರ ಮೆಚ್ಚುಗೆ ಗಳಿಸಿರುವ ಈ ಸಿನಿಮಾ ಈಗಾಗಲೇ ಹಲವು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಇದೀಗ ವಿಶ್ವದ ಅತ್ಯುನ್ನತ ಸಿನಿಮಾ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ ಈ ಚಿತ್ರಕ್ಕೆ ಒಲಿದಿದ್ದು, ಚಿತ್ರತಂಡಕ್ಕೆ ದೇಶಾದ್ಯಂತ ಚಿತ್ರರಂಗದ ಗಣ್ಯರಿಂದ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.

ಈವರೆಗೆ ಭಾರತದಿಂದ ಮಹಬೂಬ್ ಖಾನ್ ಅವರ ‘ಮದರ್ ಇಂಡಿಯಾ’, ಮೀರಾ ನಾಯರ್ ಅವರ ‘ಸಲಾಂ ಬಾಂಬೆ’ ಹಾಗೂ ಆಶುತೋಷ್ ಗೊವಾರಿಕರ್ ಅವರ ‘ಲಗಾನ್’ ಚಲನಚಿತ್ರಗಳು ಆಸ್ಕರ್ ಪ್ರಶಸ್ತಿಯ ಈ ವರ್ಗೀಕರಣವನ್ನು ಪ್ರವೇಶಿಸಿವೆ. ಪ್ರಾದೇಶಿಕ ಭಾಷೆಯ ಚಲನಚಿತ್ರವೊಂದು ಇದೇ ಮೊದಲ ಬಾರಿ ವಿಕ್ರಮ ಸ್ಥಾಪಿಸಿದೆ.

ಇನ್ನು ದಕ್ಷಿಣ ಕನ್ನಡದ ಮರಾಠಿ ಭಾಷಿಕರಲ್ಲಿ ‘ಗೋಂದೋಳು’ ಹೆಸರಿನ ಆಚರಣೆ ಇದೆ. ಈ ಆಚರಣೆಯಲ್ಲಿ ಹಂದಿ ಬಲಿ ಕೊಡುವ ಪದ್ಧತಿ ಇದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಾಕಿಸ್ತಾನದ ಮಸೀದಿಯಲ್ಲಿ ಭೀಕರ ಆತ್ಮಾಹುತಿ ದಾಳಿ: 16 ಮಂದಿ ಸಾವು

ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಕೊಹಾಟ್ ಜಿಲ್ಲೆಯ ಹಳೆಯ ಪೊಲೀಸ್...

ಸಿನಿಮಾ ಟಿಕೆಟ್ ಮೇಲೆ ಹೆಚ್ಚುವರಿ ಸುಂಕ! ಸೆಸ್ ಹಿಂಪಡೆಯಲು ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಒತ್ತಾಯ

ಸೆಪ್ಟೆಂಬರ್ 30ರಿಂದ ಸಿನಿಮಾ ಟಿಕೆಟ್‌ಗಳ ಮೇಲೆ ಶೇ. 2ರಷ್ಟು ಹೆಚ್ಚುವರಿ ಸೆಸ್...

SIR ಪ್ರಕ್ರಿಯೆಯಲ್ಲಿ ಗಂಭೀರ ಲೋಪ; ಚುನಾವಣಾ ಆಯೋಗಕ್ಕೆ ಬಿ.ಕೆ. ಹರಿಪ್ರಸಾದ್ ಪತ್ರ

ASDDO ಅಂಕಿಅಂಶಗಳಲ್ಲಿ ಹೊಂದಾಣಿಕೆ ಇಲ್ಲ, 44 ಲಕ್ಷ ಮತದಾರರ ಮ್ಯಾಪಿಂಗ್ ಸಮಸ್ಯೆ,...

ಪಾಸ್‌ಪೋರ್ಟ್‌ನಲ್ಲಿ ಮಾಜಿ ಸಂಗಾತಿ ಹೆಸರು ಅಳಿಸಲು ‘ವಿಚ್ಛೇದನ ಆದೇಶ’ ಕಡ್ಡಾಯವಲ್ಲ: ಕೇರಳ ಹೈಕೋರ್ಟ್

ವಿಚ್ಛೇದಿತ ವ್ಯಕ್ತಿಯು ತಮ್ಮ ಪಾಸ್‌ಪೋರ್ಟ್‌ನಿಂದ ಮಾಜಿ ಸಂಗಾತಿಯ (ಪತಿ ಅಥವಾ ಪತ್ನಿ)...