ಯಶ್‌ ಚೋಪ್ರಾ ಪತ್ನಿ, ಗಾಯಕಿ, ನಿರ್ಮಾಪಕಿ ಪಮೇಲಾ ಇನ್ನಿಲ್ಲ

Date:

Advertisements

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಪಮೇಲಾ ಚೋಪ್ರಾ

ಬೆಳಗ್ಗೆ 11 ಗಂಟೆ ಸುಮಾರಿಗೆ ನೆರವೇರಿದ ಅಂತ್ಯಕ್ರಿಯೆ

ಬಾಲಿವುಡ್‌ನ ಖ್ಯಾತ ನಿರ್ದೇಶಕ, ದಿವಂಗತ ಯಶ್‌ ಚೋಪ್ರಾ ಅವರ ಪತ್ನಿ, ಗಾಯಕಿ, ನಿರ್ಮಾಪಕಿ ಪಮೇಲಾ ಚೋಪ್ರಾ ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ. 11 ಗಂಟೆ ಸುಮಾರಿಗೆ ಮುಂಬೈನಲ್ಲಿ ಅವರ ಅಂತ್ಯಕ್ರಿಯೆ ನೆರವೇರಿದೆ ಎಂದು ಚೋಪ್ರಾ ಕುಟುಂಬದ ಆಪ್ತರು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

Advertisements

74 ವರ್ಷದ ಪಮೇಲಾ ಚೋಪ್ರಾ ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇತ್ತೀಚೆಗೆ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಗುರುವಾರ ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಪಮೇಲಾ ಅವರ ಅಗಲಿಕೆಯೇ ಸುದ್ದಿ ತಿಳಿಯುತ್ತಿದ್ದಂತೆ ಕರಣ್‌ ಜೋಹರ್‌, ಹೃತಿಕ್‌ ರೋಶನ್‌, ರಾಕೇಶ್‌ ರೋಶನ್‌, ಸೋನು ನಿಗಮ್‌, ಅನುಪಮ್‌ ಖೇರ್‌ ಮುಂತಾದವರು ಅಂತಿಮ ದರ್ಶನ ಪಡೆದಿದ್ದಾರೆ. ಅಜಯ್‌ ದೇವಗನ್‌, ಜಾವೇದ್‌ ಅಖ್ತರ್‌, ಅನುಷ್ಕಾ ಶರ್ಮಾ ಸೇರಿದಂತೆ ಬಾಲಿವುಡ್‌ನ ಹಲವು ಸೆಲೆಬ್ರಿಟಿಗಳು ಪಮೇಲಾ ಅವರ ಅಗಲಿಕೆಗೆ ಟ್ವೀಟ್‌ ಮೂಲಕ ಕಂಬನಿ ಮಿಡಿದಿದ್ದಾರೆ.

1970ರಲ್ಲಿ ಯಶ್‌ ಚೋಪ್ರಾ ಅವರನ್ನು ವಿವಾಹವಾಗಿದ್ದ ಪಮೇಲಾ 1976ರಲ್ಲಿ ಅಮಿತಾಬ್‌ ಬಚ್ಚನ್‌ ಮುಖ್ಯಭೂಮಿಕೆಯಲ್ಲಿ ತೆರೆಕಂಡ ʼಕಭಿ ಕಭಿʼ ಚಿತ್ರದ ಹಾಡೊಂದಕ್ಕೆ ಧ್ವನಿಯಾಗುವ ಮೂಲಕ ಹಿನ್ನೆಲೆ ಗಾಯಕಿಯಾಗಿ ಗುರುತಿಸಿಕೊಂಡರು. ನಂತರದ ದಿನಗಳಲ್ಲಿ ʼದೂಸ್ರಾ ಆದ್ಮಿʼ, ʼನೂರಿʼ, ʼಕಾಲಾ ಪಥ್ಥರ್‌ʼ, ತ್ರಿಶೂಲ್‌, ʼಸಿಲ್‌ ಸಿಲಾʼ ಮುಂತಾದ ಚಿತ್ರಗಳಲ್ಲಿನ ಹಲವು ಹಾಡುಗಳಿಗೆ ಅವರು ಧ್ವನಿಯಾಗಿದ್ದರು. ಪಮೇಲಾ ಅವರ ಕಂಠಸಿರಿಯಲ್ಲಿ ಮೂಡಿಬಂದಿದ್ದ ʼದಿಲ್‌ವಾಲೆ ದುಲ್ಹನಿಯಾ ಲೇ ಜಾಯೆಂಗೆʼ ಚಿತ್ರದ ʼಘರ್‌ ಆ ಪರದೇಸಿʼ ಭಾರೀ ಜನಪ್ರಿಯತೆ ಗಳಿಸಿತ್ತು.

1993ರಲ್ಲಿ ಜಾಕಿ ಶ್ರಾಫ್‌, ಅಮೃತಾ ಸಿಂಗ್‌, ಜೂಹಿ ಚಾವ್ಲಾ ಮುಖ್ಯಭೂಮಿಕೆಯಲ್ಲಿ ತೆರೆಕಂಡಿದ್ದ ʼಆಯ್ನಾʼ ಚಿತ್ರಕ್ಕೆ ಬಂಡವಾಳ ಹೂಡುವ ಮೂಲಕ ನಿರ್ಮಾಪಕಿಯಾಗಿ ಬಡ್ತಿ ಪಡೆದಿದ್ದರು. ʼಸಿಲ್‌ ಸಿಲಾʼ ಮತ್ತು ʼಸವಾಲ್‌ʼ ಚಿತ್ರಗಳಲ್ಲಿ ವಸ್ತ್ರ ವಿನ್ಯಾಸಕಿಯಾಗಿಯೂ ಪಮೇಲಾ ಕೆಲಸ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X