ಕಾನ್ ಚಲನಚಿತ್ರೋತ್ಸವ: ಗ್ರ್ಯಾಂಡ್ ಪ್ರಿ ಪ್ರಶಸ್ತಿ ಗೆದ್ದು ಇತಿಹಾಸ ಸೃಷ್ಟಿಸಿದ ಪಾಯಲ್ ಕಪಾಡಿಯಾ

Date:

Advertisements

ಕಾನ್ ಚಲನಚಿತ್ರೋತ್ಸವದಲ್ಲಿ ಗ್ರ್ಯಾಂಡ್ ಪ್ರಿ (Grand Prix) ಪ್ರಶಸ್ತಿ ಗೆಲ್ಲುವ ಮೂಲಕ ಚಲನಚಿತ್ರ ನಿರ್ಮಾಪಕಿ ಪಾಯಲ್ ಕಪಾಡಿಯಾ ಅವರು ಶನಿವಾರ ಇತಿಹಾಸವನ್ನು ಸೃಷ್ಟಿಸಿದ್ದಾರೆ. ಅವರ ಸ್ಪೆಲ್‌ಬೈಂಡಿಂಗ್ ನಾಟಕ “ಆಲ್ ವಿ ಇಮ್ಯಾಜಿನ್ ಆಸ್ ಲೈಟ್” 2024ರ ಕಾನ್ ಚಲನಚಿತ್ರೋತ್ಸವದಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿಯನ್ನು ಗೆದ್ದಿದೆ.

ಗುರುವಾರ ರಾತ್ರಿ ತೆರೆಕಂಡ ಎಂಎಸ್ ಕಪಾಡಿಯಾ ಅವರ ಚೊಚ್ಚಲ ನಿರ್ದೇಶನದ ಚಿತ್ರವು ಅಂತರರಾಷ್ಟ್ರೀಯ ಪತ್ರಿಕೆಗಳಲ್ಲಿ ಉತ್ತಮ ವಿಮರ್ಶೆಗಳನ್ನು ಪಡೆದುಕೊಂಡಿದೆ. 30 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತೀಯ ಚಲನಚಿತ್ರಕ್ಕೆ ಕಾನ್‌ನಲ್ಲಿ ಗ್ರ್ಯಾಂಡ್ ಪ್ರಿ ಪ್ರಶಸ್ತಿ ಲಭಿಸಿದೆ. ಜೊತೆಗೆ ಸ್ಪರ್ಧೆಯಲ್ಲಿ ಮೊದಲ ಬಾರಿಗೆ ಭಾರತೀಯ ಮಹಿಳಾ ನಿರ್ದೇಶಕರ ಸಿನಿಮಾ ಪ್ರದರ್ಶನಗೊಂಡಿದೆ.

ಈ ಚಲನಚಿತ್ರ ಪ್ರದರ್ಶನಗೊಂಡ ಬಳಿಕ ಪ್ರೇಕ್ಷಕರ ಚಪ್ಪಾಳೆಯ ಸುರಿಮಳೆ ಸುರಿದಿದೆ. ಸುಮಾರು ಎಂಟು ನಿಮಿಷಗಳ ಕಾಲ ಪ್ರೇಕ್ಷಕರು ನಿಂತು ಚಪ್ಪಾಳೆ ತಟ್ಟಿ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ?  ಮೇ ಸಾಹಿತ್ಯ ಮೇಳ | ಹುಚ್ಚಮ್ಮ ಚೌಧರಿ ಕುಣಿಕೇರಿಗೆ ‘ಲಕ್ಷ್ಮಿಬಾಯಿ ಕಟ್ಟಿಮನಿ ಸಮಾಜಮುಖಿ ಮಹಿಳೆ ಪ್ರಶಸ್ತಿ’

“ಆಲ್ ವಿ ಇಮ್ಯಾಜಿನ್ ಆಸ್ ಲೈಟ್”, ಮಲಯಾಳಂ-ಹಿಂದಿ ಫೀಚರ್ ಸಿನಿಮಾವಾಗಿದ್ದು, ಅಂತರಾಷ್ಟ್ರೀಯ ವಿಮರ್ಶಕರು ಚಿತ್ರವನ್ನು ಹಾಡಿಹೊಗಳಿದ್ದಾರೆ. ಪಾಯಲ್ ಕಪಾಡಿಯಾ ಅವರ ಕಥೆ ಹೇಳುವ ರೀತಿಯನ್ನು ಶ್ಲಾಘಿಸಿದ್ದಾರೆ.

ಪ್ರಶಸ್ತಿ ಗೆದ್ದ ಭಾರತೀಯ ನಟಿ

ಇನ್ನು ಈ ವಿಶ್ವ ಪ್ರತಿಷ್ಠಿತ ಕಾನ್ ಚಲನಚಿತ್ರೋತ್ಸವದಲ್ಲಿ ಅನಸೂಯಾ ಸೇನ್‌ಗುಪ್ತಾ ಅವರು ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ನಟಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ‘ದಿ ಶೇಮ್‌ಲೆಸ್‌’ನಲ್ಲಿ (The Shameless) ಅನಸೂಯಾ ಅವರ ಅಭಿನಯ ಗಮನ ಸೆಳೆದಿದೆ. ಇದನ್ನು ಬಲ್ಗೇರಿಯನ್ ನಿರ್ದೇಶಕ ಕಾನ್‌ಸ್ಟಾಂಟಿನ್ ಬೊಜಾನೋವ್ ಬರೆದು ನಿರ್ದೇಶಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೇಣುಕಾಸ್ವಾಮಿ ಕೊಲೆ ಪ್ರಕರಣ | ನಟ ದರ್ಶನ್‌, ಪವಿತ್ರಾ ಗೌಡ ಜಾಮೀನು ಭವಿಷ್ಯ ಇಂದು ತೀರ್ಮಾನ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌, ಪವಿತ್ರಾ ಗೌಡ...

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

Download Eedina App Android / iOS

X