ಸರ್ಕಾರಿ ಬಂಗಲೆ ತೆರವಿಗೆ ಸೂಚನೆ; ರಾಹುಲ್‌ ನಮ್ಮ ಮನೆಗೆ ಬನ್ನಿ ಎಂದ ಪ್ರಕಾಶ್‌ ರಾಜ್‌

Date:

  • ರಾಹುಲ್‌ ಗಾಂಧಿ ಅನರ್ಹತೆ ವಿರೋಧಿಸಿದ್ದ ಪ್ರಕಾಶ್‌ ರಾಜ್‌
  • ಇಡೀ ಭಾರತವೇ ನಿಮ್ಮ ಮನೆ ಎಂದ ಬಹುಭಾಷಾ ನಟ

ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ಲೋಕಸಭೆ ಸಚಿವಾಲಯ ಸೂಚಿಸಿದ ಬೆನ್ನಲ್ಲೇ ಬಹುಭಾಷಾ ನಟ ಪ್ರಕಾಶ್‌ ರಾಜ್‌ ತಮ್ಮ ಮನೆಗೆ ಬರುವಂತೆ ಆಹ್ವಾನಿಸಿದ್ದಾರೆ.

- Advertisement -

ಮೋದಿ ಉಪನಾಮ ಪ್ರಕರಣಕ್ಕೆ ಸಂಬಂಧಿಸಿ ಸೂರತ್‌ ನ್ಯಾಯಾಲಯ ರಾಹುಲ್‌ ಗಾಂಧಿಯವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ, ಜಾಮೀನು ನೀಡಿದ ಬಳಿಕ ಲೋಕಸಭಾ ಸಚಿವಾಲಯ ಅವರನ್ನು ಸದಸ್ಯ ಸ್ಥಾನದಿಂದ ಅರ್ನಹಗೊಳಿಸಿತ್ತು. ಇದಾದ ಕೆಲ ದಿನಕ್ಕೆ ರಾಹುಲ್‌ ಗಾಂಧಿ ವಾಸವಿದ್ದ ದೆಹಲಿಯ ತುಘಲಕ್‌ ರಸ್ತೆಯ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ಸಚಿವಾಲಯ ಸೂಚಿಸಿತ್ತು. ಮಾರ್ಚ್‌ 28ರಂದು ಸಚಿವಾಲಯದ ಉಪ ಕಾರ್ಯದರ್ಶಿ ಮೋಹಿತ್‌ ರಾಜನ್‌ ಅವರಿಗೆ ಪತ್ರ ಬರೆಯುವ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್‌, ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವುದಾಗಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ರಾಹುಲ್‌ ಗಾಂಧಿ ಲೋಕಸಭೆಯ ಉಪ ಕಾರ್ಯದರ್ಶಿಗಳಿಗೆ ಬರೆದ ಪತ್ರವನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿರುವ ಪ್ರಕಾಶ್‌ ರಾಜ್‌, “ಪ್ರೀತಿಯ ರಾಹುಲ್‌ ಗಾಂಧಿ, ಈ ಸರ್ವಾಧಿಕಾರಿಗಳಿಂದ ದೇಶವನ್ನು ಕಾಪಾಡಲು ಪಣ ತೊಟ್ಟಿರುವ ಪ್ರತಿಯೊಬ್ಬರ ಮನೆಯೂ ನಿಮ್ಮದೇ. ಭಾರತ ನಿಮ್ಮ ಮನೆ, ನಿಮಗೆ ನನ್ನ ಮನೆಗೆ ಆದರದ ಸ್ವಾಗತ ಕೋರುತ್ತೇನೆ. ಇನ್ನು ಹೆಚ್ಚಿನ ಶಕ್ತಿ ನಿಮ್ಮದಾಗಲಿ” ಎಂದು ಹಾರೈಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೊರಳಿಗೆ ಲಕ್ಷ್ಮಿದೇವಿ ಹಾರ ಧರಿಸಿದ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು

ರಾಹುಲ್ ಗಾಂಧಿಯವರನ್ನು ಅನರ್ಹತೆಗೊಳಿಸಿದ ಸಂದರ್ಭದಲ್ಲೂ ಪ್ರತಿಕ್ರಿಯಿಸಿದ್ದ ಪ್ರಕಾಶ್‌ ರಾಜ್‌, “ಈ ರೀತಿ ಕೀಳುಮಟ್ಟದ, ಪ್ರಗತಿಗೆ ಮಾರಕವಾಗುಂತಹ ರಾಜನೀತಿ ಮಾಡಲು‌ ನಾಚಿಕೆಯಾಗಬೇಕು. ಇದು ದೇಶಕ್ಕಾಗಿ ನಾವೆಲ್ಲರೂ ಧ್ವನಿ ಎತ್ತಬೇಕಿರುವ ಸಂದರ್ಭ. ಇಂತಹ ಹೊತ್ತಿನಲ್ಲಿ ನಾವು ಸುಮ್ಮನೆ ಕೂತರೆ, ಇವತ್ತಿನ ನಮ್ಮ ಮೌನಕ್ಕೆ ನಾಳೆ ದಿನ ನಾವೇ ದುಬಾರಿ ಬೆಲೆ ತೆರಬೇಕಾಗುತ್ತದೆ” ಎಂದು ಜನಸಾಮಾನ್ಯರನ್ನು ಎಚ್ಚರಿಸುವ ಪ್ರಯತ್ನ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ತಬ್ಧ ಚಿತ್ರ ಮಾತಾಡಿದಂತೆ, ಶಬ್ದ ಕಣ್ಣಿಗೆ ಕಾಣಿಸುವಂತೆ- ಸಿನೆಮಾದ ತೆರೆಮರೆಯ ತಾತ್ವಿಕತೆ

ಆಫ್-ಸ್ಕ್ರೀನ್ ಶಬ್ದ ಸಿನೆಮಾದ ಕೇವಲ ತಾಂತ್ರಿಕ ಕುಶಲತೆಯಾಗಿರದೆ, ಅದರ ತಾತ್ವಿಕ ದೃಷ್ಟಿಕೋನವನ್ನೇ...

ಆಟೋಕರೆಕ್ಟ್ ಎಡವಟ್ಟು: ‘ಆತ್ಮಹತ್ಯೆ’ ಪೋಸ್ಟ್ ಹಾಕಿ ಮುಂಬೈ ಪೊಲೀಸರ ಬೆವರಿಳಿಸಿದ ಮರಾಠಿ ನಟ!

ಮರಾಠಿ ಚಿತ್ರರಂಗದ ಜನಪ್ರಿಯ ನಟ ವಿಕಾಸ್ ಸಮುದ್ರೆ ಅವರು ಸಾಮಾಜಿಕ ಜಾಲತಾಣದಲ್ಲಿ...

ನಟ ಶಿವರಾಜ್‌ಕುಮಾರ್ ಜನ ಪರವಾಗಿ ನಿಲ್ಲಬೇಕು; ನಟ ಪ್ರಕಾಶ್‌ ರಾಜ್ ಕರೆ

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗ ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವು...

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್‌ಗೆ ತಾತ್ಕಾಲಿಕ ರಿಲೀಫ್, ‘ಮಾಫಿ ಸಾಕ್ಷಿ’ ಆದೇಶ ವಜಾ

ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ...