ಸರ್ಕಾರಿ ಬಂಗಲೆ ತೆರವಿಗೆ ಸೂಚನೆ; ರಾಹುಲ್‌ ನಮ್ಮ ಮನೆಗೆ ಬನ್ನಿ ಎಂದ ಪ್ರಕಾಶ್‌ ರಾಜ್‌

Date:

Advertisements
  • ರಾಹುಲ್‌ ಗಾಂಧಿ ಅನರ್ಹತೆ ವಿರೋಧಿಸಿದ್ದ ಪ್ರಕಾಶ್‌ ರಾಜ್‌
  • ಇಡೀ ಭಾರತವೇ ನಿಮ್ಮ ಮನೆ ಎಂದ ಬಹುಭಾಷಾ ನಟ

ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ಲೋಕಸಭೆ ಸಚಿವಾಲಯ ಸೂಚಿಸಿದ ಬೆನ್ನಲ್ಲೇ ಬಹುಭಾಷಾ ನಟ ಪ್ರಕಾಶ್‌ ರಾಜ್‌ ತಮ್ಮ ಮನೆಗೆ ಬರುವಂತೆ ಆಹ್ವಾನಿಸಿದ್ದಾರೆ.

ಮೋದಿ ಉಪನಾಮ ಪ್ರಕರಣಕ್ಕೆ ಸಂಬಂಧಿಸಿ ಸೂರತ್‌ ನ್ಯಾಯಾಲಯ ರಾಹುಲ್‌ ಗಾಂಧಿಯವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ, ಜಾಮೀನು ನೀಡಿದ ಬಳಿಕ ಲೋಕಸಭಾ ಸಚಿವಾಲಯ ಅವರನ್ನು ಸದಸ್ಯ ಸ್ಥಾನದಿಂದ ಅರ್ನಹಗೊಳಿಸಿತ್ತು. ಇದಾದ ಕೆಲ ದಿನಕ್ಕೆ ರಾಹುಲ್‌ ಗಾಂಧಿ ವಾಸವಿದ್ದ ದೆಹಲಿಯ ತುಘಲಕ್‌ ರಸ್ತೆಯ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ಸಚಿವಾಲಯ ಸೂಚಿಸಿತ್ತು. ಮಾರ್ಚ್‌ 28ರಂದು ಸಚಿವಾಲಯದ ಉಪ ಕಾರ್ಯದರ್ಶಿ ಮೋಹಿತ್‌ ರಾಜನ್‌ ಅವರಿಗೆ ಪತ್ರ ಬರೆಯುವ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್‌, ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವುದಾಗಿ ತಿಳಿಸಿದ್ದಾರೆ.

ರಾಹುಲ್‌ ಗಾಂಧಿ ಲೋಕಸಭೆಯ ಉಪ ಕಾರ್ಯದರ್ಶಿಗಳಿಗೆ ಬರೆದ ಪತ್ರವನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿರುವ ಪ್ರಕಾಶ್‌ ರಾಜ್‌, “ಪ್ರೀತಿಯ ರಾಹುಲ್‌ ಗಾಂಧಿ, ಈ ಸರ್ವಾಧಿಕಾರಿಗಳಿಂದ ದೇಶವನ್ನು ಕಾಪಾಡಲು ಪಣ ತೊಟ್ಟಿರುವ ಪ್ರತಿಯೊಬ್ಬರ ಮನೆಯೂ ನಿಮ್ಮದೇ. ಭಾರತ ನಿಮ್ಮ ಮನೆ, ನಿಮಗೆ ನನ್ನ ಮನೆಗೆ ಆದರದ ಸ್ವಾಗತ ಕೋರುತ್ತೇನೆ. ಇನ್ನು ಹೆಚ್ಚಿನ ಶಕ್ತಿ ನಿಮ್ಮದಾಗಲಿ” ಎಂದು ಹಾರೈಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಕೊರಳಿಗೆ ಲಕ್ಷ್ಮಿದೇವಿ ಹಾರ ಧರಿಸಿದ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು

ರಾಹುಲ್ ಗಾಂಧಿಯವರನ್ನು ಅನರ್ಹತೆಗೊಳಿಸಿದ ಸಂದರ್ಭದಲ್ಲೂ ಪ್ರತಿಕ್ರಿಯಿಸಿದ್ದ ಪ್ರಕಾಶ್‌ ರಾಜ್‌, “ಈ ರೀತಿ ಕೀಳುಮಟ್ಟದ, ಪ್ರಗತಿಗೆ ಮಾರಕವಾಗುಂತಹ ರಾಜನೀತಿ ಮಾಡಲು‌ ನಾಚಿಕೆಯಾಗಬೇಕು. ಇದು ದೇಶಕ್ಕಾಗಿ ನಾವೆಲ್ಲರೂ ಧ್ವನಿ ಎತ್ತಬೇಕಿರುವ ಸಂದರ್ಭ. ಇಂತಹ ಹೊತ್ತಿನಲ್ಲಿ ನಾವು ಸುಮ್ಮನೆ ಕೂತರೆ, ಇವತ್ತಿನ ನಮ್ಮ ಮೌನಕ್ಕೆ ನಾಳೆ ದಿನ ನಾವೇ ದುಬಾರಿ ಬೆಲೆ ತೆರಬೇಕಾಗುತ್ತದೆ” ಎಂದು ಜನಸಾಮಾನ್ಯರನ್ನು ಎಚ್ಚರಿಸುವ ಪ್ರಯತ್ನ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X