2ನೇ ಮದುವೆಯಾದ ಆಶಿಷ್‌ ವಿದ್ಯಾರ್ಥಿ : ಮೊದಲ ಪತ್ನಿ ಅಸಮಾಧಾನ

Date:

ರೂಪಾಲಿ ಬರುವಾ ಜೊತೆ ದಾಂಪತ್ಯಕ್ಕೆ ಕಾಲಿಟ್ಟ ಆಶಿಷ್‌

ಎರಡನೇ ಮದುಯಾಗಿದ್ದಕ್ಕೆ ಟೀಕೆಗೆ ಗುರಿಯಾದ ನಟ

ಬಹುಭಾಷಾ ನಟ ಆಶಿಷ್‌ ವಿದ್ಯಾರ್ಥಿ ಗುರುವಾರ ಕೊಲ್ಕತ್ತಾದಲ್ಲಿ ಅಸ್ಸಾಂ ಮೂಲದ ರೂಪಾಲಿ ಬರುವಾ ಅವರೊಂದಿಗೆ ಎರಡನೇ ಮದುವೆಯಾಗಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹಿರಿಯ ನಟನ ಮದುವೆ ಸಮಾರಂಭದ ಫೋಟೋಗಳು ವೈರಲ್‌ ಆಗಿದ್ದು, ಆಶಿಷ್‌ ನಡೆಯ ಕುರಿತು ಅವರ ಮೊದಲ ಪತ್ನಿ ರಾಜೋಶಿ ಬರುವಾ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಆಶಿಷ್‌ ಮತ್ತು ರೂಪಾಲಿ ಮದುವೆಯ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಸೆಲ್ಫೀ ಫೋಟೋ ಹಂಚಿಕೊಂಡು “ಜೀವನವೆಂಬ ಒಗಟಿನಲ್ಲಿ ನೀವು ಬಿಡಿಸಲಾಗದ ಒಗಟಾಗಬೇಡಿ” ಎಂದು ಬರೆದುಕೊಂಡಿದ್ದಾರೆ.

“ನಿಮಗೆ ಸರಿಹೊಂದುವ ವ್ಯಕ್ತಿ, ನೀವು ಅವರಿಗೆ ಎಷ್ಟು ಮುಖ್ಯ ಎಂದು ಯಾವತ್ತಿಗೂ ಕೇಳುವುದಿಲ್ಲ. ನಿಮಗೆ ನೋವುಂಟು ಮಾಡುವ ಕೆಲಸಗಳನ್ನು ಅವರು ಎಂದಿಗೂ ಮಾಡುವುದಿಲ್ಲ. ಈ ಮಾತನ್ನು ನೆನಪಿಡಿ. ನಿಮ್ಮ ತಲೆಯಲ್ಲಿ ತುಂಬಿರುವ ಅತಿಯಾದ ಆಲೋಚನೆ ಮತ್ತು ಸಂದೇಹಗಳು ಈ ಕ್ಷಣವೇ ದೂರವಾಗಲಿ, ಗೊಂದಲದಲ್ಲಿದ್ದ ನಿಮಗೆ ಸ್ಪಷ್ಟತೆ ಸಿಗಲಿ, ನಿಮ್ಮ ಬದುಕಲ್ಲಿ ಶಾಂತಿ ತುಂಬಿರಲಿ” ಎಂಬ ಬರಹಗಳನ್ನು ಹಂಚಿಕೊಳ್ಳುವ ಮೂಲಕ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ.

ರಾಜೋಶಿ ಬರುವಾ ಬೆಂಗಾಲಿ ಚಿತ್ರರಂಗದಲ್ಲಿ ಜನಪ್ರಿಯ ನಟಿಯಾಗಿ ಮತ್ತು ಹಿನ್ನೆಲೆ ಗಾಯಕಿಯಾಗಿ ಹೆಸರು ಮಾಡಿದ್ದಾರೆ. 23 ವರ್ಷಗಳ ಕಾಲ ದಾಂಪತ್ಯದಲ್ಲಿದ್ದ ಆಶಿಷ್‌ ಮತ್ತು ರಾಜೋಶಿ ಇತ್ತೀಚೆಗೆ ಪರಸ್ಪರ ಒಪ್ಪಿಗೆಯಿಂದ ದೂರವಾಗಿದ್ದರು.

ಈ ಸುದ್ದಿ ಓದಿದ್ದೀರಾ? ಅಭಿಮಾನಿಯ ಕೊನೆ ಆಸೆ ಈಡೇರಿಸಿದ ಹೃದಯವಂತ ಶಾರುಖ್‌ ಖಾನ್‌

ಆಶಿಷ್‌ ವಿದ್ಯಾರ್ಥಿ 60ನೇ ವಯಸ್ಸಿನಲ್ಲಿ ಎರಡನೇ ಮದುವೆಯಾದ ಕಾರಣಕ್ಕೆ ನೆಟ್ಟಿಗರಿಂದ ಸಾಕಷ್ಟು ಟೀಕೆಗಳನ್ನು ಎದುರಿಸುತ್ತಿದ್ದಾರೆ. ಇನ್ನು ಕೆಲವರು ನಟನ ವೈಯಕ್ತಿಕ ನಿಲುವನ್ನು ಎಲ್ಲರೂ ಗೌರವಿಸಬೇಕು ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಎಚ್‌ಡಿಕೆ ‘ದಾರಿತಪ್ಪಿದ ಮಗ’: ಪ್ರಕಾಶ್ ರಾಜ್

ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ...

ಖ್ಯಾತ ಕನ್ನಡ ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್​ ಆತ್ಮಹತ್ಯೆ!

ಬೆಂಗಳೂರಿನ ಜೆಟ್​ಲಾಗ್​ ಪಬ್ ಮಾಲೀಕ ಹಾಗೂ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ...

‘RCB ಸೋಲಿಗೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಕಾರಣ’ ಎಂದು ಅವಹೇಳನಕಾರಿ ಟ್ವೀಟ್: ಕಮಿಷನರ್‌ಗೆ ದೂರು

ಕನ್ನಡ ಚಿತ್ರರಂಗದ ನಟ, ದಿವಂಗತ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ...