2 ಭಾಗಗಳಲ್ಲಿ ತೆರೆಗೆ ಬರಲಿದೆ ʼಸಪ್ತ ಸಾಗರದಾಚೆ ಎಲ್ಲೋʼ

Date:

40ನೇ ವಸಂತಕ್ಕೆ ಕಾಲಿಟ್ಟ ರಕ್ಷಿತ್‌ ಶೆಟ್ಟಿ

ನಿರೀಕ್ಷೆ ಹೆಚ್ಚಿಸಿದ ʼಸಪ್ತ ಸಾಗರದಾಚೆ ಎಲ್ಲೋʼ

ಸ್ಯಾಂಡಲ್‌ವುಡ್‌ನ ಖ್ಯಾತ ನಟ ರಕ್ಷಿತ್‌ ಶೆಟ್ಟಿ ಮಂಗಳವಾರ 40ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ನಟನಿಗೆ ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರು ಶುಭಕೋರುತ್ತಿದ್ದಾರೆ. ಇದೇ ಹೊತ್ತಿನಲ್ಲಿ ಅವರು ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ʼಸಪ್ತ ಸಾಗರದಾಚೆ ಎಲ್ಲೋʼ ಸಿನಿಮಾ ಕುರಿತ ಕುತೂಹಲಕಾರಿ ಮಾಹಿತಿಯೊಂದು ಹೊರಬಿದ್ದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಕ್ಷಿತ್‌ ಶೆಟ್ಟಿ ಹುಟ್ಟು ಹಬ್ಬದ ಪ್ರಯುಕ್ತ ವಿಶೇಷ ಮಾಹಿತಿಯೊಂದನ್ನು ಹೊರಹಾಕಿರುವ ನಿರ್ದೇಶಕ ಹೇಮಂತ್‌ ರಾವ್‌, ʼಸಪ್ತ ಸಾಗರದಾಚೆ ಎಲ್ಲೋʼ ಸಿನಿಮಾ ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ. ಕಥಾನಾಯಕನ ಮನು ಬದುಕಿನ ಚಿತ್ರಣವನ್ನು ಎರಡು ಶೇಡ್‌ಗಳಲ್ಲಿ ಚಿತ್ರಸಲಾಗಿದೆ. ಹೀಗಾಗಿ ಚಿತ್ರವನ್ನು ಎರಡು ಭಾಗಗಳಲ್ಲಿ ನಿರೂಪಿಸಲಾಗಿದೆ ಎಂದಿದ್ದಾರೆ. ಇದೇ ಜೂನ್‌ 15 ಚಿತ್ರದ ಎರಡೂ ಭಾಗಗಳ ಬಿಡುಗಡೆ ದಿನಾಂಕವನ್ನು ಘೋಷಿಸುವುದಾಗಿ ತಿಳಿಸಿದ್ದಾರೆ.

ಶೀರ್ಷಿಕೆ ಮತ್ತು ಟೀಸರ್‌ ಮೂಲಕವೇ ನಿರೀಕ್ಷೆ ಹೆಚ್ಚಿಸಿದ್ದ ʼಸಪ್ತ ಸಾಗರದಾಚೆ ಎಲ್ಲೋʼ ಸಿನಿಮಾ ಮನು ಮತ್ತು ಸುರಭಿ ಎಂಬ ಇಬ್ಬರು ಪ್ರೇಮಿಗಳ ಪ್ರೀತಿಯ ಕಥೆಯ ಸುತ್ತ ಮೂಡಿಬಂದಿದೆ. ಚಿತ್ರದಲ್ಲಿ ರಕ್ಷಿತ್‌ ಶೆಟ್ಟಿಗೆ ನಾಯಕಿಯಾಗಿ ರುಕ್ಮಿಣಿ ವಸಂತ್‌ ಕಾಣಿಸಿಕೊಂಡಿದ್ದಾರೆ. ಯುವನಟಿ ಚೈತ್ರಾ ಆಚಾರ್‌ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ರೈಲು ದುರಂತಕ್ಕೆ ಸರ್ಕಾರ ಹೊಣೆಯಲ್ಲವೇ? ನಟ ಕಿಶೋರ್‌ ಪ್ರಶ್ನೆ

ಈ ಹಿಂದೆ ಹೇಮಂತ್‌ ರಾವ್‌ ಮತ್ತು ರಕ್ಷಿತ್‌ ಶೆಟ್ಟಿ ಕಾಂಬಿನೇಶನ್‌ನಲ್ಲಿ ಮೂಡಿಬಂದಿದ್ದ ʼಗೋಧಿ ಬಣ್ಣ ಸಾಧಾರಣ ಮೈಕಟ್ಟುʼ ಸಿನಿಮಾ ಭಾರೀ ಜನಪ್ರಿಯತೆ ಗಳಿಸಿತ್ತು. ʼಸಪ್ತ ಸಾಗರದಾಚೆ ಎಲ್ಲೋʼ ಸಿನಿಮಾದ ಮೂಲಕ ಮತ್ತೆ ಒಂದಾಗಿರುವ ಈ ಜೋಡಿ ಪ್ರೇಕ್ಷಕರಿಗೆ ಮೋಡಿ ಮಾಡಲು ಸಜ್ಜಾಗುತ್ತಿದೆ. ಈಗಾಗಲೇ ಸಿನಿಮಾದ ಎರಡೂ ಭಾಗಗಳ ಚಿತ್ರೀಕರಣ ಪೂರ್ಣಗೊಂಡಿದೆ ಎಂದು ರಕ್ಷಿತ್‌ ಶೆಟ್ಟಿ ಮಾಹಿತಿ ಹಂಚಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇನ್ಸೈಡ್ ಔಟ್ ಸಿನಿಮಾ ನೋಡಿ- ಒಳಗಿನ ಹೊರಗೊಂದು ವಿಸ್ಮಯ ಅರಿಯಿರಿ

ಪಿಕ್ಸರ್ ಅವರ 'ಇನ್ಸೈಡ್ ಔಟ್' (inside out) ಬಂದು ಒಂಬತ್ತು ವರ್ಷಗಳೇ...

ಈ ದಿನ ವಿಶೇಷ | ಭಾರತೀಯ ಚಿತ್ರರಂಗ ತನ್ನ ‘ಜಾತ್ಯತೀತ’ ಐಡೆಂಟಿಟಿಯನ್ನೇ ಮರೆಯುತ್ತಿದೆಯೇ?

ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಕೋಮು ವಿಭಜನೆಯ ಆತಂಕಕಾರಿ ಬೆಳವಣಿಗೆಗಳು ಹೆಚ್ಚಾಗುತ್ತಿವೆ....

ಮುಸ್ಲಿಮರನ್ನು ಉಗ್ರರು ಎಂಬಂತೆ ಬಿಂಬಿಸಲಾಗಿದೆ – ಸ್ನೇಹಿತರೂ ದೂರವಾಗುತ್ತಿದ್ದಾರೆ; ಬಾಲಿವುಡ್‌ ಗಾಯಕ ಅಲಿ ಬೇಸರ

ಪ್ರಸ್ತುತ ಜಗತ್ತಿನಲ್ಲಿ ಮುಸ್ಲಿಮನಾಗಿರುವುದು ಒಬ್ಬಂಟಿ ಭಾವ ಮೂಡಿಸಿತ್ತಿದೆ. ಮುಸ್ಲಿಮರನ್ನು ಉಗ್ರರೆಂದು ಬಿಂಬಿಸಲಾಗುತ್ತಿದೆ....

ಮಹಾರಾಜ್ | ಸಾಮಾಜಿಕ ಕ್ರಾಂತಿಯ ಕಥನವೂ, ಚಿತ್ರರಂಗದ ಕರ್ಮ ಸಿದ್ಧಾಂತದ ಗುರಾಣಿಯೂ

ಮಹಾರಾಜ್ ಸಿನಿಮಾ, "ಧರ್ಮವನ್ನು ಅಪವ್ಯಾಖ್ಯಾನ ಮಾಡಲಾಗಿದೆ. ಧರ್ಮಗ್ರಂಥಗಳಲ್ಲಿ ಇಲ್ಲದ ಅನಾಚಾರಗಳನ್ನೆಲ್ಲ ಜಾರಿಗೆ...