ಮಹದೇವ್ ಆನ್‌ಲೈನ್ ಬೆಟ್ಟಿಂಗ್ ಪ್ರಕರಣ: ಬಾಲಿವುಡ್ ನಟ ರಣಬೀರ್ ಕಪೂರ್‌ಗೆ ಇಡಿ ಸಮನ್ಸ್

Date:

ಮಹದೇವ್ ಆನ್‌ಲೈನ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ)ವು ಬಾಲಿವುಡ್ ನಟ ರಣಬೀರ್ ಕಪೂರ್ ಅವರಿಗೆ ಸಮನ್ಸ್ ಜಾರಿ ಮಾಡಿದೆ.

- Advertisement -

ಅಕ್ಟೋಬರ್ 6ರಂದು ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಕಚೇರಿಗೆ ವಿಚಾರಣೆಗೆ ಬರುವಂತೆ ನಟನಿಗೆ ಸಮನ್ಸ್ ನೀಡಲಾಗಿದೆ ಎಂದು ‘ದಿ ಫ್ರೀ ಪ್ರೆಸ್ ಜರ್ನಲ್’ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಬಾಲಿವುಡ್ ನಟ ರಣಬೀರ್ ಕಪೂರ್ ಆನ್‌ಲೈನ್ ಬೆಟ್ಟಿಂಗ್ ಅಪ್ಲಿಕೇಶನ್ ಅನ್ನು ಬಳಸುವಂತೆ ಪ್ರಚಾರ ಮಾಡುತ್ತಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಬರುವಂತೆ ಇ ಡಿ ಸೂಚಿಸಿದೆ ಎಂದು ವರದಿಯಾಗಿದೆ. ಇವರ ಜೊತೆಗೆ 13 ಮಂದಿ ಇತರ ನಟರಿಗೂ ಸಮನ್ಸ್ ಕಳುಹಿಸಿದೆ ಎಂದು ವರದಿಯಾಗಿದೆ.

ಮಹದೇವ್ ಆನ್‌ಲೈನ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ₹417 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಿಳಿಸಿದ್ದರು.

ದುಬೈನಿಂದ ಕಾರ್ಯಾಚರಣೆ ನಡೆಸುತ್ತಿದ್ದ ಸೌರಭ್ ಚಂದ್ರಕರ್ ಮತ್ತು ರವಿ ಉಪ್ಪಲ್ ಅವರು ಪ್ರಚಾರ ಮಾಡುತ್ತಿರುವ ಕಂಪನಿಯು ಆನ್‌ಲೈನ್ ಬುಕ್ ಬೆಟ್ಟಿಂಗ್ ಅಪ್ಲಿಕೇಶನ್ ಅನ್ನು ಹೊಸ ಬಳಕೆದಾರರನ್ನು ದಾಖಲಿಸಲು, ಬಳಕೆದಾರರ ಐಡಿಗಳನ್ನು ರಚಿಸಲು ಮತ್ತು ಬೇನಾಮಿ ಬ್ಯಾಂಕ್ ಖಾತೆಗಳ ಲೇಯರ್ಡ್ ವೆಬ್ ಮೂಲಕ ಅಕ್ರಮ ಹಣ ವ್ಯವಹಾರ ಮಾಡಲು ಬಳಸುತ್ತಿದೆ ಎಂದು ಅಧಿಕಾರಿಗಳು ಆರೋಪಿಸಿದ್ದರು.

ಇಡಿ ಇತ್ತೀಚೆಗೆ ಕೋಲ್ಕತ್ತಾ, ಭೋಪಾಲ್, ಮುಂಬೈ ಮುಂತಾದ ನಗರಗಳಲ್ಲಿ ಮಹದೇವ್ ಆ್ಯಪ್​​ನೊಂದಿಗೆ ಸಂಪರ್ಕ ಹೊಂದಿದ ಮನಿ ಲಾಂಡರಿಂಗ್ ನೆಟ್‌ವರ್ಕ್‌ಗಳ ವಿರುದ್ಧ ವ್ಯಾಪಕ ಶೋಧ ನಡೆಸಿ ದೊಡ್ಡ ಪ್ರಮಾಣದ ದೋಷಾರೋಪಣೆಯ ಸಾಕ್ಷ್ಯಗಳನ್ನು ಪತ್ತೆ ಹಚ್ಚಿದ್ದು, 417 ಕೋಟಿ ರೂಪಾಯಿ ಮೌಲ್ಯದ ಅಪರಾಧದ ಆದಾಯವನ್ನು ವಶಪಡಿಸಿಕೊಂಡಿದೆ ಎಂದು ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಟೋಕರೆಕ್ಟ್ ಎಡವಟ್ಟು: ‘ಆತ್ಮಹತ್ಯೆ’ ಪೋಸ್ಟ್ ಹಾಕಿ ಮುಂಬೈ ಪೊಲೀಸರ ಬೆವರಿಳಿಸಿದ ಮರಾಠಿ ನಟ!

ಮರಾಠಿ ಚಿತ್ರರಂಗದ ಜನಪ್ರಿಯ ನಟ ವಿಕಾಸ್ ಸಮುದ್ರೆ ಅವರು ಸಾಮಾಜಿಕ ಜಾಲತಾಣದಲ್ಲಿ...

ನಟ ಶಿವರಾಜ್‌ಕುಮಾರ್ ಜನ ಪರವಾಗಿ ನಿಲ್ಲಬೇಕು; ನಟ ಪ್ರಕಾಶ್‌ ರಾಜ್ ಕರೆ

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗ ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವು...

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್‌ಗೆ ತಾತ್ಕಾಲಿಕ ರಿಲೀಫ್, ‘ಮಾಫಿ ಸಾಕ್ಷಿ’ ಆದೇಶ ವಜಾ

ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ...

ದಸರಾ ಸಿನಿಮೋತ್ಸವ: ಸಂಸ್ಕೃತಿಯ ವಿಕೇಂದ್ರೀಕರಣ ಮತ್ತು ದೃಶ್ಯ ಪ್ರಜ್ಞೆಯ ಉಳಿವು

ಸಿನಿಮೋತ್ಸವಗಳನ್ನು ಲಾಭ-ನಷ್ಟದ ವ್ಯಾಪಾರಿ ಕನ್ನಡಕದಿಂದ ನೋಡುವುದು ಸರಿಯಲ್ಲ. ದಸರೆಯ ಸಾಂಸ್ಕೃತಿಕ ಘನತೆಯ...