ಸೆಟ್ಟೇರಿತು ರಶ್ಮಿಕಾ ನಟನೆಯ ಹೊಸ ತೆಲುಗು ಸಿನಿಮಾ

Date:

ಹೊಸ ಚಿತ್ರಕ್ಕಾಗಿ ಮತ್ತೆ ಒಂದಾಯ್ತು ʼಭೀಷ್ಮʼ ಚಿತ್ರತಂಡ

ನೂತನ ಚಿತ್ರಕ್ಕೆ ಶುಭ ಹಾರೈಸಿದ ಮೆಗಾ ಸ್ಟಾರ್‌ ಚಿರಂಜೀವಿ

ಕನ್ನಡದ ಸ್ಟಾರ್‌ ನಟಿ ರಶ್ಮಿಕಾ ಮಂದಣ್ಣ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬಾಲಿವುಡ್‌ನಲ್ಲೂ ಗುರುತಿಸಿಕೊಂಡಿರುವ ರಶ್ಮಿಕಾ, ಟಾಲಿವುಡ್‌ನಲ್ಲಿ ಬಹುಬೇಡಿಕೆಯ ನಟಿಯೂ ಹೌದು. ಸದ್ಯ ʼಪುಷ್ಪ-2ʼ ಸಿನಿಮಾದಲ್ಲಿ ತೊಡಗಿಕೊಂಡಿರುವ ಅವರು ತೆಲುಗಿನ ಸ್ಟಾರ್‌ ನಟ ನಿತಿನ್‌ ಜೊತೆಗೆ ಮತ್ತೊಮ್ಮೆ ತೆರೆ ಹಂಚಿಕೊಳ್ಳಲು ಸಜ್ಜಾಗಿದ್ದಾರೆ.

ನಿತಿನ್‌ ಮತ್ತು ರಶ್ಮಿಕಾ ನಟನೆಯ ಹೊಸ ಸಿನಿಮಾ ಇತ್ತೀಚೆಗೆ ಘೋಷಣೆಯಾಗಿದೆ. ಈ ತಾರಾ ಜೋಡಿ ಜೊತೆಯಾಗಿ ನಟಿಸಿದ್ದʼಭೀಷ್ಮʼ ಸಿನಿಮಾ 2020ರಲ್ಲಿ ತೆರೆಕಂಡು ಭರ್ಜರಿ ಯಶಸ್ಸು ಗಳಿಸಿತ್ತು. ʼಭೀಷ್ಮʼ ಯಶಸ್ಸಿನ ಬೆನ್ನಲ್ಲೇ ನಿರ್ದೇಶಕ ವೆಂಕಿ ಕುದುಮುಲ ಹೊಸ ಕತೆಯೊಂದನ್ನು ರಚಿಸಿದ್ದು, ಈ ಚಿತ್ರದಲ್ಲೂ ನಿತಿನ್‌ ಮತ್ತು ರಶ್ಮಿಕಾ ಅವರೇ ಮುಖ್ಯಭೂಮಿಕೆ ನಿಭಾಯಿಸುತ್ತಿದ್ದಾರೆ.

ಶುಕ್ರವಾರ ಹೈದರಾಬಾದ್‌ನಲ್ಲಿ ಚಿತ್ರದ ಮುಹೂರ್ತ ಸಮಾರಂಭ ಅದ್ದೂರಿಯಾಗಿ ಜರುಗಿದ್ದು, ಮೆಗಾ ಸ್ಟಾರ್ ಚಿರಂಜೀವಿ ಚಿತ್ರೀಕರಣಕ್ಕೆ ಚಾಲನೆ ನೀಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಇನ್ನೂ ಹೆಸರಿಡದ ಈ ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ಜಿ.ವಿ ಪ್ರಕಾಶ್‌ ಸಂಗೀತ ಸಂಯೋಜನೆ ಮಾಡಲಿದ್ದಾರೆ.

ನಿತಿನ್‌, ರಶ್ಮಿಕಾ ಮತ್ತು ಪ್ರಕಾಶ್‌ ಜೊತೆಯಾಗಿ ಕಾಣಿಸಿಕೊಂಡಿರುವ ವಿಡಿಯೋ ಬಿಡುಗಡೆ ಮಾಡುವ ಮೂಲಕ ನಿರ್ದೆಶಕ ವೆಂಕಿ ನೂತನ ಚಿತ್ರವನ್ನು ಘೋಷಿಸಿದ್ದಾರೆ. ಅಂದಾಜು 4 ನಿಮಿಷಗಳ ಈ ವಿಡಿಯೋದಲ್ಲಿ ರಶ್ಮಿಕಾರ ಹೇಳಿಕೆಗಳ ಸುತ್ತ ಹೇಗೆ ವಿವಾದ ಸೃಷ್ಟಿಯಾಗುತ್ತದೆ ಎಂಬ ಬಗ್ಗೆಯೂ ವ್ಯಂಗ್ಯಮಯ ಚರ್ಚೆ ನಡೆದಿದೆ. ʼಮೈತ್ರಿ ಮೂವಿ ಮೇಕರ್ಸ್‌ʼ ಬ್ಯಾನರ್‌ನಡಿಯಲ್ಲಿ ನವೀನ್ ಯರ್ನೇನಿ ಮತ್ತು ವೈ. ರವಿ ಶಂಕರ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ನೂತನ ಚಿತ್ರ ಭಿನ್ನ ಕಥಾಹಂದರವನ್ನು ಹೊಂದಿರುತ್ತದೆ ಎಂದು ಭರವಸೆ ವ್ಯಕ್ತ ಪಡಿಸಿರುವ ವೆಂಕಿ, ಸದ್ಯದಲ್ಲೇ ಚಿತ್ರದ ಶೀರ್ಷಿಕೆ ಮತ್ತು ಪಾತ್ರವರ್ಗವನ್ನು ಪರಿಚಯಿಸುವುದಾಗಿ ತಿಳಿಸಿದ್ದಾರೆ.

Sanket
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರಿನೊಳಗೆ ಶವವಾಗಿ ಪತ್ತೆಯಾದ ಮಲಯಾಳಂ ನಟ ವಿನೋದ್ ಥಾಮಸ್

ಮಲಯಾಳಂ ನಟ ವಿನೋದ್ ಥಾಮಸ್ ಕೇರಳದ ಕೊಟ್ಟಾಯಂನ ಪಂಪಾಡಿ ಬಳಿಯ ಹೋಟೆಲ್‌ನಲ್ಲಿ...

ತೆಲಂಗಾಣ ಚುನಾವಣಾ ಹೊಸ್ತಿಲಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿದ ವಿಜಯಶಾಂತಿ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಬಹುಭಾಷಾ ನಟಿ ಹಾಗೂ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ವಿಜಯಶಾಂತಿ ಅವರು...

ಮೊದಲು ಹೊಡೆದು ನಂತರ ಕ್ಷಮೆ ಕೇಳಿದ ನಟ ನಾನಾ ಪಾಟೇಕರ್: ವಿಡಿಯೋ ವೈರಲ್

ಸದಾ ಒಂದಿಲ್ಲೊಂದು ಸುದ್ದಿಯಲ್ಲಿರುವ ಬಾಲಿವುಡ್ ಹಿರಿಯ ನಟ-ನಿರ್ದೇಶಕ ನಾನಾ ಪಾಟೇಕರ್ ಇದೀಗ...

ಬಿಗ್‌ಬಾಸ್ ಶೋನಲ್ಲಿ ಭೋವಿ ಜನಾಂಗಕ್ಕೆ ಅವಹೇಳನ ಆರೋಪ: ಸ್ಪರ್ಧಿ ತನಿಷಾ ವಿರುದ್ಧ ಎಫ್‌ಐಆರ್

ಇತ್ತೀಚೆಗಷ್ಟೇ ಕನ್ನಡದ 'ಬಿಗ್‌ಬಾಸ್ ರಿಯಾಲಿಟಿ ಶೋ'ನಲ್ಲಿ ಸ್ಪರ್ಧಾಳುವಾಗಿದ್ದ ವರ್ತೂರು ಸಂತೋಷ್ ಹುಲಿ...