ವರದಕ್ಷಿಣೆ ಕಿರುಕುಳದ ದೂರು ದಾಖಲಿಸಿದ ಕಿರುತೆರೆ ನಟಿ ಅದಿತಿ ಶರ್ಮಾ

Date:

‘ಅಪೊಲಿನಾ – ಸಪ್ನೋ ಕಿ ಉಂಚಿ ಉಡಾನ್’, ‘ರಬ್ ಸೇ ಹೈ ದುವಾ’ ಮತ್ತು ‘ಕಲೀರೇನ್’ ಮುಂತಾದ ಹಿಂದಿ ಧಾರಾವಾಹಿಗಳ ಮೂಲಕ ಜನಪ್ರಿಯರಾಗಿರುವ ಕಿರುತೆರೆ ನಟಿ ಅದಿತಿ ಶರ್ಮಾ, ತಮ್ಮ ಪತಿ ಮತ್ತು ಅತ್ತೆಯ ಮನೆಯವರ ವಿರುದ್ಧ ಕೌಟುಂಬಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ.

- Advertisement -

ಅದಿತಿ ಅವರ ದೂರಿನ ಮೇರೆಗೆ ಜುಲೈ 31ರಂದು ಮುಂಬೈನ ಗೋರೆಗಾಂವ್ ಪೊಲೀಸ್ ಠಾಣೆಯಲ್ಲಿ ಪತಿ ಅಭಿನೀತ್ ವಿದ್ಯಾನಂದ್ ಕೌಶಿಕ್, ಅತ್ತೆ ಉರ್ಮಿಳಾ ಕೌಶಿಕ್ (65) ಮತ್ತು ನಾದಿನಿ ಕೀರ್ತಿ ಕೌಶಿಕ್ (29) ವಿರುದ್ಧ ಎಫ್‌ಐಆರ್ ದಾಖಲಾಗಿದೆ. ದೈಹಿಕ ಹಾಗೂ ಮಾನಸಿಕ ಕಿರುಕುಳ, ಹಲ್ಲೆ, ನಿಂದನೆ, ವರದಕ್ಷಿಣೆ/ಸ್ತ್ರೀಧನದ ದುರ್ಬಳಕೆಯಂತಹ ಗಂಭೀರ ಆರೋಪಗಳನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

ಪೊಲೀಸರಿಗೆ ನೀಡಿರುವ ಹೇಳಿಕೆಯ ಪ್ರಕಾರ, 2021ರ ಜೂನ್‌ನಲ್ಲಿ ಆನ್‌ಲೈನ್ ನಟನಾ ತರಗತಿಯೊಂದರಲ್ಲಿ ಅಭಿನೀತ್ ಅವರನ್ನು ಅದಿತಿ ಭೇಟಿಯಾಗಿದ್ದರು. ನಂತರ ಇಬ್ಬರ ನಡುವೆ ಸ್ನೇಹ ಬೆಳೆದು, ಎರಡೂ ಕುಟುಂಬಗಳ ಒಪ್ಪಿಗೆಯ ಮೇರೆಗೆ 2024ರ ಸೆಪ್ಟೆಂಬರ್‌ನಿಂದ ಗುರುಗ್ರಾಮದ ಅಪಾರ್ಟ್‌ಮೆಂಟ್‌ವೊಂದರಲ್ಲಿ ಒಟ್ಟಿಗೆ ವಾಸಿಸಲು (ಲಿವ್-ಇನ್) ಆರಂಭಿಸಿದ್ದರು. ಬಳಿಕ 2024ರ ನವೆಂಬರ್ 12ರಂದು ವಿವಾಹವಾಗಿದ್ದರು.

ಆದರೆ, ಮದುವೆಯಾದ ಕೆಲವೇ ದಿನಗಳಲ್ಲಿ ಪತಿಯ ವರ್ತನೆ ಬದಲಾಯಿತು ಎಂದು ಅದಿತಿ ಆರೋಪಿಸಿದ್ದಾರೆ. ಬಟ್ಟೆ ಧರಿಸುವ ವಿಚಾರ ಸೇರಿದಂತೆ ಸಣ್ಣಪುಟ್ಟ ವಿಚಾರಗಳಿಗೂ ಜಗಳವಾಡಲು ಶುರು ಮಾಡಿದರು. ಅಲ್ಲದೆ, ಮನೆ ಖರ್ಚಿಗೆ ಹಣ ನೀಡುವ ಬದಲು, ಅದಿತಿಯವರಿಂದಲೇ ನಿರಂತರವಾಗಿ ಹಣ ಕೀಳುತ್ತಿದ್ದರು ಎಂದು ದೂರಲಾಗಿದೆ.

2025ರ ಜನವರಿ 1ರಂದು ಕಾಫಿ ಮಾಡುವ ವಿಚಾರಕ್ಕೆ ಶುರುವಾದ ಜಗಳ ತಾರಕಕ್ಕೇರಿತು. ಆ ಬಳಿಕ ಅದಿತಿಯವರ ಬಗ್ಗೆ ಅನುಮಾನ ಪಡಲು ಶುರು ಮಾಡಿದ ಪತಿ, ಬೇರೊಬ್ಬರೊಂದಿಗೆ ಸಂಬಂಧವಿದೆ ಎಂದು ಆರೋಪಿಸಿ, ಪದೇ ಪದೇ ಮೊಬೈಲ್ ಫೋನ್ ತಪಾಸಣೆ ಮಾಡುತ್ತಿದ್ದರು. ಅಂತಿಮವಾಗಿ ಬೇರೊಂದು ಕೋಣೆಯಲ್ಲಿ ಮಲಗಲು ಆರಂಭಿಸಿದರು ಹಾಗೂ ಪೋಷಕರೊಂದಿಗೆ ಮಾತನಾಡದಂತೆಯೂ ತನಗೆ ನಿರ್ಬಂಧ ವಿಧಿಸಿದ್ದರು ಎಂದು ದೂರಿನಲ್ಲಿ ವಿವರಿಸಲಾಗಿದೆ.

ಮದುವೆಯ ಸಂದರ್ಭದಲ್ಲಿ ತನಗೆ ನೀಡಿದ್ದ ಚಿನ್ನದ ಸರ, ಉಂಗುರಗಳು, ವಜ್ರದ ಉಂಗುರ, ಮಾಂಗಲ್ಯ ಮತ್ತು ಬಳೆಗಳು ಸೇರಿದಂತೆ ತಮ್ಮ ‘ಸ್ತ್ರೀಧನ’ವನ್ನು (ವಧುವಿನ ಆಭರಣಗಳು) ಅತ್ತೆ ತಮ್ಮ ಬಳಿಯೇ ಇಟ್ಟುಕೊಂಡಿದ್ದು, ಎಷ್ಟೇ ಬಾರಿ ಕೇಳಿದರೂ ವಾಪಸ್ ನೀಡಿಲ್ಲ ಎಂದು ಅದಿತಿ ದೂರಿದ್ದಾರೆ. ಜಗಳ ಬಿಡಿಸುವ ನೆಪದಲ್ಲಿ ಅತ್ತೆ ಮತ್ತು ನಾದಿನಿ ಕೂಡ ಪತಿಯ ಪರವಾಗಿಯೇ ನಿಂತು ತನಗೆ ಕಿರುಕುಳ ನೀಡುತ್ತಿದ್ದರು ಎಂದು ಅವರು ಆರೋಪಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಗುರುಗ್ರಾಮಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಪಿಎಫ್‌ಒ ವೇತನ ಮಿತಿ 25,000 ರೂಪಾಯಿಗೆ ಏರಿಕೆ: ಕೇಂದ್ರ ಸಂಪುಟ ಒಪ್ಪಿಗೆ

ಸಂಘಟಿತ ವಲಯದ ಲಕ್ಷಾಂತರ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರವು ಭಾರಿ ಸಿಹಿ ಸುದ್ದಿ...

ಸಿಜೆಪಿಯಿಂದ ‘ಆದಿವಾಸಿ ಸ್ಕೂಲ್ ಠೀಕ್ ಕರೋ’ ಅಭಿಯಾನ: ಸೆ.17ರಿಂದ ಶಾಲೆಗಳ ಪರಿಶೀಲನೆ

ದೇಶದ ಅರಣ್ಯ ಮತ್ತು ಮೂಲನಿವಾಸಿ ಪ್ರದೇಶಗಳ ಶಾಲೆಗಳಲ್ಲಿ ಸರ್ಕಾರಗಳ ನಿರ್ಲಕ್ಷ್ಯ ಮತ್ತು...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ...