‘ಚೆನ್ನೈ ಎಕ್ಸ್‌ಪ್ರೆಸ್‌’ ನೆನಪಿಸುವ ʼಕಿಸಿ ಕಾ ಭಾಯ್‌ ಕಿಸಿ ಕಿ ಜಾನ್‌ʼ ಟ್ರೈಲರ್‌

Date:

Advertisements

ಆ್ಯಕ್ಷನ್‌‌ ಹೀರೋ ಪಾತ್ರದಲ್ಲಿ ಮಿಂಚಿದ ಸಲ್ಮಾನ್ ಖಾನ್

ʼಕಿಸಿ ಕಾ ಭಾಯ್‌ ಕಿಸಿ ಕಿ ಜಾನ್‌ʼ ಸಿನಿಮಾ ಏಪ್ರಿಲ್ 21ಕ್ಕೆ ತೆರೆಗೆ

ಬಾಲಿವುಡ್‌ನ ಸ್ಟಾರ್‌ ನಟ ಸಲ್ಮಾನ್‌ ಖಾನ್‌ ಅಭಿನಯದ ʼಕಿಸಿ ಕಾ ಭಾಯ್‌ ಕಿಸಿ ಕಿ ಜಾನ್‌ʼ ಸಿನಿಮಾದ ಬಹುನಿರೀಕ್ಷಿತ ಟ್ರೈಲರ್‌ ಸೋಮವಾರ ಬಿಡುಗಡೆಯಾಗಿದ್ದು, ಎಂದಿನಂತೆ ಆ್ಯಕ್ಷನ್ ಹೀರೋ ಪಾತ್ರದಲ್ಲಿ ಸಲ್ಮಾನ್‌ ಖಾನ್‌ ಗಮನ ಸೆಳೆಯುತ್ತಿದ್ದಾರೆ. ಈ ಚಿತ್ರದ ಟ್ರೈಲರ್‌ ಶಾರುಖ್‌ ಖಾನ್‌ ಮುಖ್ಯಭೂಮಿಕೆಯಲ್ಲಿ ತೆರೆಕಂಡಿದ್ದ ʼಚೆನ್ನೈ ಎಕ್ಸ್‌ಪ್ರೆಸ್‌ʼ ಚಿತ್ರವನ್ನು ನೆನಪಿಸುವಂತಿವೆ.

Advertisements

ಪ್ರೇಮ ಕಥೆ ಮತ್ತು ಕೌಟುಂಬಿಕ ಕಥಾಹಂದರದ ಸುತ್ತ ಚಿತ್ರದ ಕಥೆ ಮೂಡಿ ಬಂದಿದೆ ಎಂಬುದನ್ನು ಎರಡು ನಿಮಿಷಗಳ ಟ್ರೈಲರ್‌ನಲ್ಲಿ ಸೂಚ್ಯವಾಗಿ ತೋರಿಸಲಾಗಿದೆ. ವೈರಿಗಳಿಂದ ನಾಯಕಿಯ ಕುಟುಂಬವನ್ನು ರಕ್ಷಿಸಲು ಹೋರಾಡುವ ಭಾಯ್‌ಜಾನ್‌ ಆಗಿ ಸಲ್ಮಾನ್‌ ಖಾನ್‌ ಕಾಣಿಸಿಕೊಂಡಿದ್ದಾರೆ. ಟ್ರೈಲರ್‌ನಲ್ಲಿ ಕಂಡುಬರುವ ಆ್ಯಕ್ಷನ್ ದೃಶ್ಯಗಳು ಚಿತ್ರದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿವೆ.

2013ರಲ್ಲಿ ಶಾರುಖ್‌ ಖಾನ್‌ ಮತ್ತು ದೀಪಿಕಾ ಪಡುಕೋಣೆ ಮುಖ್ಯಭೂಮಿಕೆಯಲ್ಲಿ ತೆರೆಗೆ ಬಂದಿದ್ದ ʼಚೆನ್ನೈ ಎಕ್ಸ್‌ಪ್ರೆಸ್‌ʼ ಚಿತ್ರದಲ್ಲಿ ತಮಿಳುನಾಡಿನ ಸಂಪ್ರದಾಯ, ಆಚರಣೆಗಳನ್ನು ಒಳಗೊಂಡಿತ್ತು. ಅದೇ ರೀತಿ ʼಕಿಸಿ ಕಾ ಭಾಯ್‌ ಕಿಸಿ ಕಿ ಜಾನ್‌ʼ ಚಿತ್ರದಲ್ಲಿ ಆಂಧ್ರಪ್ರದೇಶ ಮತ್ತು ತೆಲಂಗಾಣದ ಸಂಪ್ರದಾಯ, ಆಚರಣೆಗಳಿಗೆ ಹೆಚ್ಚು ಒತ್ತು ನೀಡಲಾಗಿದೆ. ಅಷ್ಟು ಮಾತ್ರವಲ್ಲ, ಸಲ್ಮಾನ್‌ ಹೊರತು ಪಡಿಸಿ, ಟ್ರೈಲರ್‌ನಲ್ಲಿ ಕಾಣಸಿಗುವ ಬಹುತೇಕ ಕಲಾವಿದರು ದಕ್ಷಿಣ ಸಿನಿರಂಗದವರು ಎಂಬುದು ಗಮನಾರ್ಹ. ಕನ್ನಡತಿ ಪೂಜಾ ಹೆಗ್ಡೆ ನಾಯಕಿಯ ಪಾತ್ರದಲ್ಲಿ ಮಿಂಚಿದ್ದು, ವಿಕ್ಟರಿ ವೆಂಕಟೇಶ್‌, ಜಗಪತಿ ಬಾಬು ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಫರ್ಹಾದ್‌ ಸಮ್ಜಿ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರಕ್ಕೆ ಸಲ್ಮಾನ್‌ ಖಾನ್‌ ಅವರ ತಾಯಿ ಸಲ್ಮಾ ಖಾನ್‌ ಬಂಡವಾಳ ಹೂಡಿದ್ದಾರೆ. ಕನ್ನಡಿಗ, ‘ಕೆಜಿಎಫ್‌’ ಖ್ಯಾತಿಯ ರವಿ ಬಸ್ರೂರ್‌ ಅವರ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ. ಇದೇ ಏಪ್ರಿಲ್ 21ರಂದು ಚಿತ್ರ ತೆರೆಗೆ ಬರಲಿದೆ.

c6d189e709d010a95cabcbe8c5246c21
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

Download Eedina App Android / iOS

X