ಚೆಕ್​ ಬೌನ್ಸ್​ ಪ್ರಕರಣ | ನಟ ನೀನಾಸಂ ಅಶ್ವಥ್ ಬಂಧನ; ಜಾಮೀನಿನ ಮೇಲೆ ಬಿಡುಗಡೆ

Date:

Advertisements

ಚೆಕ್‌ಬೌನ್ಸ್‌ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೆಜಿಎಫ್‌, ಮುಂಗಾರು ಮಳೆ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದ ಸ್ಯಾಂಡಲ್‌ವುಡ್‌ ನಟ ನೀನಾಸಂ ಅಶ್ವಥ್ ಅವರನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ.

ನ್ಯಾಯಾಧೀಶರ​ ಎದುರು ಅಶ್ವಥ್‌ ಅವರು ತಪ್ಪು ಒಪ್ಪಿಕೊಂಡು ಶೇ. 25ರಷ್ಟು ಹಣವನ್ನು ಪಾವತಿ ಮಾಡಿದ್ದಾರೆ. ಆದ ಕಾರಣ ನೀನಾಸಂ ಅಶ್ವತ್ಥ್​ ಅವರಿಗೆ ನ್ಯಾಯಾಲಯವು ಜಾಮೀನು ನೀಡಿದೆ. ಇನ್ನುಳಿದ ಹಣವನ್ನು ಪಾವತಿಸಲು ಅವರು ಸಮಯಾವಕಾಶ ಕೋರಿದ್ದಾರೆ.

ಹಾಸನ ಮೂಲದ ರೋಹಿತ್ ಎಂಬುವರಿಂದ ಹಸುಗಳನ್ನು ಖರೀದಿ ಮಾಡಿ ಅವರಿಗೆ 1.50 ಲಕ್ಷ ರೂ.ಗಳ ಚೆಕ್‌ಅನ್ನು ನೀನಾಸಂ ಅಶ್ವಥ್ ನೀಡಿದ್ದರು. ನಂತರ ರೋಹಿತ್ ಆ ಚೆಕ್‌ ಅನ್ನು ಬ್ಯಾಂಕ್‌ಗೆ ವರ್ಗಾಯಿಸಿದಾಗ ಬೌನ್ಸ್ ಆಗಿರುವುದು ಬೆಳಕಿಗೆ ಬಂದಿದೆ.

Advertisements

ಈ ಸುದ್ದಿ ಓದಿದ್ದೀರಾ? ಉತ್ತರ ಪ್ರದೇಶ | ವಿದ್ಯುತ್‌ ವೈರಿಂಗ್‌ ಪರಿಶೀಲಿಸಿದ್ದಕ್ಕೆ ದಲಿತ ವ್ಯಕ್ತಿಗೆ ಚಪ್ಪಲಿ ನೆಕ್ಕಿಸಿದ ಲೈನ್‌ಮೆನ್

ಈ ಸಂಬಂಧ ಹಾಸನದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದ ರೋಹಿತ್ ಅವರು ನ್ಯಾಯಾಲಯದಿಂದ ನಾಲ್ಕು ಬಾರಿ ಬಂಧನ ವಾರೆಂಟ್ ಹೊರಡಿಸಿದ್ದರೂ ಕೋರ್ಟಿಗೆ ಅಶ್ವಥ್‌ ಹಾಜರಾಗಿರಲಿಲ್ಲ.

ಐದನೆ ಬಾರಿ ಬಂಧನ ವಾರೆಂಟ್ ಜಾರಿಗೊಳಿಸಿದ ಹಿನ್ನಲೆಯಲ್ಲಿ ಹಾಸನ ಬಡಾವಣೆ ಠಾಣೆ ಪೊಲೀಸರು ಅಶ್ವಥ್ ಅವರನ್ನು ಬಂಧಿಸಿ ಶನಿವಾರ ರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಹಸುಗಳ ಖರೀದಿ ಬಗ್ಗೆ ನ್ಯಾಯಾಧೀಶರ ಮುಂದೆ ತಪ್ಪೊಪ್ಪಿಕೊಂಡು ಶೇ.25ರಷ್ಟು ಹಣ ಪಾವತಿಸುವಂತೆ ನ್ಯಾಯಾಲಯ ಸೂಚನೆ ನೀಡಿತ್ತು. ಅದರಂತೆ ಅಶ್ವತ್ಥ್ ಅವರು ಸ್ಥಳದಲ್ಲಿಯೇ ಹಣ ಪಾವತಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಶ್ವಥ್​ ಅವರಿಗೆ ನ್ಯಾಯಾಲಯವು ಜಾಮೀನು ನೀಡಿದೆ. ಉಳಿದ ಹಣವನ್ನು ನೀಡಲು ಸಮಯಾವಕಾಶವನ್ನು ಪಡೆದುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X