ʼಕಾಟೇರಾʼ ಚಿತ್ರದ ಮೂಲಕ ತೆರೆಗೆ ಮರಳಲು ಸಜ್ಜಾದ ಕುಮಾರ್‌ ಗೋವಿಂದ್‌

Date:

Advertisements

60ನೇ ವಸಂತಕ್ಕೆ ಕಾಲಿಟ್ಟ ಹಿರಿಯ ನಟ

ಹುಟ್ಟು ಹಬ್ಬಕ್ಕೆ ಫಸ್ಟ್‌ಲುಕ್‌ ಪೋಸ್ಟರ್‌ ಬಿಡುಗಡೆ

ಸ್ಯಾಂಡಲ್‌ವುಡ್‌ನ ಹಿರಿಯ ನಟ, ನಿರ್ಮಾಪಕ ಕುಮಾರ್‌ ಗೋವಿಂದ್‌ ಬುಧವಾರ 60ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹಲವು ವರ್ಷಗಳಿಂದ ನಟನೆಯಿಂದ ಅಂತರ ಕಾಯ್ದುಕೊಂಡಿರುವ ಅವರು ಇದೀಗ ಮತ್ತೆ ಚಿತ್ರರಂಗದತ್ತ ಮುಖ ಮಾಡಿದ್ದು, ದರ್ಶನ್‌ ಮುಖ್ಯಭೂಮಿಕೆಯ ʼಕಾಟೇರಾʼ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹುಟ್ಟು ಹಬ್ಬದ ಪ್ರಯುಕ್ತ ಕುಮಾರ್‌ ಗೋವಿಂದ್‌ ಅವರ ಪಾತ್ರದ ಫಸ್ಟ್‌ಲುಕ್‌ ಪೋಸ್ಟರ್‌ ಬಿಡುಗಡೆ ಮಾಡಿರುವ ಚಿತ್ರತಂಡ ಹಿರಿಯ ನಟನಿಗೆ ಶುಭಾಶಯ ಕೋರಿದೆ.

Advertisements

ಟ್ವಿಟರ್‌ನಲ್ಲಿ ಕುಮಾರ್‌ ಗೋವಿಂದ್‌ ಅವರ ಫಸ್ಟ್‌ಲುಕ್‌ ಪೋಸ್ಟರ್‌ ಹಂಚಿಕೊಂಡಿರುವ ʼಕಾಟೇರಾʼ ಚಿತ್ರದ ನಿರ್ದೇಶಕ ತರುಣ್‌ ಸುಧೀರ್‌, ಹುಟ್ಟು ಶುಭಾಶಯ ಕೋರುವ ಜೊತೆಗೆ ಚಿತ್ರದಲ್ಲಿ ಕುಮಾರ್‌ ಗೋವಿಂದ್‌ ಹಳ್ಳಿಗ ಮಹದೇವಣ್ಣನ ಪಾತ್ರದಲ್ಲಿ ನಟಿಸುತ್ತಿರುವುದಾಗಿ ತಿಳಿಸಿದ್ದಾರೆ.

70ರ ದಶಕದ ಹಳ್ಳಿ ಸೊಗಡಿನ ಕಥಾಹಂದರವುಳ್ಳ ʼಕಾಟೇರಾʼ ಚಿತ್ರದಲ್ಲಿ ದರ್ಶನ್‌ ರೈತನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಿರಿಯ ನಟಿ ಮಾಲಾಶ್ರೀ ಅವರ ಪುತ್ರಿ ರಾಧನಾ ಈ ಚಿತ್ರದ ಮೂಲಕ ನಾಯಕ ನಟಿಯಾಗಿ ಚಿತ್ರರಂಗ ಪ್ರವೇಶಿಸುತ್ತಿರುವುದು ವಿಶೇಷ.

ಇತ್ತೀಚೆಗೆ ರೈತ ನಾಯಕ, ದಿವಂಗತ ಪುಟ್ಟಣ್ಣಯ್ಯನವರ ಮಗನ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ʼಕಾಟೇರಾʼ ಚಿತ್ರದ ಕಥಾಹಂದರದ ಬಗ್ಗೆ ಸುಳಿವು ನೀಡಿದ್ದ ದರ್ಶನ್‌, “70ರ ದಶಕದಲ್ಲಿ ಜಾರಿಯಾದ ಉಳುವವನೇ ಭೂಮಿಯ ಒಡೆಯ ಎಂಬ ಕಾಯ್ದೆ, ಆ ಕ್ಷಣದಿಂದ ಚುರುಕುಗೊಂಡ ರೈತ ಹೋರಾಟದ ಸುತ್ತ ನಾವು ಸಿನಿಮಾ ಮಾಡುತ್ತಿದ್ದೇವೆ” ಎಂದು ಮಾಹಿತಿ ಹಂಚಿಕೊಂಡಿದ್ದರು.

ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ರಾಕ್‌ಲೈನ್‌ ವೆಂಕಟೇಶ್‌ ಬಂಡವಾಳ ಹೂಡಿದ್ದು, ವಿ ಹರಿಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದಾರೆ. ಸದ್ಯ ಚಿತ್ರದ ಮೊದಲ ಹಂತದ ಶೂಟಿಂಗ್‌ ಚಾಲ್ತಿಯಲ್ಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

Download Eedina App Android / iOS

X