ದ್ವಾರಕೀಶ್ ಇನ್ನಿಲ್ಲ | ವದಂತಿ ಹಬ್ಬಿಸಬೇಡಿ ಎಂದು ಸ್ಪಷ್ಟನೆ ನೀಡಿದ ‘ಪ್ರಚಂಡ ಕುಳ್ಳ’

Date:

ಚಂದನವನದ ಪ್ರಚಂಡ ಕುಳ್ಳ ದ್ವಾರಕೀಶ್ ನಿಧನ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿರುವವರಿಗೆ ಸ್ವತಃ ತಾವೇ ಸ್ಪಷ್ಟನೇ ನೀಡಿದ್ದಾರೆ. “ನಿಮ್ಮೆಲ್ಲರ ಆಶೀರ್ವಾದ ಇರೋವರೆಗೂ ನನಗೆ ಏನು ಆಗಲ್ಲ” ಎಂದು ಹೇಳಿದ್ದಾರೆ.

ದ್ವಾರಕೀಶ್‌ ಅವರು ನಟ, ನಿರ್ದೇಶಕ, ನಿರ್ಮಾಪಕನಾಗಿ ಸಿನಿಮಾರಂಗದಲ್ಲಿ ಗಟ್ಟಿ ನೆಲೆ ಗಿಟ್ಟಿಸಿಕೊಂಡವರು. ಕೆಲ ತಿಂಗಳ ಹಿಂದೆ ಆರೋಗ್ಯದಲ್ಲಿ ಏರುಪೇರಾಗಿತ್ತು. ಅದಕ್ಕೆ ಸೂಕ್ತ ಚಿಕಿತ್ಸೆ ಕೂಡ ಪಡೆದುಕೊಂಡಿದ್ದರು. ಇದೀಗ ಅವರು ಆರಾಮಾಗಿದ್ದಾರೆ. ದ್ವಾರಕೀಶ್ ಆರೋಗ್ಯದ ಬಗ್ಗೆ ಭಾನುವಾರ (ಏ.30) ಬೆಳಿಗ್ಗೆಯಿಂದ ಇಲ್ಲಸಲ್ಲದ ಊಹಾಪೋಹಗಳು ಹಬ್ಬಿತ್ತು. ಈಗ ಅವರೇ ಸ್ವತಃ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಖುದ್ದಾಗಿ ಮಾಧ್ಯಮಗಳ ಮುಂದೆ ಬಂದು ಮಾತನಾಡಿರುವ ದ್ವಾರಕೀಶ್‌, “ನೀವು ಸಾಕಿದ ದ್ವಾರಕೀಶ್, ಚೆನ್ನಾಗಿದ್ದೀನಿ. ಗಟ್ಟಿಮುಟ್ಟಾಗಿದ್ದೀನಿ. ಯಾವುದೇ ಚಿಂತೆ ಇಲ್ಲ. ನಿಮ್ಮೆಲ್ಲರ ಆಶೀರ್ವಾದ ಇರೋವರೆಗೂ ನನಗೆ ಏನು ಆಗಲ್ಲ” ಎಂದು ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ. 

2019ರಲ್ಲಿ ಕೂಡ ದ್ವಾರಕೀಶ್ ಅವರು ಆರೋಗ್ಯವಾಗಿಲ್ಲ ಎಂದು ವದಂತಿ ಹಬ್ಬಿತ್ತು. ಆಗಲೂ ಅವರು ವಿಡಿಯೋ ಹಂಚಿಕೊಂಡು ಸ್ಪಷ್ಟನೆ ನೀಡಿದ್ದರು.

ದ್ವಾರಕೀಶ್

ಕನ್ನಡ ಚಿತ್ರರಂಗಕ್ಕೆ ದ್ವಾರಕೀಶ್​ ಅವರು ನೀಡಿದ ಕೊಡುಗೆ ಅಪಾರ. ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಅವರು ತಮ್ಮ ಛಾಪು ಮೂಡಿಸಿದ್ದಾರೆ. 1966ರಿಂದ ಈ ತನಕ ಅವರು ಬಣ್ಣದ ಲೋಕದಲ್ಲಿ ಸಕ್ರಿಯರಾಗಿದ್ದಾರೆ. ‘ದ್ವಾರಕೀಶ್​ ಚಿತ್ರ’ ನಿರ್ಮಾಣ ಸಂಸ್ಥೆ ಮೂಲಕ ಅವರು ಹಲವು ಸಿನಿಮಾಗಳನ್ನು ನಿರ್ಮಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಕಟ್ಟುಪಾಡು ದಾಟಿ ಹೃದಯ ಸ್ಪರ್ಶಿಸುವ ಬ್ರಹ್ಮಚರ್ಯದ ಗೋಳಿನ ಕತೆ ‘ರಾಘವೇಂದ್ರ ಸ್ಟೋರ್ಸ್‌

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನ ಪಾಪ್‌ಕಾರ್ನ್ ಬೆಲೆಗೆ ಹೆದರಿ ಮಲ್ಟಿಫ್ಲೆಕ್ಸ್, ಥಿಯೇಟರ್‌ಗಳಿಗೆ ಬರುತ್ತಿಲ್ಲವೇ?

ತೆಲುಗು ಸಿನಿಮಾ ನಿರ್ದೇಶಕ ತೇಜಾ ಇತ್ತೀಚೆಗೆ ಯೂ ಟ್ಯೂಬ್ ಸಂದರ್ಶನವೊಂದರಲ್ಲಿ ಒಂದು...

ದಸರಾ | ನನಗೆ ಸಿಕ್ಕಿದ್ದು ಸಾಮಾಜಿಕ ಕಲಾ ನ್ಯಾಯ: ಹಂಸಲೇಖ

ಮೈಸೂರು ದಸರಾ ಉದ್ಘಾಟನೆಗೆ ಈ ಬಾರಿ ನನ್ನನ್ನು ಸರ್ಕಾರ ಆಯ್ಕೆ ಮಾಡಿದೆ....

ಶಾರುಖ್ ಖಾನ್‌ ನಟಿಸಿದ ‘ಜವಾನ್’ ಸಿನಿಮಾ ಯಾಕೆ ರಾಜಕೀಯವಾಗಿ ಚರ್ಚೆಯಲ್ಲಿದೆ?

ವಿಶ್ವದಾದ್ಯಂತ ಮೊದಲ ದಿನ 129.6 ಕೋಟಿ ಗಳಿಸಿದ ಶಾರೂಖ್ ಖಾನ್ ನಟನೆಯ...