ʼಪಠಾಣ್‌ʼ ಚಿತ್ರಕ್ಕಾಗಿ ₹200 ಕೋಟಿ ಸಂಭಾವನೆ ಪಡೆದ ಶಾರುಖ್‌ ಖಾನ್‌

Date:

Advertisements

ಗಲ್ಲಾ ಪೆಟ್ಟಿಗೆಯಲ್ಲಿ 1,057 ಕೋಟಿ ರೂಪಾಯಿ ಕಲೆ ಹಾಕಿರುವ ʼಪಠಾಣ್‌ʼ

ಅಂದಾಜು 270 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಚಿತ್ರ

ಬಾಲಿವುಡ್‌ನ ಸ್ಟಾರ್‌ ನಟ ಶಾರುಖ್‌ ಖಾನ್‌ ಅಭಿನಯದ ʼಪಠಾಣ್‌ʼ ಸಿನಿಮಾ ಚಿತ್ರಮಂದಿರಗಳಲ್ಲಿ ಭರ್ಜರಿ ಯಶಸ್ಸು ಗಳಿಸಿದೆ. ಇತ್ತೀಚೆಗೆ ಒಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರ ನೆಟ್ಟಿಗರ ಮೆಚ್ಚುಗೆಗೂ ಪಾತ್ರವಾಗಿತ್ತು. ಗಲ್ಲಾ ಪೆಟ್ಟಿಗೆಯಲ್ಲಿ ದಾಖಲೆಯ ಗಳಿಕೆ ಮಾಡಿರುವ ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ನಟಿಸಲು ಶಾರುಖ್‌ ಖಾನ್‌ ಬರೋಬ್ಬರಿ 200 ಕೋಟಿ ರೂಪಾಯಿ ಪಡೆದಿದ್ದಾರೆ ಎಂದು ವರದಿಯಾಗಿದೆ.

Advertisements

ಪ್ಯಾನ್‌ ಇಂಡಿಯಾ ಮಾದರಿಯಲ್ಲಿ ತೆರೆಕಂಡಿದ್ದ ʼಪಠಾಣ್‌ʼ ಸಿನಿಮಾ ಭಾರತದಲ್ಲಿ 657 ಕೋಟಿ ರೂಪಾಯಿಗಳನ್ನು ಗಳಿಸಿದರೆ, ವಿದೇಶಗಳಲ್ಲಿ 392 ಕೋಟಿ ರೂಪಾಯಿಗೂ ಅಧಿಕ ಮೊತ್ತವನ್ನು ಕಲೆ ಹಾಕಿತ್ತು. ಒಟ್ಟಾರೆಯಾಗಿ ಜಗತ್ತಿನಾದ್ಯಂತ ಚಿತ್ರ 1,050 ಕೋಟಿ ರೂಪಾಯಿಗೂ ಹೆಚ್ಚು ಗಳಿಕೆ ಮಾಡಿತ್ತು.

ʼಪಠಾಣ್‌ʼ ಸಿನಿಮಾ ಗಲ್ಲಾ ಪೆಟ್ಟಿಗೆಯಲ್ಲಿ ಸಾವಿರ ಕೋಟಿಗೂ ಅಧಿಕ ಮೊತ್ತವನ್ನು ಕಲೆ ಹಾಕಿದೆಯಾದರೂ, ಚಿತ್ರಕ್ಕೆ ಬಂಡವಾಳ ಹೂಡಿದ್ದ ʼಯಶ್‌ ರಾಜ್‌ ಫಿಲಂಸ್‌ʼ ಸಂಸ್ಥೆಗೆ ಕೇವಲ 333 ಕೋಟಿ ರೂಪಾಯಿಗಳಷ್ಟು ಲಾಭವಾಗಿದೆ. ಸಾವಿರ ಕೋಟಿಯಲ್ಲಿ 400 ಕೋಟಿಗೂ ಹೆಚ್ಚು ಮೊತ್ತ ವಿತರಕರ ಪಾಲಾದರೆ, ನಿರ್ಮಾಣ ವೆಚ್ಚ ಅಂದಾಜು 270 ಕೋಟಿ ರೂಪಾಯಿ ಎನ್ನಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ಸುದೀಪ್‌ ನಟನೆಯ ಜಾಹೀರಾತುಗಳಿಗೆ ತಡೆ ನೀಡಿ: ಚುನಾವಣಾ ಆಯೋಗಕ್ಕೆ ಸುರ್ಜೇವಾಲ ಪತ್ರ

333 ಕೋಟಿ ರೂಪಾಯಿ ಲಾಭಾಂಶದಲ್ಲಿ ಶಾರುಖ್‌ ಖಾನ್‌ ಬರೋಬ್ಬರಿ 200 ಕೋಟಿ ರೂಪಾಯಿ ಮೊತ್ತವನ್ನು ಸಂಭಾವನೆ ರೂಪದಲ್ಲಿ ಪಡೆದಿದ್ದಾರೆ. ಶಾರುಖ್‌, ‘ಪಠಾಣ್‌’ ಚಿತ್ರದಲ್ಲಿ ನಟಿಸಲು ಒಪ್ಪಿದಾಗ ಲಾಭಾಂಶದಲ್ಲಿ ಶೇ.60 ರಷ್ಟು ಪಾಲನ್ನು ತಮಗೆ ನೀಡಬೇಕು ಎಂದು ʼಯಶ್‌ ರಾಜ್‌ ಫಿಲಂಸ್‌ʼ ಜೊತೆಗೆ ಕರಾರು ಮಾಡಿಕೊಂಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ಶಾರುಖ್‌ ಅವರ ಪಾಲನ್ನು ಹೊರತುಪಡಿಸಿ 133 ಕೋಟಿ ರೂಪಾಯಿ ನಿವ್ವಳ ಮೊತ್ತ ನಿರ್ಮಾಪಕರ ಕೈ ಸೇರಿದೆ.

c6d189e709d010a95cabcbe8c5246c21
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X