ಮತ್ತೆ ಸ್ಯಾಂಡಲ್‌ವುಡ್‌ನತ್ತ ಶಿಲ್ಪಾ ಶೆಟ್ಟಿ

Date:

  • ಜೋಗಿ ಪ್ರೇಮ್ ಮತ್ತು ಧ್ರುವ ಸರ್ಜಾ ಕಾಂಬಿನೇಶನ್‌‌ನಲ್ಲಿ ಬರುತ್ತಿರುವ ʼಕೇಡಿʼ
  • ಸಾಮಾಜಿಕ ಮಾಧ್ಯಮದಲ್ಲಿ ಶಿಲ್ಪಾ ಶೆಟ್ಟಿ ಪಾತ್ರದ ಫಸ್ಟ್‌‌ಲುಕ್ ಪೋಸ್ಟರ್ ಬಿಡುಗಡೆ

ಬಾಲಿವುಡ್‌ನ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಬರೋಬ್ಬರಿ ಎರಡು ದಶಕಗಳ ಬಳಿಕ ಸ್ಯಾಂಡಲ್‌ವುಡ್‌ನತ್ತ ಮುಖ ಮಾಡಿದ್ದಾರೆ. ಜೋಗಿ ಪ್ರೇಮ್ ಮತ್ತು ಧ್ರುವ ಸರ್ಜಾ ಕಾಂಬಿನೇಶನ್‌‌ನಲ್ಲಿ ಮೂಡಿ ಬರುತ್ತಿರುವ ʼಕೇಡಿʼ ಚಿತ್ರದಲ್ಲಿ ಶಿಲ್ಪಾ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಯುಗಾದಿ ಹಬ್ಬದ ಪ್ರಯುಕ್ತ ಬುಧವಾರ ತಮ್ಮ ಟ್ವಿಟರ್ ಖಾತೆಯಲ್ಲಿ ಶಿಲ್ಪಾ ಶೆಟ್ಟಿಯವರ ಪಾತ್ರದ ಫಸ್ಟ್‌‌ಲುಕ್ ಪೋಸ್ಟರ್ ಬಿಡುಗಡೆ ಮಾಡಿರುವ ಪ್ರೇಮ್, ಸ್ಟಾರ್ ನಟಿಗೆ ಸ್ವಾಗತ ಕೋರಿದ್ದಾರೆ. ಚಿತ್ರದಲ್ಲಿ ಶಿಲ್ಪಾ ಶೆಟ್ಟಿ, ʼಸತ್ಯವತಿʼ ಎಂಬ ಪಾತ್ರದಲ್ಲಿ ನಟಿಸಲಿದ್ದಾರೆ. ‘ಕೆಜಿಎಫ್’ ಚಿತ್ರದ ಮೂಲಕ ರವೀನಾ ಟಂಡನ್ ಸ್ಯಾಂಡಲ್‌‌ವುಡ್ ಪ್ರವೇಶಿಸಿದ್ದರು. ಅದೇ ರೀತಿ ಇದೀಗ ‘ಕೇಡಿ’ ಚಿತ್ರದಲ್ಲಿ ʼಸತ್ಯವತಿʼಯಾಗುವ ಮೂಲಕ ಶಿಲ್ಪಾ ಶೆಟ್ಟಿ ಮತ್ತೆ ಕನ್ನಡ ಚಿತ್ರರಂಗದತ್ತ ಮುಖ ಮಾಡಿದ್ದಾರೆ.

1998ರಲ್ಲಿ ರವಿಚಂದ್ರನ್ ಮುಖ್ಯಭೂಮಿಕೆಯಲ್ಲಿ‌ ತೆರೆಕಂಡಿದ್ದ ‘ಪ್ರೀತ್ಸೋದ್ ತಪ್ಪಾ’ ಚಿತ್ರದಲ್ಲಿ ನಾಯಕಿಯ ಪಾತ್ರದಲ್ಲಿ ನಟಿಸುವ ಮೂಲಕ ಶಿಲ್ಪಾ ಶೆಟ್ಟಿ ಮೊದಲ ಬಾರಿಗೆ ಕನ್ನಡ ಚಿತ್ರರಂಗ ಪ್ರವೇಶಿಸಿದ್ದರು. ಇದೀಗ ‘ಕೇಡಿ’ ಚಿತ್ರದಲ್ಲಿ ರವಿಚಂದ್ರನ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹೀಗಾಗಿ ಶಿಲ್ಪಾ ಶೆಟ್ಟಿ ಮತ್ತೆ ರವಿಚಂದ್ರನ್‌ಗೆ ಜೋಡಿಯಾಗಲಿದ್ದಾರೆಯೇ ಎಂಬ ಮಾತುಗಳು‌ ಕೂಡ ಕೇಳಿ ಬರುತ್ತಿವೆ.

ʼಕೆವಿಎನ್‌ ಪ್ರೊಡಕ್ಷನ್ಸ್‌ʼ ಬ್ಯಾನರ್‌ನಡಿ ನಿರ್ಮಾಣವಾಗುತ್ತಿರುವ ʼಕೇಡಿʼ ಸಿನಿಮಾದ ಚಿತ್ರೀಕರಣ ಕಳೆದ ಫೆಬ್ರವರಿಯಲ್ಲಿ ಆರಂಭವಾಗಿದೆ. ಕ್ರೈಂ, ಆ್ಯಕ್ಷನ್ ಡ್ರಾಮಾ ಕಥಾಹಂದರವುಳ್ಳ ಈ ಚಿತ್ರದ ಟೈಟಲ್ ಟೀಸರ್ ಕೂಡ ಸಿನಿ ಪ್ರೇಕ್ಷಕರ ಗಮನ ಸೆಳೆದಿತ್ತು. ಬಾಲಿವುಡ್‌ನ ಖ್ಯಾತ ನಟ ಸಂಜಯ್ ದತ್ ಕೂಡ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದು, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯಾ ಸಂಗೀತ ಸಂಯೋಜನೆಯ ಹೊಣೆ ಹೊತ್ತುಕೊಂಡಿದ್ದಾರೆ.

Sanket
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರಿನೊಳಗೆ ಶವವಾಗಿ ಪತ್ತೆಯಾದ ಮಲಯಾಳಂ ನಟ ವಿನೋದ್ ಥಾಮಸ್

ಮಲಯಾಳಂ ನಟ ವಿನೋದ್ ಥಾಮಸ್ ಕೇರಳದ ಕೊಟ್ಟಾಯಂನ ಪಂಪಾಡಿ ಬಳಿಯ ಹೋಟೆಲ್‌ನಲ್ಲಿ...

ತೆಲಂಗಾಣ ಚುನಾವಣಾ ಹೊಸ್ತಿಲಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿದ ವಿಜಯಶಾಂತಿ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಬಹುಭಾಷಾ ನಟಿ ಹಾಗೂ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ವಿಜಯಶಾಂತಿ ಅವರು...

ಮೊದಲು ಹೊಡೆದು ನಂತರ ಕ್ಷಮೆ ಕೇಳಿದ ನಟ ನಾನಾ ಪಾಟೇಕರ್: ವಿಡಿಯೋ ವೈರಲ್

ಸದಾ ಒಂದಿಲ್ಲೊಂದು ಸುದ್ದಿಯಲ್ಲಿರುವ ಬಾಲಿವುಡ್ ಹಿರಿಯ ನಟ-ನಿರ್ದೇಶಕ ನಾನಾ ಪಾಟೇಕರ್ ಇದೀಗ...

ಬಿಗ್‌ಬಾಸ್ ಶೋನಲ್ಲಿ ಭೋವಿ ಜನಾಂಗಕ್ಕೆ ಅವಹೇಳನ ಆರೋಪ: ಸ್ಪರ್ಧಿ ತನಿಷಾ ವಿರುದ್ಧ ಎಫ್‌ಐಆರ್

ಇತ್ತೀಚೆಗಷ್ಟೇ ಕನ್ನಡದ 'ಬಿಗ್‌ಬಾಸ್ ರಿಯಾಲಿಟಿ ಶೋ'ನಲ್ಲಿ ಸ್ಪರ್ಧಾಳುವಾಗಿದ್ದ ವರ್ತೂರು ಸಂತೋಷ್ ಹುಲಿ...